Dakshina kannada ಜಿಲ್ಲೆಯ 12 ಸಾವಿರಕ್ಕೂ ಹೆಚ್ಚು ಮತದಾರರಿಂದ ಮನೆಯಿಂದಲೇ ಮತ ಚಲಾವಣೆ

ಈ ಮತದಾನ ಪ್ರಕ್ರಿಯೆಗಳನ್ನು ನಿರ್ವಹಿಸಲು ಜಿಲ್ಲೆಯಲ್ಲಿ ಒಟ್ಟು 368 ತಂಡಗಳನ್ನು ರಚಿಸಲಾಗಿದೆ

Team Udayavani, Apr 24, 2023, 10:47 AM IST

Dakshina kannada ಜಿಲ್ಲೆಯ 12 ಸಾವಿರಕ್ಕೂ ಹೆಚ್ಚು ಮತದಾರರಿಂದ ಮನೆಯಿಂದಲೇ ಮತ ಚಲಾವಣೆ

ಮಂಗಳೂರು:ಇದೇ ಮೊದಲ ಬಾರಿಗೆ ಚುನಾವಣ ಆಯೋಗವು 80 ವರ್ಷ ಮೇಲ್ಪಟ್ಟವರಿಗೆ ಹಾಗೂ ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಿದ್ದು, ದ.ಕ. ಜಿಲ್ಲೆಯಲ್ಲಿ ಈ ಅವಕಾಶವನ್ನು 12,868 ಮತದಾರರು ಆಯ್ಕೆ ಮಾಡಿಕೊಂಡಿದ್ದಾರೆ.

ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಒಟ್ಟು 46,970 ಮಂದಿ 80 ವರ್ಷ ಮೇಲ್ಪಟ್ಟ ಹಾಗೂ ಅಂಗವಿಕಲ ಮತದಾರರಿಗೆ ಮನೆಯಿಂದಲೇ ಮತದಾನದ ಅವಕಾಶಕ್ಕಾಗಿ ನಮೂನೆ 12 ಡಿಯನ್ನು ನೀಡಲಾಗಿತ್ತು. ಮನೆ ಯಿಂದ ಮತದಾನ ಬಯಸುವವರು ಎ. 17ರೊಳಗೆ ನಮೂನೆ ಭರ್ತಿ ಮಾಡಿ ಆಯಾ ಬಿಎಲ್‌ ಒಗಳಿಗೆ ಹಿಂತಿರುಗಿಸಬೇಕಾಗಿತ್ತು. ಅದರಂತೆ ಈಗ 10,808 ಮಂದಿ 80 ವರ್ಷ ಮೇಲ್ಪಟ್ಟ ಹಾಗೂ 2,060 ಅಂಗವಿಕಲ ಮತದಾರು ಮನೆ ಯಿಂದಲೇ ಮತದಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಈ ಮತದಾನ ಪ್ರಕ್ರಿಯೆಗಳನ್ನು ನಿರ್ವಹಿಸಲು ಜಿಲ್ಲೆಯಲ್ಲಿ ಒಟ್ಟು 368 ತಂಡಗಳನ್ನು ರಚಿಸಲಾಗಿದೆ. ಪ್ರತೀ ತಂಡದಲ್ಲಿ ಇಬ್ಬರು
ಮತಗಟ್ಟೆ ಅಧಿಕಾರಿಗಳು, ವೀಡಿಯೋಗ್ರಾಫ‌ರ್‌, ಮೈಕ್ರೋ ಅಬ್ಸರ್ವರ್‌, ಪೊಲೀಸ್‌ ಸಿಬಂದಿ ಬ್ಲಾಕ್‌ ಮಟ್ಟದ ಪಕ್ಷದ ಏಜೆಂಟರ ತಂಡ ಮುಂಚಿತವಾಗಿ ಬಿಎಲ್‌ಒಗಳ ಮೂಲಕ ಮತದಾರರಿಗೆ ತಿಳಿಸಲಾದ ದಿನದಂದು ಅವರ ಮನೆಗಳಿಗೆ ತೆರಳಿ ಅಂಚೆ ಮತಪತ್ರದಲ್ಲಿ ಅವರ ಮತವನ್ನು ದಾಖಲಿಸಿಕೊಂಡು ಕವರ್‌ನಲ್ಲಿ ಅದನ್ನು ಸೀಲ್‌ ಮಾಡಲಾಗುತ್ತದೆ. ಪ್ರತಿದಿನ ಸಂಗ್ರಹವಾದ
ಆಯಾ ತಾಲೂಕಿನ ಒಟ್ಟು ಮತಪತ್ರಗಳನ್ನು ಪ್ರತೀ ತಾಲೂಕಿನಲ್ಲಿ ನಿಗದಿಪಡಿಸಲಾದ ಸ್ಟ್ರಾಂಗ್‌ ರೂಂನಲ್ಲಿ ಇರಿಸಲಾಗುತ್ತದೆ.

ನಿಗದಿಪಡಿಸಿದ ದಿನದಂದು ಚುನಾವಣ ತಂಡ ಭೇಟಿ ನೀಡುವ ಸಂದರ್ಭ ಮತದಾರ ಮನೆಯಲ್ಲಿ ಇರದಿದ್ದಲ್ಲಿ 2ನೇ ಅವಕಾಶವನ್ನು ನೀಡಲಾಗುತ್ತದೆ. ಆ ದಿನವೂ ಸಿಗದಿದ್ದರೆ ಆ ಮತದಾರನಿಗೆ ಮತದಾನ ರದ್ದಾಗಲಿದೆ ಎಂದು ಜಿಲ್ಲೆಯ ಅಂಚೆ
ಮತಪತ್ರ ಸಹಾಯಕ ನೋಡಲ್‌ ಅಧಿಕಾರಿ ಪ್ರದೀಪ್‌ ಡಿ’ಸೋಜಾ “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.

