ಮುಂದುವರಿದ ಆನ್‌ಲೈನ್‌ ವಂಚನೆ ಪ್ರಕರಣ: ಲಕ್ಷಾಂತರ ರೂ. ವಂಚನೆ


Team Udayavani, Apr 21, 2023, 6:35 AM IST

ಮುಂದುವರಿದ ಆನ್‌ಲೈನ್‌ ವಂಚನೆ ಪ್ರಕರಣ: ಲಕ್ಷಾಂತರ ರೂ. ವಂಚನೆ

ಇನ್‌ಸ್ಟಾಗ್ರಾಂ ಖಾತೆ ಹ್ಯಾಕ್‌
ಮಂಗಳೂರು: ಇನ್‌ಸ್ಟಾಗ್ರಾಂ ಖಾತೆಯ ಮೂಲಕ 90 ಸಾವಿರ ರೂ. ವಂಚನೆ ಮಾಡಿರುವ ಕುರಿತಂತೆ ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರು ಎ. 11ರಂದು ರಾತ್ರಿ ಇನ್‌ಸ್ಟಾ ಗ್ರಾಂ ಖಾತೆಯನ್ನು ನೋಡುತ್ತಿರುವ ಸಮಯ ಅವರ ಗೆಳೆಯನ ಖಾತೆಯಿಂದ “ರಿಸಿವ್ಡ್ ರುಪೀಸ್‌ 4,16,000 ಇನ್‌ ಯುವರ್‌ ಇನ್‌ಸ್ಟಾಗ್ರಾಂ ವಾಲೆಟ್‌’ ಎಂಬ ಪೋಸ್ಟ್‌ ಬಂದಿದೆ. ತತ್‌ಕ್ಷಣ ಅವರಿಗೆ “ಲಿಝಿ ಹೋಪರ್‌’ ಎನ್ನುವ ಖಾತೆಯಿಂದ ಸಂದೇಶಗಳು ಬರಲು ಆರಂಭಿಸಿದ್ದು, ಅದು ಗೆಳೆಯನ ಇನ್‌ಸ್ಟಾಗ್ರಾಂ ಖಾತೆ ಎಂದು ನಂಬಿ ಎ. 12ರಂದು 40,000 ರೂ. ಮತ್ತು 13ರಂದು ಕ್ಯಾಶ್‌ ವಿಡ್ರಾವಲ್‌ ಪಿನ್‌ ಫೀ ಎಂದು 50 ಸಾವಿರ ರೂ.ಯನ್ನು ವರ್ಗಾಯಿಸಿದ್ದಾರೆ. ಬಳಿಕ ಅದೇ ದಿನ ಇನ್ನೂ 70,000 ರೂ. ಹಣವನ್ನು ವರ್ಗಾಯಿಸಲು ತಿಳಿಸಿದ್ದು, ಈ ಬಗ್ಗೆ ಗೆಳೆಯನಿಗೆ ಕರೆ ಮಾಡಿದಾಗ ಆತ “ತನ್ನ ಖಾತೆಯು ಸುಮಾರು 6 ತಿಂಗಳಿನಿಂದ ಹ್ಯಾಕ್‌ ಆಗಿರುವುದಾಗಿ’ ತಿಳಿಸಿದ್ದಾನೆ.

ಯಾರೋ ಅಪರಿಚಿತರು ಪಿರ್ಯಾದಿದಾರರ ಗೆಳೆಯನ ಇನ್‌ಸ್ಟಾಗ್ರಾಂ ಖಾತೆಯನ್ನು ಹ್ಯಾಕ್‌ ಮಾಡಿ ಅದರಲ್ಲಿ ಬಿಟ್‌ಕಾಯಿನ್‌ ಜಾಹೀರಾತು ಕಳುಹಿಸಿ 90 ಸಾವಿರ ರೂ. ಮೋಸದಿಂದ ವರ್ಗಾಯಿಸಿಕೊಂಡಿದ್ದಾರೆ. ವಂಚಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಬ್ಯಾಂಕ್‌ನವರೆಂದು ಕರೆ
ಮಂಗಳೂರು: ಬ್ಯಾಂಕ್‌ನವರೆಂದು ಕರೆ ಮಾಡಿ ಎನಿ ಡೆಸ್ಕ್ ಆ್ಯಪ್‌ ಡೌನ್‌ಲೋಡ್‌ ಮಾಡಿಸಿ ವಂಚಿಸಿರುವ ಘಟನೆ ನಡೆದಿದೆ.

ದೂರುದಾರ ವ್ಯಕ್ತಿ ಕ್ರೆಡಿಟ್‌ ಕಾರ್ಡ್‌ ಹೊಂದಿದ್ದು ಜ. 31ರಂದು ಅವರು ಕ್ರೆಡಿಟ್‌ ಕಾರ್ಡ್‌ನ ಸ್ಟೇಟ್‌ಮೆಂಟ್‌ ಮಾಹಿತಿ ಪಡೆಯುವ ಉದ್ದೇಶದಿಂದ ಗೂಗಲ್‌ನಲ್ಲಿ ಕಸ್ಟಮರ್‌ ಕೇರ್‌ ನಂಬರ್‌ ಹುಡುಕಿದರು. ಆಗ ಅವರಿಗೆ 18601207777 ಮೊಬೈಲ್‌ ನಂಬರ್‌ ಸಿಕ್ಕಿತ್ತು. ಅವರು ಅದಕ್ಕೆ ಕರೆ ಮಾಡಿ ವಿಚಾರಿಸಿದ್ದರು. ಅನಂತರ ಅವರಿಗೆ ಅಪರಿಚಿತನೋರ್ವ 8910911818 ಸಂಖ್ಯೆಯಿಂದ ಕರೆ ಮಾಡಿ ತಾನು ಐಸಿಐಸಿಐ ಬ್ಯಾಂಕ್‌ನಿಂದ ಕರೆ ಮಾಡಿರುವುದಾಗಿ ತಿಳಿಸಿ ಕ್ರೆಡಿಟ್‌ ಕಾರ್ಡ್‌ನ ಮಾಹಿತಿ ಪಡೆಯಲು ಮೊಬೈಲ್‌ನಲ್ಲಿ Any Dessk ಅಟಟ ಡೌನ್‌ಲೋಡ್‌ ಮಾಡುವಂತೆ ತಿಳಿಸಿದ್ದ. ಅದನ್ನು ನಂಬಿದ ದೂರುದಾರರು ಡೌನ್‌ಲೋಡ್‌ ಮಾಡಿದರು. ಆ ಕೂಡಲೇ ಅವರ ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌ ಬಂದರು ಶಾಖೆಯ ಖಾತೆಯಿಂದ ಹಂತ ಹಂತವಾಗಿ ಒಟ್ಟು 83,999 ರೂ. ಹಣ ವರ್ಗಾವಣೆಗೊಂಡಿದೆ. ಈ ಬಗ್ಗೆ ಮಂಗಳೂರಿನ ಸೆನ್‌ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Modi insults Tamils ​​for votes: CM Stalin sparks

Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್‌ ಕಿಡಿ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

This time 2004 result will repeat: Jairam Ramesh

Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.