ಸಿದ್ದು ಸವದಿ ನಾಮಪತ್ರ ಸಲ್ಲಿಕೆ: ರಬಕವಿ-ಬನಹಟ್ಟಿಗೆ ಹರಿದು ಬಂದ ಜನಸಾಗರ


Team Udayavani, Apr 20, 2023, 8:31 PM IST

ಸಿದ್ದು ಸವದಿ ನಾಮಪತ್ರ ಸಲ್ಲಿಕೆ: ರಬಕವಿ-ಬನಹಟ್ಟಿಗೆ ಹರಿದು ಬಂದ ಜನಸಾಗರ

ರಬಕವಿ-ಬನಹಟ್ಟಿ: ತೇರದಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಸಿದ್ದು ಸವದಿ ಅವರು ನಾಮಪತ್ರ ಸಲ್ಲಿಸುವದಕ್ಕೂ ಮೊದಲು ಮುಂಜಾನೆ ರಬಕವಿಯ ಬಸ್ ನಿಲ್ದಾಣದಿಂದ ಸುಮಾರು ೨ ಕಿ.ಮೀನಷ್ಟು ಅದ್ದೂರಿ ರೋಡ್ ಶೋ ನಡೆಸಿ ಎತ್ತಿನ ಬಂಡಿಯ ಮೂಲಕ ಸಾವಿರಾರು ಕಾರ್ಯಕರ್ತರೊಂದಿಗೆ ರಬಕವಿ-ಬನಹಟ್ಟಿ ತಹಶೀಲ್ದಾರ ಕಛೇರಿಯಲ್ಲಿನ ಚುನಾವಣೆ ಕಾರ್ಯಾಲಯಕ್ಕೆ ಆಗಮಿಸಿ ಚುನಾವಣಾಧಿಕಾರಿ ಡಾ. ಶಶಿಧರ ನಾಡಗೌಡ ಅವರಿಗೆ ನಾಮಪತ್ರ ಸಲ್ಲಿಸಿದರು.

ನಾಮ ಪತ್ರ ಸಲ್ಲಕೆಯ ನಿಮಿತ್ತ ಗುರುವಾರ ಬೆಳಿಗ್ಗೆ ಕಾಡಸಿದ್ಧೇಶ್ವರ, ಮಲ್ಲಿಕಾರ್ಜುನ ದೇವರು ಸೇರಿದಂತೆ ವಿವಿಧ ದೇವಸ್ಥಾನಗಳಿಗೆ ಪೂಜೆಗೈದು ರಬಕವಿಯ ಬಸ್ ನಿಲ್ದಾಣದಿಂದ ಬೃಹತ್ ಮೆರವಣಿಗೆ ಮೂಲಕ ದಾನಮ್ಮದೇವಿ ದೇವಸ್ಥಾನ, ಹಳೇ ಬಸ್ ನಿಲ್ದಾಣ, ಶಂಕರಲಿಂಗ ದೇವಸ್ಥಾನ, ಶ್ರೀನಿವಾಸ ಚಿತ್ರ ಮಂದಿರ, ರಾಮಪುರ ರಾಮದೇವರ ಮಂದಿರ, ನಗರಸಭೆ ಕಾರ್ಯಾಲಯ, ಪೊಲಿಸ್ ಠಾಣೆ ಮಾರ್ಗವಾಗಿ ರೋಡ್ ಶೋ ಮೂಲಕ ಚುನಾವಣೆ ಅಧಿಕಾರಿಗಳಿಗೆ ತಮ್ಮ ನಾಮ ಪತ್ರ ಸಲ್ಲಿಸಿದರು.

