ರಾಷ್ಟ್ರೀಯ ಕ್ವಾಂಟಂ ಮಿಷನ್‌ಗೆ ಅನುಮೋದನೆ


Team Udayavani, Apr 20, 2023, 7:00 AM IST

ರಾಷ್ಟ್ರೀಯ ಕ್ವಾಂಟಂ ಮಿಷನ್‌ಗೆ ಅನುಮೋದನೆ

ಹೊಸದಿಲ್ಲಿ: ವೈಜ್ಞಾನಿಕ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಸಂಶೋಧನೆ ನಡೆಸುವ ನಿಟ್ಟಿನಲ್ಲಿ ಅನುಕೂಲವಾಗುವಂತೆ ಕೇಂದ್ರ ಸಂಪುಟ ಸಭೆ ರಾಷ್ಟ್ರೀಯ ಕ್ವಾಂಟಂ ಮಿಷನ್‌ (ಎನ್‌ಕ್ಯೂಎಂ)ಗೆ ಬುಧವಾರ ಅನುಮೋದನೆ ನೀಡಿದೆ.

2023-24ನೇ ಸಾಲಿನಿಂದ 2030-31ನೇ ಸಾಲಿನ ವರೆಗೆ 6,003. 65 ಕೋಟಿ ರೂ. ಮೊತ್ತವನ್ನು ಮೀಸಲಾಗಿ ಇರಿಸಲು ತೀರ್ಮಾನಿಸಲಾಗಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ| ಜಿತೇಂದ್ರ ಸಿಂಗ್‌ ತಿಳಿಸಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಈಗಾಗಲೇ ಅಮೆರಿಕ, ಆಸ್ಟ್ರಿಯಾ, ಫಿನ್‌ ಲ್ಯಾಂಡ್, ಫ್ರಾನ್ಸ್‌, ಕೆನಡಾ ಮತ್ತು ಚೀನಗಳಲ್ಲಿ ಈ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗಿದೆ. ಭಾರತ ಇಂಥ ತಂತ್ರಜ್ಞಾನ ಅಳವಡಿಸಿಕೊಳ್ಳಲಿರುವ 7ನೇ ದೇಶವಾಗಲಿದೆ.

ಹೊಸ ತಂತ್ರಜ್ಞಾನದಿಂದಾಗಿ ಅಟಾಮಿಕ್‌ ವ್ಯವಸ್ಥೆಯಲ್ಲಿ ಅತ್ಯಂತ ಹೆಚ್ಚು ಶಕ್ತಿಶಾಲಿಯಾಗಿರುವ ಕಾಂತೀಯ ಕ್ಷೇತ್ರಗಳನ್ನು ಗುರುತಿಸಲು ಸುಲಭ ಸಾಧ್ಯವಾಗಲಿದೆ. ಜತೆಗೆ ಮುಂದಿನ ಎಂಟು ವರ್ಷಗಳಲ್ಲಿ ಫೋಟೋನಿಕ್‌ ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಲು ಅನುಕೂಲವಾಗಲಿದೆ. ದೇಶದಲ್ಲಿ ಉಪಗ್ರಹ ಆಧಾರಿತ 2 ಸಾವಿರ ಕಿ.ಮೀ. ಕ್ವಾಂಟಮ್‌ ಸಂಪರ್ಕ ವ್ಯವಸ್ಥೆಯನ್ನೂ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಏನಿದು ಕ್ವಾಂಟಂ ಟೆಕ್ನಾಲಜಿ?
ಕಂಪ್ಯೂಟರ್‌ ವಿಜ್ಞಾನ ಕ್ಷೇತ್ರದ ಹೊಸ ತಂತ್ರಜ್ಞಾನ. ಇಂಧನ ಮತ್ತು ಅಟಾಮಿಕ್‌ ಕ್ಷೇತ್ರಗಳಲ್ಲಿ ವಿಶೇಷವಾಗಿ ಬಳಕೆ ಮಾಡಲಾಗುತ್ತದೆ.

ಟಾಪ್ ನ್ಯೂಸ್

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.