ಸ್ಯಾಂಟ್ರೋ ರವಿ ಪತ್ನಿ ವಿರುದ್ದದ ಕೇಸ್‌ನಲ್ಲಿ “ಬಿ’ ರಿಪೋರ್ಟ್‌?


Team Udayavani, Apr 26, 2023, 12:37 PM IST

ಸ್ಯಾಂಟ್ರೋ ರವಿ ಪತ್ನಿ ವಿರುದ್ದದ ಕೇಸ್‌ನಲ್ಲಿ “ಬಿ’ ರಿಪೋರ್ಟ್‌?

ಬೆಂಗಳೂರು: ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಸ್ಯಾಂಟ್ರೋ ರವಿ ಪತ್ನಿಯ ವಿರುದ್ಧದ ಪ್ರಕರಣದಲ್ಲಿ “ಬಿ’ ವರದಿ ಸಲ್ಲಿಸಲು ಸಿಸಿಬಿ ಸಿದ್ಧತೆ ನಡೆಸಿದೆ.

ರಾಜ್ಯದಲ್ಲಿ ಸರ್ಕಾರಿ ನೌಕರರ ವರ್ಗಾವಣೆ ದಂಧೆ, ದುಡ್ಡು ಕೊಟ್ಟವರಿಗೆ ಸರ್ಕಾರಿ ನೌಕರಿ, ಯುವತಿಯರನ್ನು ಛೂ ಬಿಟ್ಟು ಪ್ರಭಾವಿಗಳಿಂದ ಕೆಲಸ ಮಾಡಿಕೊಂಡು ಭ್ರಷ್ಟಾಚಾರದ ಕೇಂದ್ರ ಬಿಂದುವಾಗಿ ಗುರುತಿಸಿಕೊಂಡಿದ್ದ ಸ್ಯಾಂಟ್ರೋ ರವಿ ಅಕ್ರಮಗಳು ಕೊನೆಗೂ ಬಹಿರಂಗಗೊಂಡಿತ್ತು. ಆದರೆ, ಆತನ ಪತ್ನಿ ಹಾಗೂ ನಾದಿನಿ ವಿರುದ್ಧ ಶ್ರೀಪ್ರಕಾಶ್‌ ಎಂಬಾತನ ಮೂಲಕ ಕಾಟನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ದಾಖಲಿಸಿದ್ದ ಪ್ರಕರಣದಲ್ಲಿ ಹುರುಳಿಲ್ಲ ಎಂಬ ಅಂಶವು ಸಿಸಿಬಿ ತನಿಖೆಯಲ್ಲಿ ದೃಢಪಟ್ಟಿದೆ. ಹೀಗಾಗಿ ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ “ಬಿ’ ವರದಿ ಸಲ್ಲಿಸಲು ಸಿಸಿಬಿ ಸಿದ್ಧತೆ ನಡೆಸಿದ್ದಾರೆ ಎಂಬ ಸಂಗತಿ “ಉದಯವಾಣಿ’ಗೆ ಸಿಸಿಬಿ ಮೂಲಗಳಿಂದ ತಿಳಿದು ಬಂದಿದೆ.

