ತಮಿಳುನಾಡು BJPಯಿಂದ ಮತ್ತೂಂದು ಆಡಿಯೊ ಬಾಂಬ್‌

ಸಿಎಂ ಸ್ಟಾಲಿನ್‌ ಪುತ್ರ, ಅಳಿಯನ ಅಕ್ರಮಗಳ ಬಗ್ಗೆ ಬಾಯ್ಬಿಟ್ಟ ಡಿಎಂಕೆ ಸಚಿವ?

Team Udayavani, Apr 27, 2023, 7:20 AM IST

tn bj

ಚೆನ್ನೈ: ತಮಿಳುನಾಡು ಡಿಎಂಕೆ ಸರ್ಕಾರದ ಭ್ರಷ್ಟಾಚಾರ ಕುರಿತು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಬುಧವಾರ ಎರಡನೇ ಆಡಿಯೋ ಕ್ಲಿಪ್‌ ಬಿಡುಗಡೆಗೊಳಿಸಿದ್ದಾರೆ. ಈ ಆಡಿಯೋದಲ್ಲಿ ಮಾತನಾಡಿರುವುದು ತಮಿಳುನಾಡು ಹಣಕಾಸು ಸಚಿವ ಪಿಟಿಆರ್‌ ಪಳನಿವೇಲ್‌ ತ್ಯಾಗರಾಜನ್‌ ಎನ್ನಲಾಗಿದೆ. ಇದರದಲ್ಲಿ ಡಿಎಂಕೆ ಸರ್ಕಾರ ಮತ್ತು ಸಿಎಂ ಎಂ.ಕೆ.ಸ್ಟಾಲಿನ್‌ ಅವರ ಕುಟುಂಬದ ಭ್ರಷ್ಟಾಚಾರದ ಬಗ್ಗೆ ಪ್ರಸ್ತಾಪಿಸಿದ್ದಾರೆ.

“ಬಂದ ಲಂಚದ ಹಣದಲ್ಲಿ ಸಿಎಂ ಪುತ್ರ ಮತ್ತು ಅಳಿಯ ಬಹುಪಾಲನ್ನು ಪಡೆಯುತ್ತಾರೆ” ಎಂದು ಪಿಟಿಆರ್‌ ಹೇಳಿದ್ದಾರೆ ಎನ್ನಲಾಗಿದೆ. ಸಚಿವರಾದ ನಂತರ ಪಕ್ಷದಲ್ಲಿದ್ದ ಸ್ಥಾನವನ್ನು ತೊರೆದ ಕುರಿತು ಪಿಟಿಆರ್‌ ಮಾತನಾಡುವಾಗ ಇದನ್ನು ಹೇಳುತ್ತಾರೆ. ಇದೇ ರೀತಿಯ ಮೊದಲ ಆಡಿಯೋ ಅನ್ನು ಕೆಲವು ದಿನಗಳ ಹಿಂದೆ ಬಿಜೆಪಿ ಬಿಡುಗಡೆ ಮಾಡಿತ್ತು. ಇದರಲ್ಲಿ, “ಸಿಎಂ ಎಂ.ಕೆ.ಸ್ಟಾಲಿನ್‌ ಅವರ ಪುತ್ರ ಉದಯನಿಧಿ ಮತ್ತ ಶಬರೀಶನ್‌ ಅವರು 30,000 ಕೋಟಿ ರೂ. ಸಂಗ್ರಹಿಸಿದ್ದಾರೆ” ಎಂದು ಪಿಟಿಆರ್‌ ಹೇಳಿದ್ದಾರೆ ಎನ್ನಲಾಗಿದೆ.

ಇದರ ಆಧಾರದಲ್ಲಿ ಡಿಎಂಕೆ ಸರ್ಕಾರವನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. “ನಮ್ಮ ಪಕ್ಷದಲ್ಲಿ “ಒಬ್ಬ ವ್ಯಕ್ತಿ ಒಂದು ಹುದ್ದೆ” ಎಂಬ ನಿಯಮವಿದೆ. ಆದರೆ ಡಿಎಂಕೆ ಪಕ್ಷದಲ್ಲಿ ವ್ಯವಸ್ಥೆಯ ಕೊರತೆ ಎದ್ದು ಕಾಣುತ್ತದೆ’ ಎಂದು ಬಿಜೆಪಿ ಹೇಳಿದೆ. “ಸಚಿವ ಪಿಟಿಆರ್‌ ಅವರಿಗೆ ಧನ್ಯವಾದಗಳು. ಅವರು ಡಿಎಂಕೆ ಮತ್ತು ಬಿಜೆಪಿ ಕುರಿತು ಸರಿಯಾದ ವ್ಯತ್ಯಾಸವನ್ನು ತಿಳಿಸಿದ್ದಾರೆ” ಎಂದು ಅಣ್ಣಾಮಲೈ ಟ್ವೀಟ್‌ ಮಾಡಿದ್ದಾರೆ.

“ಈ ಆಡಿಯೋ ಕ್ಲಿಪ್‌ ನಕಲಿಯಾಗಿದೆ. ನಮ್ಮನ್ನು ವಿಭಜಿಸುವ ಯಾವುದೇ ದುರುದ್ದೇಶಿತ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ. ಈ ರೀತಿಯ ಮತ್ತಷ್ಟು ಆಡಿಯೊ ಮತ್ತು ವಿಡಿಯೊಗಳು ಮುಂದೆ ಬಿಡುಗಡೆಯಾಗಬಹುದು’ ಎಂದು ಸಚಿವ ಪಿಟಿಆರ್‌ ಹೇಳಿದ್ದಾರೆ.

ಡಿಎಂಕೆ ನಾಯಕರು ಅಕ್ರಮವಾಗಿ 1.34 ಲಕ್ಷ ಕೋಟಿ ರೂ. ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಿದ್ದ ಅಣ್ಣಾಮಲೈ, ಏ.14ರಂದು “ಡಿಎಂಕೆ ಫೈಲ್ಸ್‌” ಎಂಬ ಹೆಸರಿನ ಕಡತಗಳನ್ನು ಬಿಡುಗಡೆಗೊಳಿಸಿದ್ದರು.

ಟಾಪ್ ನ್ಯೂಸ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.