ಮೆರವಣಿಗೆಯಲ್ಲಿ ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ಸಿದ್ದು ಸವದಿ ಎತ್ತಿನ ಬಂಡಿ ಮೂಲಕ ರೋಡ್ ಶೋ ನಡೆಸಿ ಮತದಾರರತ್ತ ಕೈ ಬೀಸಿದರು. ಇಪ್ಪತ್ತೈದು ಸಾವಿರಕ್ಕೂ ಹೆಚ್ಚು ಜನರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಮೆರವಣಿಗೆಯಲ್ಲಿ ಭಾಗವಹಿಸಿದ್ದ ಜನರು ಬಿಸಿಲಿನ ತಾಪಕ್ಕೆ ಬಸವಳಿದರು. ಗಿಡಮರ ಮತ್ತು ಕಟ್ಟಡಗಳ ನೆರಳಿನಲ್ಲಿ ಜನರು ತಂಡತಂಡವಾಗಿ ನಿಂತಿದ್ದರು. ಸಂಘಟಕರು ಸಾಕಷ್ಟು ನೀರಿನ ಸೌಲಭ್ಯ ಒದಗಿಸಿದ್ದರು. ಸ್ಥಳೀಯ ಪೊಲೀಸ್ ವೃತ್ತದ ಬಳಿಯಿರುವ ಸುತ್ತ ಮುತ್ತಲಿನ ಅಂಗಡಿಗಳಲ್ಲಿ ನೀರಿನ ಬಾಟಲಗಳು, ತಂಪು ಪಾನೀಯಗಳಿಗೆ ಭಾರಿ ಬೇಡಿಕೆ ಇತ್ತು. ಕಬ್ಜಿನ ಹಾಲಿನ ಮಾರಾಟ ಜೋರಾಗಿತ್ತು.

ಈ ಸಂದರ್ಭದಲ್ಲಿ ಸಂಸದ ಕೆ. ನಾರಾಯಣಸ್ವಾಮಿ, ಧರೆಪ್ಪ ಉಳ್ಳಾಗಡ್ಡಿ, ನಾಡೋಜ ಜಗದೀಶ ಗುಡಗುಂಟಿ, ಬಸವರಾಜ ಕೊಣ್ಣೂರ, ಬಸನಗೌಡ ಪಾಟೀಲ, ಗಣಪತರಾವ ಹಜಾರೆ, ಶ್ರೀಶೈಲ ಬೀಳಗಿ, ಪುಂಡಲಿಕ ಪಾಲಬಾಂವಿ, ಸುರೇಶ ಅಕ್ಕಿವಾಟ, ಆನಂದ ಕಂಪು, ಲಕ್ಕಪ್ಪ ಪಾಟೀಲ, ಸಂಜಯ ತೆಗ್ಗಿ, ಅಶೋಕ ರಾವಳ, ಮೋಹನ ಜಾಧವ, ಜಿ. ಎಸ್. ನ್ಯಾಮಗೌಡ, ಮಹಾಂತೇಶ ಹಿಟ್ಟನಮಠ, ಡಾ.ಎಸ್.ಎಸ್.ಹೂಲಿ, ದುಂಡಪ್ಪ ಮಾಚಕನೂರ, ಸಿದ್ದನಗೌಡ ಪಾಟೀಲ, ಬಸವರಾಜ ತೆಗ್ಗಿ, ಸುರೇಶ ಚಿಂಡಕ, ಬಾಬಾಗೌಡ ಪಾಟೀಲ, ಜಿ.ಎಸ್.ಗೊಂಬಿ, ಪ್ರಭಾಕರ ಮೊಳೇದ, ಶಿವಾನಂದ ಬುದ್ನಿ, ಗಟ್ಟು ಮಾಲಪಾಣಿ, ಶ್ರೀಶೈಲ ಯಾದವಾಡ, ಶಿವಾನಂದ ಕಾಗಿ, ಈಶ್ವರ ಪಾಟೀಲ, ವರ್ಧಮಾನ ಕೋರಿ, ಅಶೋಕ ರಾವಳ, ಈರಣ್ಣ ಚಿಂಚಖಂಡಿ, ಶಿವು ಗುಂಡಿ, ಭೀಮಶಿ ಪಾಟೀಲ, ಆನಂದ ಬಾಡಗಂಡಿ, ಶ್ರೀಶೈಲ ಗಸ್ತಿ, ಸದಾಶಿವ ಪರೀಟ, ಶ್ರೀಶೈಲ ಬೀಳಗಿ, ಶಂಕರ ಅಂಗಡಿ, ಗೋವಿಂದ ಡಾಗಾ, ಬಾಳಯ್ಯ ಪೂಜಾರಿ, ಚಿದಾನಂದ ಹೊರಟ್ಟಿ, ಲಿಂಗರಾಜ ನಾಯಕ, ಸದಾಶಿವ ದೆಸಟ್ಟಿ, ಪ್ರವೀಣ ಧಬಾಡಿ, ಮಲ್ಲು ಬೀಳಗಿ, ಜಯವಂತ ಹಳ್ಯಾಳ, ಶ್ರೀಧರ ಸುಣಧೋಳಿಮಠ, ರವಿ ದೇವಾಡಿಗ ಸೇರಿದಂತೆ ಅನೇಕರು ಇದ್ದರು.

