Hyderabadನಲ್ಲಿ ಪೊಲೀಸರ ಮೇಲೆ ಹಲ್ಲೆ: ವೈಎಸ್ ಶರ್ಮಿಳಾ ಬಂಧನ
Team Udayavani, Apr 24, 2023, 8:37 PM IST
ಹೈದರಾಬಾದ್: ವೈಎಸ್ಆರ್ ತೆಲಂಗಾಣ ಪಕ್ಷದ ಅಧ್ಯಕ್ಷೆ ವೈಎಸ್ ಶರ್ಮಿಳಾ ಅವರನ್ನು ನಿವಾಸದ ಮುಂದೆ ಪೊಲೀಸ್ ಸಿಬಂದಿಯೊಂದಿಗೆ ವಾಗ್ವಾದ ನಡೆಸಿ ಹಲ್ಲೆ ಮಾಡಿದ ಆರೋಪದ ಮೇಲೆ ಸೋಮವಾರ ಬಂಧಿಸಲಾಗಿದೆ.
ಪೊಲೀಸ್ ಸಿಬಂದಿಯ ದೂರಿನ ಆಧಾರದ ಮೇಲೆ, ಶರ್ಮಿಳಾ ವಿರುದ್ಧ ಒಬ್ಬ ಸಬ್ ಇನ್ಸ್ಪೆಕ್ಟರ್ ಮೇಲೆ ಹಲ್ಲೆ ಮಾಡಿದ ಆರೋಪ, ಪೊಲೀಸ್ ಪೇದೆಯ ಮೇಲೆ ತನ್ನ ವಾಹನ ಢಿಕ್ಕಿ ಹೊಡೆದು ಅವರ ಕಾಲಿಗೆ ಗಾಯ ಮಾಡಿದ ಮತ್ತು ಪೊಲೀಸ್ ಅಧಿಕಾರಿಗಳನ್ನು ನಿಂದಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಬಂಧಿತ ಶರ್ಮಿಳಾ ಅವರನ್ನು ಭೇಟಿಯಾಗಲು ತೆರಳಿದ್ದ ಜುಬಿಲಿ ಹಿಲ್ಸ್ ಪೊಲೀಸ್ ಠಾಣೆ ಬಳಿ ನಡೆದ ಗಲಾಟೆಯಲ್ಲಿ ಶರ್ಮಿಳಾ ಅವರ ತಾಯಿ ವೈ ಎಸ್ ವಿಜಯಮ್ಮ ಅವರು ಮಹಿಳಾ ಪೇದೆಯೊಬ್ಬರಿಗೆ ಕಪಾಳಮೋಕ್ಷ ಮಾಡುತ್ತಿರುವ ದೃಶ್ಯಾವಳಿಗಳನ್ನು ಕೂಡ ವಿಶ್ಲೇಷಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಿವಿ ದೃಶ್ಯಗಳಲ್ಲಿ, ಶರ್ಮಿಳಾ ಅವರು ಅನುಮತಿ ಪಡೆದಿಲ್ಲದ ಪ್ರತಿಭಟನೆಯನ್ನು ಮುಂದುವರಿಸದಂತೆ ತಡೆಯಲು ಪ್ರಯತ್ನಿಸಿದ ಪೊಲೀಸ್ ಅಧಿಕಾರಿಗಳನ್ನು ಮ್ಯಾನ್ ಹ್ಯಾಂಡ್ ಮಾಡುತ್ತಿರುವುದು ಕಂಡುಬಂದಿದೆ.
#WATCH | YSRTP Chief YS Sharmila manhandles police personnel as she is being detained to prevent her from visiting SIT office over the TSPSC question paper leak case, in Hyderabad pic.twitter.com/StkI7AXkUJ
— ANI (@ANI) April 24, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
MUST WATCH
ಹೊಸ ಸೇರ್ಪಡೆ
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