ಏನಿದು ಪ್ರಕರಣ?: ಸ್ಯಾಂಟ್ರೋ ರವಿಯ ವೈಯಕ್ತಿಕ ಮಾಹಿತಿಯುಳ್ಳ ಲ್ಯಾಪ್‌ ಟಾಪ್‌ ಪತ್ನಿ ಕೈ ಸೇರಿದ್ದವು. ತನ್ನ ಪತ್ನಿ ಬಳಿ ಇದ್ದ ಲ್ಯಾಪ್‌ಟಾಪ್‌ ತನ್ನ ಕೈ ಸೇರಬೇಕೆಂಬ ಉದ್ದೇಶದಿಂದ ಸ್ಯಾಂಟ್ರೋ ರವಿ ಪತ್ನಿ ವಿರುದ್ಧವೇ ಷಡ್ಯಂತರ ರೂಪಿಸಿದ್ದ. ಇದಕ್ಕೆ ವರ್ಗಾವಣೆಯಾಗುವ ಆತಂಕದಲ್ಲಿದ್ದ ಕಾಟನ್‌ಪೇಟೆ ಠಾಣೆ ಇನ್‌ಸ್ಪೆಕ್ಟರನ್ನು ಬಳಸಿಕೊಂಡಿದ್ದ. ತಾನು ಹೇಳಿದಂತೆ ಕೇಳಿದರೆ ವರ್ಗೆ ತಡೆಹಿಡಿಯುವುದಾಗಿ ಹೇಳಿದ್ದ ಎನ್ನಲಾಗಿದೆ. ಇತ್ತ ಸ್ಯಾಂಟ್ರೋ ರವಿ ಆಪ್ತ ಶ್ರೀಪ್ರಕಾಶ್‌ ಮೂಲಕ ಪತ್ನಿ ವಿರುದ್ಧವೇ ಕಾಟನ್‌ಪೇಟೆ ಠಾಣೆಗೆ ದೂರು ಕೊಡಿಸಿದ್ದ.

ಸ್ಯಾಂಟ್ರೋ ರವಿ ಪತ್ನಿ ಆರ್ಥಿಕ ಸಮಸ್ಯೆ ನೆಪವೊಡ್ಡಿ ತನ್ನಿಂದ 5 ಲಕ್ಷ ರೂ. ಸಾಲು ಪಡೆದು 3 ತಿಂಗಳಲ್ಲಿ ವಾಪಸ್‌ ನೀಡುವುದಾಗಿ ಹೇಳಿದ್ದರು. ಕೆಲ ದಿನಗಳ ಬಳಿಕ ಕರೆ ಮಾಡಿ ಹಣ ವಾಪಸ್‌ ನೀಡುವುದಾಗಿ ಹೇಳಿ ಮೆಜೆಸ್ಟಿಕ್‌ ಬಳಿ ಕರೆಸಿಕೊಂಡಿದ್ದರು. ಇಲ್ಲಿನ ರೈಲು ನಿಲ್ದಾಣದ ಬಳಿ ಹಣ ಕೊಡದೇ ಹಲ್ಲೆ ನಡೆಸಿ ತನ್ನ ಬಳಿ ಇದ್ದ ಚಿನ್ನ ಕದ್ದು ಪರಾರಿಯಾಗಿದ್ದಾರೆ ಎಂದು ಸ್ಯಾಂಟ್ರೋರವಿ ಸೂಚನೆಯಂತೆ ಶ್ರೀಪ್ರಕಾಶ್‌ ದೂರಿನಲ್ಲಿ ಉಲ್ಲೇಖೀಸಿದ್ದ. ಸ್ಯಾಂಟ್ರೋ ಪತ್ನಿ, ನಾದಿನಿಯನ್ನು ಬಂಧಿಸಿದ ಅಂದಿನ ಕಾಟನ್‌ಪೇಟೆ ಪೊಲೀಸರು 21 ದಿನ ಜೈಲಿನಲ್ಲಿರುವಂತೆ ಮಾಡಿದ್ದರು. ಸಿಸಿಬಿ ಪೊಲೀಸರು ಸ್ಯಾಂಟ್ರೋ ರವಿ, ಆತನ ಪತ್ನಿ, ದೂರುದಾರ ಶ್ರೀಪ್ರಕಾಶ್‌ ಅವರನ್ನು ವಿಚಾರಣೆ ನಡೆಸಿ ತಾಂತ್ರಿಕ ಸಾಕ್ಷ್ಯ ಸಂಗ್ರಹಿಸಿ ಪರಿಶೀಲಿಸಿದಾಗ ಸುಳ್ಳು ದೂರು ನೀಡಿರುವ ಅಸಲಿ ಸಂಗತಿ ದೃಢಪಟ್ಟಿದೆ.