ಇದನ್ನೂ ಓದಿ: Gangavati: ನಿಯಮ ಉಲ್ಲಂಘಿಸಿದ ರಸಗೊಬ್ಬರ ಅಂಗಡಿಗಳ ಪರವಾನಿಗೆ ರದ್ದು

ಟಾಪ್ ನ್ಯೂಸ್

BJP will get a big win in South India: Amit Shah

Election; ದಕ್ಷಿಣ ಭಾರತದಲ್ಲಿ ಬಿಜೆಪಿಗೆ ದೊಡ್ಡ ಗೆಲುವು ಸಿಗಲಿದೆ: ಅಮಿತ್ ಶಾ ವಿಶ್ವಾಸ

CM ಹುದ್ದೆಯಿಂದ ಕೇಜ್ರಿವಾಲ್‌ ವಜಾಗೊಳಿಸಿ: ಪಿಐಎಲ್‌ ವಜಾಗೊಳಿಸಿದ ಸುಪ್ರೀಂಕೋರ್ಟ್

CM ಹುದ್ದೆಯಿಂದ ಕೇಜ್ರಿವಾಲ್‌ ವಜಾಗೊಳಿಸಿ: ಪಿಐಎಲ್‌ ವಜಾಗೊಳಿಸಿದ ಸುಪ್ರೀಂಕೋರ್ಟ್

Video: ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಶಾಸಕನಿಂದ ಕಪಾಳಮೋಕ್ಷ

Video: ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಶಾಸಕನಿಂದ ಕಪಾಳಮೋಕ್ಷ

8

Marathi TV actor: ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಖ್ಯಾತ ಹಿರಿಯ ನಟ

BOULT BassBox X120

Smart Home Audio; ಸೌಂಡ್ ಬಾರ್ ಕ್ಷೇತ್ರಕ್ಕೆ ಕಾಲಿಟ್ಟ BOULT: ಎರಡು ಸೌಂಡ್ ಬಾರ್ ಬಿಡುಗಡೆ

7

Bigg Boss OTT 3: ಈ ಬಾರಿ ಸಲ್ಮಾನ್‌ ಖಾನ್ ಅನುಮಾನ; ಬೇರೆ ನಿರೂಪಕರತ್ತ ಆಯೋಜಕರ ಚಿತ್ತ

Old Is Gold; ರೀ ರಿಲೀಸ್‌ನತ್ತ ಸ್ಟಾರ್‌ ಸಿನಿಮಾಗಳು

Old Is Gold; ರೀ ರಿಲೀಸ್‌ನತ್ತ ಸ್ಟಾರ್‌ ಸಿನಿಮಾಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಸಣ್ಣಕೇರಿಯ ದೊಡ್ಡ‌ಕೆರೆಗೆ‌ ಕಾಯಕಲ್ಪ… ಕೆರೆ ಅಭಿವೃದ್ಧಿಗೆ ಚಾಲನೆ

