ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: UT Khader


Team Udayavani, Apr 21, 2023, 6:05 AM IST

ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: UT Khader

ಮಂಗಳೂರು: ರಾಜ್ಯದ ಜನತೆ ಪ್ರೀತಿ, ಸಹೋದರತೆ ಹಾಗೂ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಲಿದ್ದಾರೆ. ಈ ಮೂಲಕ ಜನವಿರೋಧಿ ಹಾಗೂ ತಾರತಮ್ಯದ ಬಿಜೆಪಿ ಸರಕಾರವನ್ನು ಕೆಳಗಿಳಿಸುವುದು ಕಾಂಗ್ರೆಸ್‌ ಸಂಕಲ್ಪ ಎಂದು ಶಾಸಕ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಯು.ಟಿ. ಖಾದರ್‌ ಅವರು ಹೇಳಿದರು.

ಮಂಗಳೂರು ವಿ.ಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆಗೂ ಮುನ್ನ ಉಳ್ಳಾಲಬೈಲ್‌ ಮೈದಾನದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮಂಗಳೂರು ಕ್ಷೇತ್ರಕ್ಕೆ ತುಂಬೆಯಿಂದ ಕುಡಿಯುವ ನೀರಿನ ಯೋಜನೆ ತಂದು ಪ್ರಥಮ ಹಂತದ ಅನುದಾನ ಬಿಡುಗಡೆ ಮಾಡಲಾಗಿತ್ತು. ಆದರೆ ಬಳಿಕ ನಾನು ಕಾಂಗ್ರೆಸ್‌ ಶಾಸಕ ಎಂಬ ಕಾರಣದಿಂದ ಎರಡನೇ ಹಂತ ಬಿಡುಗಡೆಗೆ ಬಿಜೆಪಿಯು ತಡೆ ನೀಡಿದೆ. ಮುಂದೆ ಕಾಂಗ್ರೆಸ್‌ ಸರಕಾರ ಬಂದು 6 ತಿಂಗಳೊಳಗೆ ಹಣ ಬಿಡುಗಡೆ ಮಾಡಿ ನೀರಿನ ಯೋಜನೆ ಅನುಷ್ಠಾನ ಮಾಡಲಾಗುವುದು. ಈ ಮೂಲಕ ನಗರ ಪ್ರದೇಶದಂತೆ ಗ್ರಾಮಾಂತರದಲ್ಲಿಯೂ 24 ಗಂಟೆ ಕುಡಿಯುವ ನೀರು ಒದಗಿಸಲಾಗುವುದು ಎಂದರು.

“ಎಸ್‌ಡಿಪಿಐಯಿಂದ ಬಿಜೆಪಿಗೆ ಜೀವ’
“ಬಿಜೆಪಿಯ ಆಯುಸ್ಸು ಕೇವಲ 22 ದಿನ ಮಾತ್ರ ಇದೆ. ಬಳಿಕ ಬಿಜೆಪಿ ಬದುಕಲು ಸಾಧ್ಯವಿಲ್ಲ. ಐಸಿಯುನಲ್ಲಿ ಬಿಜೆಪಿ ಇದೆ. ಇದನ್ನು ಬದುಕಿಸುವ ಕಾರ್ಯವನ್ನು ಎಸ್‌ಡಿಪಿಐ ನಡೆಸುತ್ತಿದೆ. ಬಿಜೆಪಿಯನ್ನು ಬದುಕಿಸಿ ಮತ್ತೆ ಸಮಸ್ಯೆ ಸೃಷ್ಟಿ ಮಾಡುವ ಕೆಲಸವನ್ನು ಎಸ್‌ಡಿಪಿಐ ಮಾಡುತ್ತಿದೆ. ಕಾಂಗ್ರೆಸ್‌ ಸೋಲಬೇಕು, ಬಿಜೆಪಿ ಗೆಲ್ಲಬೇಕು ಎಂಬ ಉದ್ದೇಶ ಎಸ್‌ಡಿಪಿಯದ್ದಾಗಿದೆ’ ಎಂದು ದೂರಿದರು.

