Congress ಪಕ್ಷ ಲಿಂಗಾಯತ ಸಮಾಜದಲ್ಲಿ ವಿಷಬೀಜ ಬಿತ್ತುತ್ತಲೇ ಬರುತ್ತಿದೆ: ವಿಜಯೇಂದ್ರ ಕಿಡಿ
ರಾಹುಲ್ ಬಸವೈಕ್ಯ ಮಂಟಪ ಭೇಟಿ ಪ್ರಾಯಶ್ಚಿತ್ತಕ್ಕಾಗಿ
Team Udayavani, Apr 24, 2023, 7:12 PM IST
ವಿಜಯಪುರ: ಕಾಂಗ್ರೆಸ್ ಪಕ್ಷದ ನಾಯಕರು ಅಧಿಕಾರ – ರಾಜಕೀಯ ಸ್ವಾರ್ಥಕ್ಕಾಗಿ ವೀರಶೈವ – ಲಿಂಗಾಯತ ಸಮಾಜದಲ್ಲಿ ವಿಷಬೀಜ ಬಿತ್ತುತ್ತಲೇ ಬರುತ್ತಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದಕ್ಕೆ ಪ್ರಾಯಶ್ಚಿತ್ತ ಎನ್ನುವಂತೆ ಕೂಡಲಸಂಗಮಕ್ಕೆ ಹೋಗಿ ಬಸವಣ್ಣನವರ ಐಕ್ಯ ಮಂಟಪದಲ್ಲಿ ಪೂಜೆ ಸಲ್ಲಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶಿಕಾರಿಪುರ ಬಿಜೆಪಿ ಅಭ್ಯರ್ಥಿ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಸೋಮವಾರ ಜಿಲ್ಲೆಯ ಬಸವನಬಾಗೇವಾಡಿ ಕ್ಷೇತ್ರದ ಕೊಲ್ಹಾರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಕೆ.ಬೆಳ್ಳುಬ್ಬಿ ಪರ ಚುನಾವಣಾ ಪ್ರಚಾರದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಒಂದೆಡೆ ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಬಂದು ಬಸವ ತತ್ವದ ಮಾತನಾಡುತ್ತಾರೆ. ಮತ್ತೊಂದೆಡೆ ಅವರದೇ ಪಕ್ಷದ ವಿಧಾನಸಭೇ ವಿಪಕ್ಷ ನಾಯಕ ಸಿದ್ರಾಮಯ್ಯ ಅವರು ಲಿಂಗಾಯತ ಮುಖಂಡರ ಬಗ್ಗೆ ಕೆಟ್ಟದಾಗಿ ಮಾತಾಡ್ತಾರೆ. ಇದು ಕಾಂಗ್ರೆಸ್ ನಾಯಕರ ದ್ವಂದ್ವ ನೀತಿ ಹಾಗೂ ರಾಜಕೀಯ ಎಂದು ವ್ಯಂಗ್ಯವಾಡಿದರು.
ಈ ಹಿಂದೆ ವೀರಶೈವ ಲಿಂಗಾಯತರನ್ನು ಒಡೆಯಲು ಹೋದವರು ಇದೇ ಕಾಂಗ್ರೆಸ್ ನವರು ಮತ್ತೊಮ್ಮೆ ಅಧಿಕಾರಕ್ಕೆ ಬರಲು ವೀರಶೈವ ಲಿಂಗಾಯತರನ್ನು ಪ್ರಯತ್ನಿಸಿದೆ ಆದರೆ ಆಗಲಿಲ್ಲ. ಇದೀಗ ಲಿಂಗಾಯತರನ್ನು ಗುರಿಯಾಗಿಸಿಕೊಂಡು ಮತ್ತೊಮ್ಮೆ ಅಧಿಕಾರಕ್ಕೆ ಬರುವ ಹುನ್ನಾರ ನಡೆಸಿದ್ದಾರೆ. ರಾಜ್ಯದ ಜನ ಬಿಜೆಪಿ ಪರವಾಗಿರುವುದನ್ನು ಕಂಡು ಕಾಂಗ್ರೆಸ್ ನಾಯಕರು ಆತಂಕ್ಕೀಡಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ, ಬದಲಾಗಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು.
