ಚೀನಾ ರಕ್ಷಣಾ ಸಚಿವರ ಕೈಲುಕಲಿಲ್ಲ ರಾಜನಾಥ್‌

ಭಾರತ-ಚೀನಾ ಬಾಂಧವ್ಯವೃದ್ಧಿಗೆ ಗಡಿಯಲ್ಲಿ ಶಾಂತಿ ನೆಲೆಸುವುದು ಅಗತ್ಯ -ಚೀನಾಕ್ಕೆ ಖಡಕ್‌ ಸಂದೇಶ

Team Udayavani, Apr 29, 2023, 7:53 AM IST

RAJNATH CHINA

ನವದೆಹಲಿ: ಶಾಂಘೈ ಸಹಕಾರ ಸಂಘ(ಎಸ್‌ಸಿಒ)ದ ರಕ್ಷಣಾ ಸಚಿವರ ಸಮಾವೇಶವು ಶುಕ್ರವಾರ ನವದೆಹಲಿಯಲ್ಲಿ ನಡೆದಿದ್ದು, ಗಡಿಯಲ್ಲಿ ಪದೇಪದೆ ಕಿರಿಕ್‌ ಮಾಡುತ್ತಿರುವ ಚೀನಾ ಮತ್ತು ಪಾಕಿಸ್ತಾನಕ್ಕೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಖಡಕ್‌ ಸಂದೇಶ ರವಾನಿಸಿದ್ದಾರೆ.

ಮತ್ತೂಂದು ವಿಶೇಷವೆಂದರೆ, ಚೀನಾ ರಕ್ಷಣಾ ಸಚಿವ ಜನರಲ್‌ ಲಿ ಶಾಂಗ್ಫು ಅವರೊಂದಿಗೆ 45 ನಿಮಿಷಗಳ ಕಾಲ ಮಾತುಕತೆ ನಡೆಸಿದರೂ, ಅವರೊಂದಿಗೆ ರಾಜನಾಥ್‌ ಹಸ್ತಲಾಘವ ಮಾಡಲಿಲ್ಲ. ತಜಕಿಸ್ತಾನ, ಇರಾನ್‌ ಮತ್ತು ಕಜಕ್‌ ರಕ್ಷಣಾ ಸಚಿವರಿಗೆ ಹಸ್ತಲಾಘವ ಮಾಡಿ ಕುಶಲೋಪರಿ ವಿಚಾರಿಸಿದ ರಾಜನಾಥ್‌, ಚೀನಾ ರಕ್ಷಣಾ ಸಚಿವರೊಂದಿಗೆ ಮಾತ್ರ ಈ ಆತ್ಮೀಯತೆ ಪ್ರದರ್ಶಿಸದೇ ಅಚ್ಚರಿ ಮೂಡಿಸಿದರು.

ಒಂದುಕಡೆ ಗಡಿ ವಿಚಾರವಾಗಿ ಚೀನಾಗೆ, ಭಯೋತ್ಪಾದನೆ ವಿಚಾರವಾಗಿ ಪಾಕಿಸ್ತಾನಕ್ಕೆ ರಾಜನಾಥ್‌ ಪಾಠ ಮಾಡಿದರು. ಭಾರತ ಮತ್ತು ಚೀನಾದ ಸಂಬಂಧವೃದ್ಧಿಯು ಗಡಿಪ್ರದೇಶದಲ್ಲಿನ ಶಾಂತಿ-ನೆಮ್ಮದಿಯನ್ನು ಅವಲಂಬಿಸಿದೆ ಎಂದ ಸಿಂಗ್‌, ಎಲ್‌ಎಸಿಯಲ್ಲಿನ ಎಲ್ಲ ವಿವಾದಗಳಿಗೂ ದ್ವಿಪಕ್ಷೀಯ ಒಪ್ಪಂದಗಳು ಹಾಗೂ ಬದ್ಧತೆಗಳ ಅನುಸಾರವೇ ಪರಿಹಾರ ಕಂಡುಕೊಳ್ಳಬೇಕಿದೆ ಎಂದರು. ಅಲ್ಲದೇ, ಒಪ್ಪಂದಗಳ ಉಲ್ಲಂಘನೆಯು ದ್ವಿಪಕ್ಷೀಯ ಬಾಂಧವ್ಯ ಮತ್ತು ಗಡಿಯಲ್ಲಿನ ಸೇನೆ ವಾಪಸಾತಿಯ ಅಡಿಪಾಯವನ್ನೇ ಅಲುಗಾಡಿಸಿದೆ ಎಂದೂ ಹೇಳಿದರು.

ಇದಾದ ಬೆನ್ನಲ್ಲೇ ಮಾತನಾಡಿದ ಚೀನಾ ರಕ್ಷಣಾ ಸಚಿವ ಜ. ಲಿ ಶಾಂಗ್ಫು, “ಗಡಿಯಲ್ಲಿನ ಪರಿಸ್ಥಿತಿಯು ಸದ್ಯಕ್ಕೆ ಸ್ಥಿರವಾಗಿದ್ದು, ಉಭಯ ದೇಶಗಳು ಸೂಕ್ತ ನಿರ್ಧಾರ ಕೈಗೊಂಡು, ಅದನ್ನು ಸಹಜ ಸ್ಥಿತಿಗೆ ಮರಳಿಸಬೇಕು” ಎಂದಿದ್ದಾರೆ. ಭಾರತ ಮತ್ತು ಚೀನಾ ಒಂದಾಗಿ ಎರಡೂ ದೇಶಗಳ ಸೇನೆಯ ನಡುವೆ ಪರಸ್ಪರ ವಿಶ್ವಾಸ ಬಲಗೊಳ್ಳುವಂತೆ ಮಾಡಬೇಕು. ದ್ವಿಪಕ್ಷೀಯ ಸಂಬಂಧವೃದ್ಧಿಗೆ ಸೂಕ್ತ ಕೊಡುಗೆಗಳನ್ನು ನೀಡಬೇಕು ಎಂದೂ ಅವರು ಸಲಹೆ ನೀಡಿದರು.