ಇನ್‌ಸ್ಪೆಕ್ಟರ್‌ಗಳ ವಿರುದ್ಧ ಕ್ರಮ ಏಕಿಲ್ಲ?: ಇಷ್ಟೆಲ್ಲಾ ಆದರೂ ಅಂದಿನ ಕಾಟನ್‌ಪೇಟೆ ಇನ್‌ಸ್ಪೆಕ್ಟರ್‌ ವಿರುದ್ಧ ಎಫ್ಐಆರ್‌ ದಾಖಲಿಸಿಲ್ಲ. ಸ್ಯಾಂಟ್ರೋ ರವಿ ತಲೆಮರೆಸಿಕೊಂಡಿದ್ದ ವೇಳೆ ಆತನಿಗೆ ಸಹಕರಿಸಿದ ಆರೋಪವೂ ಇದೆ. ಇನ್ನು ಬೆಂಗಳೂರಿನಲ್ಲಿದ್ದ ಮತ್ತಿಬ್ಬರು ಇನ್‌ಸ್ಪೆಕ್ಟರ್‌ಗಳು ತಮ್ಮಿಷ್ಟದ ಠಾಣೆಗಳಿಗೆ ವರ್ಗಾವಣೆ ಮಾಡಿಸಿಕೊಳ್ಳಲು ಸ್ಯಾಂಟ್ರೋ ರವಿ ಮೂಲಕ ಡೀಲ್‌ ಕುದುರಿಸಿದ್ದರು. ದುಡ್ಡು ರೆಡಿಯಾಗಿದೆ ಎಂದು ಈ ಇಬ್ಬರು ಇನ್‌ಸ್ಪೆಕ್ಟರ್‌ಗಳು ಸ್ಯಾಂಟ್ರೋ ರವಿಗೆ ಕಳುಹಿಸಿರುವ ಸಂದೇಶ ತನಿಖಾಧಿಕಾರಿಗಳಿಗೆ ಸಿಕ್ಕಿದೆ. ಸದ್ಯ ಇಬ್ಬರು ಇನ್‌ಸ್ಪೆಕ್ಟರ್‌ ಗಳು ಕೊಟ್ಟಿದ್ದ ಕಂತೆ-ಕಂತೆ ದುಡ್ಡು ಲಂಚದ ರೂಪದಲ್ಲಿ ಪ್ರಭಾವಿ ರಾಜಕಾರಣಿಯೊಬ್ಬರ ಖಜಾನೆ ಸೇರಿದೆ. ಕೊಟ್ಟ ಮಾತಿನಂತೆ ಸ್ಯಾಂಟ್ರೋ ಇಬ್ಬರು ಇನ್‌ಸ್ಪೆಕ್ಟರ್‌ಗಳನ್ನೂ ಬೇಕಾದ ಠಾಣೆಗೆ ವರ್ಗಾವಣೆ ಮಾಡಿಸಿಕೊಟ್ಟಿದ್ದಾನೆ. ಇದಕ್ಕೆ ಸಾಕ್ಷ್ಯ ಸಿಕ್ಕಿದರೂ ಇನ್‌ ಸ್ಪೆಕ್ಟರ್‌ಗಳ ವಿರುದ್ಧ ಕೇಸ್‌ ದಾಖಲಿಸಿಕೊಳ್ಳದಿರುವ ನಡೆ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಸ್ಯಾಂಟ್ರೋ ರವಿಗೆ ಪ್ರಭಾವಿಗಳ ಶ್ರೀರಕ್ಷೆ: ಸ್ಯಾಂಟ್ರೋ ರವಿ ಜೈಲು ಸೇರಿದ್ದರೂ ಪ್ರಭಾವಿಗಳ ಕುಮ್ಮಕ್ಕಿನಿಂದ ಆತನ ವಿರುದ್ಧ ದಾಖಲಾಗಿದ್ದ ಪ್ರಕರಣಗಳೆಲ್ಲಾ ಹಳ್ಳ ಹಿಡಿಯುತ್ತಿರುವ ಆರೋಪ ಕೇಳಿ ಬಂದಿದೆ. ವಿಚಾರಣೆ ವೇಳೆ ಆತ ಇದುವರೆಗೆ ನಡೆಸಿದ್ದ ಕೋಟ್ಯಂತರ ರೂ. ಡೀಲ್‌ ಬಗ್ಗೆ ಸವಿಸ್ತಾರವಾಗಿ ತನಿಖಾಧಿಕಾರಿಗಳ ಮುಂದೆ ಬಾಯ್ಬಿಟ್ಟಿದ್ದಾನೆ. ಆದರೆ, ಪ್ರಭಾವಿ ರಾಜಕಾರಣಿಗಳು, ಸಚಿವರು ಪ್ರಕರಣದಲ್ಲಿ ತಮ್ಮ ಹೆಸರು ತಳುಕು ಹಾಕಿಕೊಳ್ಳದಂತೆ ತನಿಖಾಧಿಕಾರಿಗಳ ಮೇಲೆ ಒತ್ತಡ ತಂದು ಸ್ಯಾಂಟ್ರೋ ರವಿಗೆ ಶ್ರೀರಕ್ಷೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

