Dharawad: ಅರವಿಂದ್ ಬೆಲ್ಲದ್, ಅಮೃತ ದೇಸಾಯಿ‌ ನಾಮಪತ್ರ ಸಲ್ಲಿಕೆ… Prahlad Joshi ಸಾಥ್‌


Team Udayavani, Apr 18, 2023, 7:38 PM IST

Dharawada ದಲ್ಲಿ ಅರವಿಂದ್ ಬೆಲ್ಲದ್, ಅಮೃತ ದೇಸಾಯಿ‌ ನಾಮಪತ್ರ ಸಲ್ಲಿಕೆ

ಧಾರವಾಡ : ಹು-ಧಾ ಪಶ್ಚಿಮ- 74 ವಿಧಾನಸಭಾ ಮತಕ್ಷೇತ್ರ ಹಾಗೂ ಧಾರವಾಡ ಗ್ರಾಮೀಣ – 71 ರ ವಿಧಾನಸಭಾ ಮತಕ್ಷೇತ್ರಕ್ಕೆ ಹಾಲಿ ಶಾಸಕರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಾಥ್‌ನೊಂದಿಗೆ ಬೃಹತ್ ರ್‍ಯಾಲಿ ಕೈಗೊಂಡು, ಮಂಗಳವಾರ ನಾಮಪತ್ರ ಸಲ್ಲಿಸಿದರು.

ಇಲ್ಲಿಯ ಸುಭಾಷ ರಸ್ತೆಯಲ್ಲಿರುವ ಬಿಜೆಪಿ ಕಚೇರಿಯಿಂದ ತೆರೆದ ವಾಹನದ ಮೂಲಕ ಅದ್ಧೂರಿ ಮೆರವಣಿಗೆ ಮಾಡಿದ ಶಾಸಕ ಅರವಿಂದ ಬೆಲ್ಲದ ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ವಿವಿಧ ಮುಖಂಡರು ಸಾಥ್ ನೀಡಿದರು.ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅರವಿಂದ ಬೆಲ್ಲದ ಅವರಿಗೆ ಜಯಘೋಷ ಹಾಕಿದರು. ಬೃಹತ್ ಮೆರವಣಿಗೆಯು ಸುಭಾಷ ರಸ್ತೆಯ ಮೂಲಕ ಹಾದು ಧಾರವಾಡದ ಮಹಾನಗರ ಪಾಲಿಕೆ ಕಚೇರಿಗೆ ಬಂದು ತಲುಪಿತು. ಅಲ್ಲಿಂದ ನೇರವಾಗಿ ಶಾಸಕ ಅರವಿಂದ ಬೆಲ್ಲದ ಅವರು, ತಮ್ಮ ಪತ್ನಿ, ಪುತ್ರ ಹಾಗೂ ಸೂಚಕರೊಂದಿಗೆ ಚುನಾವಣಾಧಿಕಾರಿಯವರ ಕಚೇರಿಗೆ ತೆರಳಿ ಮೂರು ಪ್ರತಿಗಳಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿಪಾಲಿಕೆ ಸದಸ್ಯರಾದ ಶಿವು ಹಿರೇಮಠ, ವಿಜಯಾನಂದ ಶೆಟ್ಟಿ, ಶಂಕರ ಶೇಳಕೆ, ವಕೀಲ ಅರುಣ ಜೋಶಿ, ಜಿಲ್ಲಾಧ್ಯಕ್ಷ ಸಂಜಯ ಕಪಟಕರ ಸೇರಿದಂತೆ ಹಲವರು ಇದ್ದರು.

ದೇಸಾಯಿ ನಾಮಪತ್ರ : ಧಾರವಾಡ ಗ್ರಾಮೀಣ- 71ರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಶಾಸಕ ಅಮೃತ ದೇಸಾಯಿ ಅವರು ಬೃಹತ್ ಶಕ್ತಿ ಪ್ರದರ್ಶನದೊಂದಿಗೆ ಮಂಗಳವಾರ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು.

ನಗರದ ಶಿವಾಜಿ ವೃತ್ತದ ಶಿವಾಜಿ ಮೂರ್ತಿಗೆ ಮಾಲಾರ್ಪಣೆ ಮಾಡಿದ ಅಮೃತ ದೇಸಾಯಿ ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕೂಡ ಸಾಥ್ ನೀಡಿದರು. ಧಾರವಾಡದ ಪ್ರಮುಖ ರಸ್ತೆಗಳು ಅಕ್ಷರಶ: ಕೇಸರಿಮಯವಾಗಿದ್ದವು. ಅಮೃತ ದೇಸಾಯಿ ಅವರೊಂದಿಗೆ ತೆರೆದ ವಾಹನದಲ್ಲಿ ಅವರ ಪತ್ನಿ ಪ್ರಿಯಾ ದೇಸಾಯಿ, ಅಶೋಕ ದೇಸಾಯಿ, ಗುರುನಾಥಗೌಡ ಗೌಡರ ಸೇರಿದಂತೆ ಅನೇಕ ಮುಖಂಡರು ಸಾಥ್ ನೀಡಿದರು.

ಶಿವಾಜಿ ವೃತ್ತದಲ್ಲಿ ತೆರೆದ ವಾಹನದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಜ್ಯದಲ್ಲಿ ಎಲ್ಲ ಬಗೆಯ ಜನರಿಗೆ ಮೀಸಲಾತಿ ಹಾಗೂ ಸೌಕರ್ಯಗಳನ್ನು ಕೊಟ್ಟಿರುವುದು ಬಿಜೆಪಿ ಸರ್ಕಾರ. ಬಿಜೆಪಿ ಮತ್ತೆ ಗೆಲ್ಲುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಬಸವರಾಜ ಕುಂದಗೋಳಮಠ, ಮುಖಂಡರಾದ ಸಂಗನಗೌಡ ರಾಮನಗೌಡರ, ಗುರುನಾಥಗೌಡ ಗೌಡರ, ಅಶೋಕ ದೇಸಾಯಿ, ಪಾಲಿಕೆ ಸದಸ್ಯ ನಿತೀನ್ ಇಂಡಿ, ಸವಿತಾ ಅಮರಶೆಟ್ಟಿ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

ಬಿಜೆಪಿ ಹು-ಧಾ ಪಶ್ಚಿಮ ಕ್ಷೇತ್ರದ ಆಕಾಂಕ್ಷಿಯಾಗಿದ್ದ ಈರೇಶ ಅಂಟಗೇರಿ ಅವರಿಗೆ ಟಿಕೇಟ್ ಸಿಕ್ಕದೇ ಹೋಗಿದ್ದಕ್ಕೆ ಮುನಿಸು ಮುಂದುವರೆದಿದೆ. ಕೇಂದ್ರ ಸಚಿವ ಜೋಶಿ ಅವರ ಬಗಲೈ ಬಂಟನಂತಿರುವ ಈರೇಶ ಅವರು ಮಂಗಳವಾರ ಅರವಿಂದ ಬೆಲ್ಲದ್ ಅವರೊಂದಿಗೆ ಕಾಣಿಸಿಕೊಳ್ಳಲಿಲ್ಲ. ತಮಗೆ ಟಿಕೇಟ್ ಸಿಕ್ಕದೇ ಹೋಗಿದ್ದಕ್ಕೆ ತಾವು ಚುನಾವಣೆ ರಾಜಕೀಯದಿಂದ ದೂರ ಇರುವುದಾಗಿ ಈರೇಶ ಅಂಚಟಗೇರಿ ಹೇಳಿದ್ದಾರೆ.

ಟಾಪ್ ನ್ಯೂಸ್

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.