ಸುಲಲಿತ ಆನ್‌ಲೈನ್‌ ಸಾಲ ಪಡೆದು ವಂಚನೆಗೆ ಒಳಗಾದ ಯುವಕನಿಂದ ಪೊಲೀಸರಿಗೆ ದೂರು


Team Udayavani, Apr 29, 2023, 5:20 AM IST

mobile

ಉಪ್ಪಿನಂಗಡಿ: ಯಾವುದೇ ವಿಳಂಬವಿಲ್ಲದೆ ಸಾಲ ನೀಡುವ ಆನ್‌ಲೈನ್‌ ಆ್ಯಪ್‌ಗಳ ಮೂಲಕ ಸಾಲ ಪಡೆದ ಯುವಕನೋರ್ವ ಸಾಲವನ್ನು ಹಿಂತಿರುಗಿಸಿದ ಬಳಿಕವೂ ಸಾಲ ಬಾಕಿ ಇದೆ ಎಂದು ಪ್ರಕಟಿಸಿ ಯುವಕನ ಫೋಟೋವನ್ನು ಅಶ್ಲೀಲ ದೃಶ್ಯಾವಳಿಗೆ ಜೋಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟು ಮಾನಹಾನಿಗೊಳಿಸುತ್ತಿರುವ ಕೃತ್ಯದ ವಿರುದ್ಧ ನೊಂದ ಯುವಕ ಸೈಬರ್‌ ಕ್ರೈಂ ವಿಭಾಗದ ಪೊಲೀಸರಿಗೆ ದೂರು ನೀಡಿದ್ದಾರೆ.

ಉಪ್ಪಿನಂಗಡಿಯ ಹಿತೇಶ್‌ ಕುಮಾರ್‌ ಎಂಬ ಯುವಕನೇ ವಂಚನೆಗೆ ತುತ್ತಾದ ನತದೃಷ್ಟನಾಗಿದ್ದು, ಈತ ಸುಲಲಿತವಾಗಿ ಸಾಲ ಒದಗಿಸುವ ಆನ್‌ಲೈನ್‌ ಆ್ಯಪ್‌ ಮೂಲಕ ಸಾಲ ಪಡೆದು, ಸಾಲದ ಮೊತ್ತವನ್ನು ನಿಯಮಿತವಾಗಿ ಮರುಪಾವತಿ ಮಾಡಿರುತ್ತಾರೆ. ಆದಾಗ್ಯೂ ಸಾಲ ಇನ್ನೂ ಬಾಕಿ ಇದೆ ಎನ್ನುತ್ತಾ ಸಂದೇಶ ಕಳುಹಿಸುತ್ತಿದ್ದ ಆ್ಯಪ್‌ನಲ್ಲಿನ ಮಂದಿ ಮಾನಸಿಕ ಹಿಂಸೆ ನೀಡಲು ಮುಂದಾಗುತ್ತಾರೆ. ಇದಕ್ಕೆ ನಿರ್ಲಕ್ಷ್ಯ ನೀತಿಯನ್ನು ಅನುಸರಿಸಿದಾಗ, ಹಿತೇಶ್‌ ಕುಮಾರ್‌ ಅವರ ಭಾವಚಿತ್ರವನ್ನು ಅಶ್ಲೀಲ ದೃಶ್ಯಾವಳಿಗೆ ಜೋಡಿಸಿಕೊಂಡು, ಸದ್ರಿ ದೃಶ್ಯಾವಳಿಗಳನ್ನು ಹಿತೇಶ್‌ ಅವರ ಗೆಳೆಯರ ಬಳಗಕ್ಕೆ ರವಾನಿಸಿ ತೇಜೋವಧೆ ಮಾಡುತ್ತಿರುವ ಕೃತ್ಯಗಳನ್ನು ಎ. 23ರಿಂದ ಮಾಡುತ್ತಿದ್ದಾರೆಂದು ಆರೋಪಿಸಿ ಪೊಲೀಸರಿಗೆ ನೀಡಲಾದ ದೂರಿನಲ್ಲಿ ತಿಳಿಸಲಾಗಿದೆ.

ಸಾಲದ ಮರುಪಾವತಿಯ ದಾಖಲೆಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಅಶ್ಲೀಲ ದೃಶ್ಯಾವಳಿಗಳ ದಾಖಲೆಗಳನ್ನು ಲಗತ್ತೀಕರಿಸಿ ನೀಡಲಾದ ದೂರನ್ನು ಸ್ವೀಕರಿಸಿದ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕಾರಣವಿಲ್ಲದೆ ನಡೆಯುತ್ತಿರುವ ಆತ್ಮಹತ್ಯೆ ಪ್ರಕರಣಗಳಲ್ಲಿ ಇಂತಹ ಬೆದರಿಕೆ ತಂತ್ರಗಳೇ ದುಷೆøàರಣೆ ನೀಡುತ್ತಿದ್ದು, ಸಂತ್ರಸ್ತರು ಯಾವುದೇ ಹಿಂಜರಿಕೆ ಇಲ್ಲದೆ ಪೊಲೀಸ್‌ ಇಲಾಖೆಗೆ ದೂರು ಸಲ್ಲಿಸಿ ನ್ಯಾಯ ದೊರಕಿಸಿಕೊಳ್ಳಬಹುದೆಂದು ಪೊಲೀಸ್‌ ಅಧಿಕಾರಿಗಳು ವಿನಂತಿಸಿದ್ದಾರೆ.

ಟಾಪ್ ನ್ಯೂಸ್

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Monsoon: ಭತ್ತ ಬೇಸಾಯದ ನಿರೀಕ್ಷೆ ಮೂಡಿಸಿದ ಮಳೆ; ಉಳುಮೆಗೆ ಪೂರ್ವ ತಯಾರಿ

Monsoon: ಭತ್ತ ಬೇಸಾಯದ ನಿರೀಕ್ಷೆ ಮೂಡಿಸಿದ ಮಳೆ; ಉಳುಮೆಗೆ ಪೂರ್ವ ತಯಾರಿ

5

ಲಕ್ಷದ್ವೀಪ ಪ್ರವಾಸೋದ್ಯಮದ ಅವಕಾಶ ಬಳಸಿಕೊಳ್ಳುವಲ್ಲಿ ಮಂಗಳೂರು ಹಿನ್ನಡೆ

ISIS case: ಅಮ್ಮರ್‌ ಅಬ್ದುಲ್‌ಗೆ ಜಾಮೀನು

ISIS case: ಅಮ್ಮರ್‌ ಅಬ್ದುಲ್‌ಗೆ ಜಾಮೀನು

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.