ಈ ನಡುವೆ, ಸಚಿವ ರಾಜನಾಥ್‌ ಅವರು ರಷ್ಯಾ ರಕ್ಷಣಾ ಸಚಿವ ಜನರಲ್‌ ಸೆರ್ಗೆ ಶೊಯಿಗು ಹಾಗೂ ಉಜ್ಬೆಕ್‌ ರಕ್ಷಣಾ ಸಚಿವರೊಂದಿಗೂ ಪ್ರತ್ಯೇಕ ಮಾತುಕತೆ ನಡೆಸಿದ್ದು ಕಂಡುಬಂತು.

ಭಯೋತ್ಪಾದನೆಯನ್ನು ಬೇರುಸಮೇತ ಕಿತ್ತು ಹಾಕೋಣ

ಎಲ್ಲ ರೀತಿಯ ಭಯೋತ್ಪಾದನೆಗಳನ್ನೂ ನಿರ್ಮೂಲನೆ ಮಾಡಲು ಮತ್ತು ಉಗ್ರರಿಗೆ ಬೆಂಬಲ ನೀಡುವವರನ್ನೇ ಉಗ್ರಕೃತ್ಯಗಳಿಗೆ ಹೊಣೆಗಾರರನ್ನಾಗಿಸಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಶಾಂಘೈ ಸಹಕಾರ ಸಂಘದ ಸದಸ್ಯ ರಾಷ್ಟ್ರಗಳಿಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಕರೆ ನೀಡಿದರು. ಎಸ್‌ಸಿಒ ದೇಶಗಳ ರಕ್ಷಣಾ ಸಚಿವರ ಸಮಾವೇಶದಲ್ಲಿ ಮಾತನಾಡಿದ ಅವರು, ಯಾವುದೇ ರೀತಿಯ ಭಯೋತ್ಪಾದನಾ ಕೃತ್ಯ ಮತ್ತು ಅದಕ್ಕೆ ನೀಡುವ ಬೆಂಬಲವು ಇಡೀ ಮಾನವತೆಯ ವಿರುದ್ಧ ನಡೆಸುವ ಅಪರಾಧವಾಗಿದೆ. ಒಂದು ದೇಶವು ಉಗ್ರರಿಗೆ ಆಶ್ರಯ ನೀಡುತ್ತಿದ್ದರೆ, ಅದು ಕೇವಲ ಇತರರಿಗೆ ಮಾತ್ರವಲ್ಲ, ಆ ದೇಶಕ್ಕೂ ಅಪಾಯವನ್ನು ಉಂಟುಮಾಡಲಿದೆ. ಯುವಕರನ್ನು ತೀವ್ರಗಾಮಿಗಳಾಗಿ ರೂಪಿಸುವುದರಿಂದ ಭದ್ರತೆಗಷ್ಟೇ ಸಮಸ್ಯೆಯಲ್ಲ, ಬದಲಿಗೆ ಸಮಾಜದ ಸಾಮಾಜಿಕ-ಆರ್ಥಿಕ ಪ್ರಗತಿಗೂ ಅದು ಅಡ್ಡಿ ಉಂಟುಮಾಡಲಿದೆ ಎಂದೂ ಹೇಳಿದರು. ಪಾಕಿಸ್ತಾನ ಹೊರತುಪಡಿಸಿ ಉಳಿದ ಎಲ್ಲ ಸದಸ್ಯ ರಾಷ್ಟ್ರಗಳ ರಕ್ಷಣಾ ಸಚಿವರು ಈ ಸಮಾವೇಶದಲ್ಲಿ ಖುದ್ದು ಭಾಗಿಯಾಗಿದ್ದರು. ಪಾಕ್‌ ರಕ್ಷಣಾ ಸಚಿವರು ವರ್ಚುವಲ್‌ ಆಗಿ ಪಾಲ್ಗೊಂಡರು ಎಂದು ಮೂಲಗಳು ತಿಳಿಸಿವೆ.

ಎಸ್‌ಸಿಒ ರಾಷ್ಟ್ರಗಳೊಂದಿಗೆ ಸಂಪರ್ಕ ಸಾಧಿಸುವುದೇ ಭಾರತದ ಆದ್ಯತೆಯಾಗಿದೆ. ದೇಶಗಳ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗಳು° ಗೌರವಿಸಿಕೊಂಡು, ಸುಸ್ಥಿರ ಅಭಿವೃದ್ಧಿ ಸಾಧಿಸುವತ್ತ ಎಲ್ಲರೂ ಗಮನಹರಿಸಬೇಕು.

– ನಿತಿನ್‌ ಗಡ್ಕರಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

CSIR: Opportunity to wear unironed clothes every Monday!

CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.