karnataka polls: ಚುನಾವಣೆವರೆಗೂ ಅಷ್ಟೇ ಕಾಂಗ್ರೆಸ್ ಗ್ಯಾರಂಟಿ ಇರುತ್ತವೆ; ಸಿಎಂ ಬೊಮ್ಮಾಯಿ
Team Udayavani, Apr 27, 2023, 11:48 AM IST
ಹುಬ್ಬಳ್ಳಿ: ಚುನಾವಣೆವರೆಗೂ ಅಷ್ಟೇ ಕಾಂಗ್ರೆಸ್ ಗ್ಯಾರಂಟಿ ಇರುತ್ತವೆ. ಚುನಾವಣೆ ಬಳಿಕ ಯಾವುದು ಈಡೇರುವುದಿಲ್ಲ. ಇದಕ್ಕೆ ಉದಾಹರಣೆಗೆ ಬೇರೆ ಕಾಂಗ್ರೆಸ್ ಆಡಳಿತ ರಾಜ್ಯದಲ್ಲಿ ಕೊಟ್ಟ ಭರವಸೆ ಈಡೇರಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ರಕ್ತದಲ್ಲಿ ಬರೆದುಕೊಡುವ ಅವಶ್ಯಕತೆ ಇಲ್ಲ. 150 ಸ್ಥಾನ ಯಾರಿಗೆ ನೀಡಬೇಕು ಎಂಬುದು ಜನ ನಿರ್ಧಾರ ಮಾಡುತ್ತಾರೆ. ನಮಗೆ ಜನರ ಮೇಲೆ ವಿಶ್ವಾಸವಿದೆ. ಸಂಪೂರ್ಣ ಬಹುಮತ ನೀಡುತ್ತಾರೆ. ಅಲ್ಲದೆ ಬಿ.ಎಸ್.ವೈ ಅವರು ಜನರ ನಾಡಿಮಿಡಿತ ಅರಿತಿದ್ದು, ಅವರ ಅನುಭವದ ಪ್ರಕಾರ ಬಿಜೆಪಿ ಹೆಚ್ಚಿನ ಸ್ಥಾನ ಪಡೆದು ಅಧಿಕಾರಕ್ಕೆರಲಿದೆ ಎಂದು ತಿಳಿಸಿದರು.
ಚುನಾವಣೆಯಲ್ಲಿ ಜನರಿಗೆ ಮೋಸ ಮಾಡಲೆಂದೆ ಕಾಂಗ್ರೆಸ್ ಗ್ಯಾರಂಟಿ ಭರವಸೆ ನೀಡುತ್ತಿದೆ. ಕಾಂಗ್ರೆಸ್ ನಾಯಕರ ಮೇಲೆ ಜನರ ವಿಶ್ವಾಸವಿಲ್ಲ. ಅದಕ್ಕೆ ಕಾರ್ಡ್ ಕೊಡುತ್ತಿದ್ದಾರೆ. ಜನರಿಗೆ ದಾರಿತಪ್ಪಿಸುವ ಹೊಸ ತಂತ್ರವಷ್ಟೆ ಎಂದು ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಲೇವಡಿ ಮಾಡಿದರು.
ಪ್ರಧಾನಿ ಮೋದಿಯವರು ಸಂವಾದದಲ್ಲಿ ಬೂತ್ ಗೆಲ್ಲುವ ಮೂಲಕ ಕ್ಷೇತ್ರ ಗೆಲ್ಲುವ ಅಂಶವನ್ನು ಒತ್ತಿ ಹೇಳಿದ್ದಾರೆ. ಆ ನಿಟ್ಟಿನಲ್ಲಿ ಪಕ್ಷದಲ್ಲಿ ಸಂಘಟನೆ ಮತ್ತು ಚುನಾವಣೆ ತಂತ್ರ ಮಾಡಲಾಗಿದೆ. ಡಬಲ್ ಎಂಜಿನ ಸರ್ಕಾರ ಪೂರಕವಾಗಿದೆ ಎಂದು ಹೇಳಿದ್ದಾರೆ. ಕುರಿತು ಹೇಳಿದ್ದಾರೆ. ಮೂಲಸೌಕರ್ಯ ಸೇರಿದಂತೆ ರಾಜ್ಯದಲ್ಲಿ ನಡೆದ ಅಭಿವೃದ್ಧಿ ಕಾರ್ಯದ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ
MUST WATCH
ಹೊಸ ಸೇರ್ಪಡೆ
Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!
Swindon Borough ಕೌನ್ಸಿಲ್ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ
Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು
Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