Sirsi: ಕೆರೆ ಅಭಿವೃದ್ದಿ ಮಾಡಿದರೆ ಮಾತ್ರ ಜಲ ಸಂರಕ್ಷಣೆ ಸಾಧ್ಯ… :ಶ್ರೀನಿವಾಸ ಹೆಬ್ಬಾರ್

Shivamogga: ಪೊಲೀಸರ ಮೇಲೆ ಹಲ್ಲೆ ಯತ್ನ… ರೌಡಿ ಶೀಟರ್ ಶೋಹಿಬ್ ಕಾಲಿಗೆ ಗುಂಡೇಟು

Shivamogga: ಪೊಲೀಸರ ಮೇಲೆ ಹಲ್ಲೆ ಯತ್ನ… ರೌಡಿ ಶೀಟರ್ ಶೋಹಿಬ್ ಕಾಲಿಗೆ ಗುಂಡೇಟು

ಆನೆ ಕಂಡು ಚರಂಡಿಗೆ ಇಳಿದ ಬೊಲೇರೋ… ರಸ್ತೆ ಕಾಣದೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಟಿಟಿ

ಆನೆ ಕಂಡು ಚರಂಡಿಗೆ ಇಳಿದ ಬೊಲೆರೋ… ರಸ್ತೆ ಕಾಣದೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಟಿಟಿ

Legislative Council Elections: ಬಿಜೆಪಿ-ಜೆಡಿಎಸ್‌ ಮೈತ್ರಿ 5:1 ಅಲ್ಲ, 4:2

Legislative Council Elections: ಬಿಜೆಪಿ-ಜೆಡಿಎಸ್‌ ಮೈತ್ರಿ 5:1 ಅಲ್ಲ, 4:2

Prajwal Revanna ವಿಮಾನ ಟಿಕೆಟ್‌ ರದ್ದು; ಸಂಸದನ ನಡೆ ಕುತೂಹಲ, ಸಿಗದ ಸುಳಿವು

Prajwal Revanna ವಿಮಾನ ಟಿಕೆಟ್‌ ರದ್ದು; ಸಂಸದನ ನಡೆ ಕುತೂಹಲ, ಸಿಗದ ಸುಳಿವು

MUST WATCH

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

ಹೊಸ ಸೇರ್ಪಡೆ

Roopesh shetty’s adhipatra movie

Roopesh Shetty ‘ಅಧಿಪತ್ರ’ದಲ್ಲಿ ಕರಾವಳಿ ಸೊಗಡು

Violinist Ganga shashidharan event in Udupi

Ganga Shashidharan: ಉಡುಪಿಯಲ್ಲಿ ಖ್ಯಾತ ವಯೊಲಿನ್ ವಾದಕಿ ಗಂಗಾ ಶಶಿಧರನ್​

BJP will get a big win in South India: Amit Shah

Election; ದಕ್ಷಿಣ ಭಾರತದಲ್ಲಿ ಬಿಜೆಪಿಗೆ ದೊಡ್ಡ ಗೆಲುವು ಸಿಗಲಿದೆ: ಅಮಿತ್ ಶಾ ವಿಶ್ವಾಸ

Bomb threat: ನಗರದ ಪ್ರತಿಷ್ಠಿತ 6 ಆಸ್ಪತ್ರೆಗಳಿಗೆ ಇ-ಮೇಲ್‌ ಬಾಂಬ್‌ ಬೆದರಿಕೆ

Bomb threat: ನಗರದ ಪ್ರತಿಷ್ಠಿತ 6 ಆಸ್ಪತ್ರೆಗಳಿಗೆ ಇ-ಮೇಲ್‌ ಬಾಂಬ್‌ ಬೆದರಿಕೆ

Harassment: ಸಹೋದ್ಯೋಗಿ ಯುವತಿ ಮೇಲೆ ಲೈಂಗಿಕ ಕಿರುಕುಳ ಆರೋಪ; ಕೇಸ್‌

Harassment: ಸಹೋದ್ಯೋಗಿ ಯುವತಿ ಮೇಲೆ ಲೈಂಗಿಕ ಕಿರುಕುಳ ಆರೋಪ; ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.