ಕಾಂಗ್ರೆಸ್, ಜೆಡಿಎಸ್ ತೊರೆದು ಹಲವು ನಾಯಕರು ಬಿಜೆಪಿ ಸೇರಿದ್ದಾರೆ. ಉರಿಬಿಸಿಲನ್ನೂ ಲೆಕ್ಕಿಸದೇ ಕೊಲ್ಹಾರದ ಜನರು ಎಸ್.ಕೆ.ಬೆಳ್ಳುಬ್ಬಿ ಅವರ ರೋಡ್ ಶೋ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದಾರೆ. ಜನರ ಉತ್ಸಾಹ ನೋಡಿದರೆ ಎಸ್.ಕೆ.ಬೆಳ್ಳುಬ್ಬಿ ಗೆಲ್ಲುವುದು ಖಚಿತ ಎಂದರು.
ರಾಜ್ಯದ ಬಿಜೆಪಿ ವರಿಷ್ಠ ನಾಯಕ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಸರ್ವ ಸಮಾಜಗಳನ್ನ ಸಮಾನವಾಗಿ ಕಂಡಿದ್ದಾರೆ. ಅಧಿಕಾರದಿಂದ ಕೆಳಗಿಳಿದರೂ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪಕ್ಷ ಸಂಘಟನೆಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ. ಈ ಬಾರಿ ಯಡಿಯೂರಪ್ಪ ಅವರ ಕೈ ಬಲಪಡಿಸಿಂತೆ ರಾಜ್ಯದ ಜನರು ಮತ್ತೊಮ್ಮೆ ಬಿಜೆಪಿ ಪಕ್ಷಕ್ಕೆ ಅವಕಾಶ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಜಯೇಂದ್ರ ರೋಡ್ ಶೋ: ಇದಕ್ಕೂ ಮುನ್ನ ಬಸವನಬಾಗೇವಾಡಿ ಕ್ಷೇತ್ರದ ಕೊಲ್ಹಾರ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಪರ ರೋಡ್ ಶೋ ನಡೆಸಿದ ಬಿ.ವೈ.ವಿಜಯೇಂದ್ರ ಅವರಿಗೆ ಪುಷ್ಪ ಮಳೆಯ ಮೂಲಕ ಅದ್ದೂರಿಯಾಗಿ ಸ್ವಾಗತ ನೀಡಲಾಯಿತು.
ಕೊಲ್ಹಾರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ರೋಡ್ ಶೋದಲ್ಲಿ ಎಸ್.ಕೆ.ಬೆಳ್ಳುಬ್ಬಿ ಅವರಿಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತ್ರವಲ್ಲದೇ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಸೇರಿದಂತೆ ಇನ್ನಿತರ ಸ್ಥಳೀಯ ಮುಖಂಡರು ಸಾಥ್ ನೀಡಿದರು. ತೆರೆದ ವಾಹನದಲ್ಲಿ ಮುಖಂಡರೆಲ್ಲ ಸಾಗಿದರೆ, ರೋಡ್ ಶೋದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡು ಬಿಜೆಪಿ ಪರ ಘೋಷಣೆ ಕೂಗಿದರು.
ಜೆಸಿಪಿ ಮೂಲಕ ರೋಡ್ ಶೋ ಉದ್ದಕ್ಕೂ ಅಲ್ಲಲ್ಲಿ ಹೂ ಮಳೆ ಸುರಿಸುವ ಮೂಲಕ ಸ್ವಾಗತಿಸಲಾಯಿತು. ಇದೇ ವೇಳೆ ಕ್ಷೇತ್ರದ ಜೆಡಿಎಸ್ ಟಿಕೆಟ್ ಘೋಷಿತರಾಗಿ ಬಳಿಕ ಟಿಕೆಟ್ ತಪ್ಪಿದ್ದರಿಂದ ಪರಮಾನಂದ ತನಿಖೆದಾರ ಬಿಜೆಪಿ ಸೇರ್ಪಡೆಯಾಗಿ, ಬಿಜೆಪಿ ಅಭ್ಯರ್ಥಿ ಎಸ್.ಕೆ.ಬೆಳ್ಳುಬ್ಬಿ ಅವರಿಗೆ ಬೆಂಬಲ ಸೂಚಿಸಿದರು.
ಇದನ್ನೂ ಓದಿ: Udupi; ಉಡುಪಿಯಲ್ಲಿ ಪ್ರಸಾದ್ ರಾಜ್ ಕಾಂಚನ್ ಪರ ಡಿಕೆ ಶಿವಕುಮಾರ್ ಭರ್ಜರಿ ರೋಡ್ ಶೋ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ
MUST WATCH
ಹೊಸ ಸೇರ್ಪಡೆ
Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು
Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್
Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ
Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !
Colon Cancer; ಸಂಕೇತಗಳು ಮತ್ತು ಲಕ್ಷಣಗಳು, ರೋಗನಿರ್ಣಯ ಮತ್ತು ಚಿಕಿತ್ಸೆ