ಅರ್ಜಿ ನೀಡಿದ್ದು 46,970 ಮಂದಿಗೆ ಮಾತ್ರ
ದ.ಕ. ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪ್ರಕಾರ 80 ವರ್ಷ ಮೇಲ್ಪಟ್ಟ 46,927 ಹಾಗೂ ಅಂಗವಿಕಲ 14,007 ಮಂದಿ ಸೇರಿ ಒಟ್ಟು
60,934 ಮಂದಿ ಮನೆಯಿಂದ ಮತದಾನಕ್ಕೆ ಅರ್ಹತೆ ಪಡೆದಿದ್ದರು. ಆದರೆ ಬಿಎಲ್‌ಒಗಳು ಮನೆಗಳಿಗೆ ನಮೂನೆ 12 ಡಿ ನೀಡಲು ಹೋದ ಸಂದರ್ಭದಲ್ಲಿ ಅವರಲ್ಲಿ ಬಹುತೇಕರು ವಿಳಾಸ ಬದಲಾಯಿಸಿದ್ದು, ಕೆಲವರು ಮೃತಪಟ್ಟಿದ್ದರೂ ಹೆಸರು ಪಟ್ಟಿಯಿಂದ ಡಿಲೀಟ್‌ಗೊಂಡಿರದ ಕಾರಣ, ಜಿಲ್ಲೆಯಲ್ಲಿ 46,970 ಮಂದಿಗೆ ಅರ್ಜಿ ನೀಡಲಾಗಿತ್ತು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

139 ಮಂದಿ ಅಗತ್ಯ ಸೇವೆಯ ಗೈರು ಮತದಾರರಿಗೂ ಅವಕಾಶ

ಮತದಾನದ ದಿನದಂದು ಅಗತ್ಯ ಸೇವೆಗಳಾದ ಕೆಎಸ್‌ಆರ್‌ಟಿಸಿ ಚಾಲಕರು, ವೈದ್ಯರು, ಮೆಸ್ಕಾಂ ಲೈನ್‌ಮ್ಯಾನ್‌ಗಳು, ಪತ್ರಕರ್ತರು ಸೇರಿದಂತೆ ತಮ್ಮ ದೈನಂದಿನ ಅಗತ್ಯ ಸೇವೆಯ ಹಿನ್ನೆಲೆಯಲ್ಲಿ ಮತದಾನಕ್ಕೆ ಗೈರಾಗುವುದನ್ನು ತಪ್ಪಿಸಲು ಈ ಬಾರಿ ಅಂತಹವರಿಗೆ ಅಂಚೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಅದರಂತೆ ಜಿಲ್ಲೆಯಲ್ಲಿ 139 ಮಂದಿ ನಮೂನೆ 12 ಡಿಯಲ್ಲಿ ಅರ್ಜಿ ಸಲ್ಲಿಸಿದ್ದು, ಅವರಿಗೆ ವಿಧಾನಸಭಾ ಕ್ಷೇತ್ರದ ತಾಲೂಕು ಕಚೇರಿಗಳ ಅಂಚೆ ಮತದಾನ ಕೇಂದ್ರಗಳಲ್ಲಿ ಮೇ 2ರಿಂದ 4ರ ವರೆಗೆ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಕೋವಿಡ್‌ ಸೋಂಕಿತ ಮತದಾರರು ಇಲ್ಲ!
ಕೋವಿಡ್‌ ಸೋಂಕಿತರಿಗೂ ಈ ಬಾರಿ ಮನೆಯಿಂದ ಮತದಾನಕ್ಕೆ ಅವಕಾಶ ನೀಡಲಾಗಿದ್ದು, ದ.ಕ. ಜಿಲ್ಲೆಯಲ್ಲಿ ಅಂತಹ
ಮತದಾರರಿಂದ ಅರ್ಜಿ ಬಂದಿಲ್ಲ.

ಮನೆಯಿಂದಲೇ ಮತದಾನ ಆಯ್ದುಕೊಂಡಿರುವ 80 ವರ್ಷ ಮೇಲ್ಪಟ್ಟ ಹಾಗೂ ಅಂಗವಿಕಲ ಮತದಾರರಿಗೆ ಎ. 29ರಿಂದ ಮೇ 6ರ ವರೆಗೆ ಅಂಚೆ ಮತಪತ್ರದ ಮೂಲಕ ಮತದಾನ ಪ್ರಕ್ರಿಯೆಗಳು ನಡೆಯಲಿದ್ದು, ಜಿಲ್ಲೆಯಲ್ಲಿ ಸಕಲ ಸಿದ್ಧತೆ ನಡೆದಿದೆ. ಈ ಮತದಾನದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬಂದಿಗೆ ಎ. 23ರಂದು ಜಿಲ್ಲಾ ಮಟ್ಟದಲ್ಲಿ ತರಬೇತಿಯನ್ನು ನಡೆಸಲಾಗಿದೆ.
– ಕೃಷ್ಣಮೂರ್ತಿ, ಅಪರ ಜಿಲ್ಲಾಧಿಕಾರಿ ಹಾಗೂ ಹೆಚ್ಚುವರಿ ಚುನಾವಣ ಅಧಿಕಾರಿ, ದ.ಕ. ಜಿಲ್ಲೆ

*ಸತ್ಯಾ.ಕೆ

ಟಾಪ್ ನ್ಯೂಸ್

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.