ಬಡ ಬಂಧಿಗಳಿಗೆ ಉಚಿತ ಜಾಮೀನು
Team Udayavani, Apr 24, 2023, 7:14 AM IST
ಬೆಂಗಳೂರು: ರಾಜ್ಯ ಪರಿವರ್ತನ ಖೈದಿಗಳ ಕ್ಷೇಮಾಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ನಿಂದ ಜೈಲಿನಲ್ಲಿರುವ ವಿಚಾರಣಾಧೀನ ಬಡ ಬಂಧಿತರ ಸಂಪೂರ್ಣ ವಿವರಗಳನ್ನು ಪರಿಶೀಲಿಸಿ ಉಚಿತವಾಗಿ ಜಾಮೀನು ಕೊಡಿಸಲಾಗುತ್ತದೆ.
ಈ ಟ್ರಸ್ಟ್, ಮೂರ್ನಾಲ್ಕು ವರ್ಷಗಳಿಂದ ಸಮಾಜಮುಖೀ ಕಾರ್ಯಕ್ರಮಗಳನ್ನು ಮಾಡಿಕೊಂಡು ಬಂದಿದ್ದು, ಸುಮಾರು 500 ಜನ ಬಂಧಿಗಳಿಗೆ ಉಚಿತವಾಗಿ ಜಾಮೀನು ಕೊಡಿಸಲಾಗಿದ್ದು, ಅವರು ಇಂದು ಸನ್ನಡತೆಯಿಂದ ದುಡಿದು ಬದುಕಿದ್ದಾರೆ. ಆದ್ದರಿಂದ ಬಡ ಬಂಧಿತರಿಗೆ ಉಚಿತ ಜಾಮೀನು ಕೊಡಿಸಲಾಗುವುದು. ಆದರೆ, ಬಂಧಿಯು ಒಂದಕ್ಕಿಂತ ಹೆಚ್ಚಿನ ಪ್ರಕರಣಗಳಲ್ಲಿ ಭಾಗಿಯಾಗಿರಬಾರದು, ರಾಷ್ಟ್ರದ್ರೋಹ ಮತ್ತು ಬಾಂಬ್ ಸ್ಫೋಟದಂತಹ ಪ್ರಕರಣಗಳಿಗೆ ಹಾಗೂ ವಿದೇಶಿ ಆರೋಪಿಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಟ್ರಸ್ಟ್ ರಾಜ್ಯಾಧ್ಯಕ್ಷ ಎಸ್.ಶಿವಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9066086744/9964636399 ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