-ಅವಿನಾಶ್‌ ಮೂಡಂಬಿಕಾನ

ಟಾಪ್ ನ್ಯೂಸ್

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqewqeqwe

Davanagere; ಪೊಲೀಸ್ ಕಸ್ಟಡಿಯಲ್ಲಿದ್ದ ಅರೋಪಿ ಸಾವು: ಭಾರೀ ಹಿಂಸಾಚಾರ

Heavy rain ಮುಂದುವರಿದ ಮಳೆಯಬ್ಬರ: ಸಿಡಿಲಿಗೆ ಒಂದು ಬಲಿ

Heavy rain ಮುಂದುವರಿದ ಮಳೆಯಬ್ಬರ: ಸಿಡಿಲಿಗೆ ಒಂದು ಬಲಿ

Prajwal Revanna ವಿರುದ್ಧ ಕ್ರಮಕ್ಕೆ ಜೋಷಿ ಒತ್ತಾಯಿಸಿದ್ದರಾ?: ಪ್ರಿಯಾಂಕ್‌ ಖರ್ಗೆ

Prajwal Revanna ವಿರುದ್ಧ ಕ್ರಮಕ್ಕೆ ಜೋಷಿ ಒತ್ತಾಯಿಸಿದ್ದರಾ?: ಪ್ರಿಯಾಂಕ್‌ ಖರ್ಗೆ

PSI Exam ರಾಜ್ಯದ 402 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ: ಸೆಪ್ಟಂಬರ್‌ನಲ್ಲಿ ಪರೀಕ್ಷೆ

PSI Exam ರಾಜ್ಯದ 402 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ: ಸೆಪ್ಟಂಬರ್‌ನಲ್ಲಿ ಪರೀಕ್ಷೆ

Prajwal Revanna Case ವೀಡಿಯೋ ಹಂಚಿದವರು ಜಾಮೀನಿಗಾಗಿ ಹೈಕೋರ್ಟ್‌ಗೆ

Prajwal Revanna Case ವೀಡಿಯೋ ಹಂಚಿದವರು ಜಾಮೀನಿಗಾಗಿ ಹೈಕೋರ್ಟ್‌ಗೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

court

Equestrian: ಆಡಳಿತ ನಿರ್ವಹಣೆಗೆ ಸಮಿತಿ

pvs

Malaysia Master ಬ್ಯಾಡ್ಮಿಂಟನ್‌: ಸೆಮಿಫೈನಲ್‌ ಪ್ರವೇಶಿಸಿದ ಸಿಂಧು

Sunil Chhetri

FIFA ವಿಶ್ವಕಪ್‌ ಕ್ವಾಲಿಫೈಯರ್‌; ಭಾರತ ಫುಟ್‌ಬಾಲ್‌ ತಂಡ ಪ್ರಕಟ: ಛೇತ್ರಿಗೆ ವಿದಾಯ ಪಂದ್ಯ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.