ವಿಧಾನಪರಿಷತ್‌ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌, ವಿಧಾನ ಪರಿಷತ್‌ ಸದಸ್ಯರಾದ ಮಂಜುನಾಥ ಭಂಡಾರಿ, ಹರೀಶ್‌ ಕುಮಾರ್‌, ಮಾಜಿ ಸದಸ್ಯ ಐವನ್‌ ಡಿ’ಸೋಜಾ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಪ್ರಮುಖರಾದ ಕಣಚೂರು ಮೋನು, ಇಬ್ರಾಹಿಂ ಕೋಡಿಜಾಲ್‌, ಈಶ್ವರ ಉಳ್ಳಾಲ, ಹರ್ಷರಾಜ್‌ ಮುದ್ಯ, ಸದಾಶಿವ ಉಳ್ಳಾಲ, ಪ್ರಶಾಂತ್‌ ಕಾಜವ, ದಿನೇಶ್‌ ಕುಂಪಲ, ಸುರೇಶ್‌ ಭಟ್ನಗರ, ರಾಕೇಶ್‌ ಮಲ್ಲಿ, ದೇವದಾಸ್‌ ಭಂಡಾರಿ, ಪದ್ಮನಾಭ ನರಿಂಗಾನ, ಮಮತಾ ಡಿ.ಎಸ್‌. ಗಟ್ಟಿ, ಮಹಮ್ಮದ್‌ ಮೋನು, ಚಂದ್ರಹಾಸ ಆರ್‌.ಕರ್ಕೇರ, ಅಭಿಷೇಕ್‌ ಉಳ್ಳಾಲ, ಫಾರೂಕ್‌ ಉಳ್ಳಾಲ, ಚಂದ್ರಿಕಾ ರೈ, ವೃಂದಾ ಪೂಜಾರಿ, ದೀಪಕ್‌ ಪಿಲಾರ್‌, ಪುರುಷೋತ್ತಮ ಪಿಲಾರು, ಆಲ್ವಿನ್‌ ಡಿ’ಸೋಜಾ, ಮುಸ್ತಾಫ ಅಬ್ದುಲ್ಲಾ, ದಿನೇಶ್‌ ರೈ, ನಾಸಿರ್‌ ನಡುಪದವು, ಚಿತ್ರಕಲಾ ಚಂದ್ರಕಾಂತ್‌, ಆಯೂಬ್‌ ಮಂಚಿಲ, ಮನ್ಸೂರು, ಮೋಹನ್‌ ಸಾಲಿಯಾನ್‌ ಇನ್ನಿತರರು ಉಪಸ್ಥಿತರಿದ್ದರು.

ಉಳ್ಳಾಲದಲ್ಲಿ ಮಿನಿ ಬಂದರು
ಉಳ್ಳಾಲ ಕೋಟೆಪುರದಿಂದ ಬೋಳಾರದ ವರೆಗೆ ನೂತನವಾದ ಸೇತುವೆ ನಿರ್ಮಾಣ ಮಾಡ‌ಲಾಗುವುದು. ಬೋಟುಗಳ ತಂಗುದಾಣಕ್ಕಾಗಿ ಉಳ್ಳಾಲದಲ್ಲಿ ಮಿನಿ ಬಂದರು ನಿರ್ಮಿಸಲಾಗುವುದು ಎಂದು ಖಾದರ್‌ ಹೇಳಿದರು.

ಬೃಹತ್‌ ಮೆರವಣಿಗೆ-ಕಾರ್ಯಕರ್ತರ ಸಂಭ್ರಮ
ಉಳ್ಳಾಲಬೈಲ್‌ನಿಂದ ಉಳ್ಳಾಲದವರೆಗೆ ಮೆರವಣಿಗೆಯಲ್ಲಿ ಸಾಗಿ ಖಾದರ್‌ ನಾಮಪತ್ರ ಸಲ್ಲಿಸಿದರು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಸಾಕ್ಷಿಯಾದರು. ಇದಕ್ಕೂ ಮುನ್ನ ಯು.ಟಿ. ಖಾದರ್‌ ಅವರು ವಿವಿಧ ದೈವ-ದೇವಸ್ಥಾನ, ಮಸೀದಿ, ಚರ್ಚ್‌ಗಳಿಗೆ ಭೇಟಿ ನೀಡಿ ಪ್ರಾರ್ಥಿಸಿದರು.

ಟಾಪ್ ನ್ಯೂಸ್

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.