ಶಿಕ್ಷಕರ ನೇಮಕಾತಿ ಹಗರಣ CBI ಗೆ
Team Udayavani, Apr 23, 2023, 6:06 AM IST
ಕೋಲ್ಕತ: ಪಶ್ಚಿಮ ಬಂಗಾಳದ ಮಹಾನಗರ ಪಾಲಿಕೆ ಶಾಲಾ ಶಿಕ್ಷಕರ ನೇಮಕಾತಿ ಹಗರಣದ ಕುರಿತು ತನಿಖೆ ನಡೆಸುವಂತೆ ಸಿಬಿಐಗೆ ಕಲ್ಕತ್ತ ಹೈಕೋರ್ಟ್ ನಿರ್ದೇಶಿಸಿದೆ. ಶಾಲಾ ಶಿಕ್ಷಕರ ನೇಮಕಾತಿ ವೇಳೆ ನಡೆದಿದ್ದ ಹಗರಣದ ತನಿಖೆಯ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಕಂಡುಕೊಂಡ ಅಂಶಗಳನ್ನು ಆಧರಿಸಿ, ಹೈಕೋರ್ಟ್ ಈ ಆದೇಶ ನೀಡಿದೆ. ಅಗತ್ಯಬಿದ್ದರೆ ಸಿಬಿಐ ಈ ಹಗರಣದ ತನಿಖೆಗೆ ಎಫ್ಐಆರ್ ದಾಖಲಿಸಬಹುದು ಎಂದು ನ್ಯಾಯಾಲಯ ಹೇಳಿದೆ. ಹಗರಣಕ್ಕೆ ಸಂಬಂಧಿಸಿದಂತೆ ಏಜೆಂಟ್ ಅಯಾನ್ ಸಿಲ್ ಎಂಬುವವನನ್ನು ಇಡಿ ಈಗಾಗಲೇ ಬಂಧಿಸಿದೆ. ಮಹಾನಗರ ಪಾಲಿಕೆ ಗುಮಾಸ್ತ, ಚಾಲಕ, ಸ್ವತ್ಛತಾ ಸಿಬ್ಬಂದಿಯ ನೇಮಕ ಹಗರಣದಲ್ಲೂ ಈತನ ಕೈವಾಡವಿದೆ ಎಂಬ ಆರೋಪವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