ಮತದಾನಕ್ಕೆ ಕೆಲವೇ ದಿನ: ಇವಿಎಂ, ವಿವಿಪ್ಯಾಟ್‌ ಬಗ್ಗೆ ತಿಳಿಯಬೇಕೆ?


Team Udayavani, Apr 29, 2023, 4:03 PM IST

ಮತದಾನಕ್ಕೆ ಕೆಲವೇ ದಿನ: ಇವಿಎಂ, ವಿವಿಪ್ಯಾಟ್‌ ಬಗ್ಗೆ ತಿಳಿಯಬೇಕೆ?

ಉಡುಪಿ: ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಜಿಲ್ಲಾಡಳಿತ ಹಾಗೂ ಚುನಾವಣ ಆಯೋಗದ ಮೂಲಕ ಹಲವಾರು ರೀತಿಯ ಪೂರಕ ಕ್ರಮಗಳನ್ನು ನಡೆಸಲಾಗುತ್ತಿದೆ.

ಸಿಬಂದಿಗೆ ತರಬೇತಿ, ಸಭೆಗಳನ್ನು ಆಯೋಜಿಸಿ ವಿವಿಧ ಮಾಹಿತಿ ನೀಡಲಾಗುತ್ತಿದೆ. ಮತದಾನದಂದು ಕಾಣಸಿಗುವ ಇವಿಎಂ (ಇಲೆಕ್ಟ್ರಾನಿಕ್‌ ವೋಟಿಂಗ್‌ ಮೆಶಿನ್‌) ಯಂತ್ರ, ಬ್ಯಾಲೆಟ್‌ ಪೇಪರ್‌ ಬಗ್ಗೆ ಮತದಾರರಿಗೆ ಒಂದು ಕಿರು ಮಾಹಿತಿ ಇಲ್ಲಿದೆ.

ಎಲೆಕ್ಟ್ರಾನಿಕ್‌ ಮಾಧ್ಯಮದ ಮೂಲಕ ಮತದಾನ ಮಾಡಲು ಕಲ್ಪಿಸುವ ಸಾಧನವೇ ಇವಿಎಂ. ಮತದಾನ ಮಾಡುವ ಹಾಗೂ ಮತ ಎಣಿಕೆ ಮಾಡುವ ಸಾಧನ. ಇವಿಎಂನಲ್ಲಿ ಕಂಟ್ರೋಲ್‌ ಯುನಿಟ್‌ ಹಾಗೂ ಬಾಲೆಟಿಂಗ್‌ ಯುನಿಟ್‌ ಎನ್ನುವ ಎರಡು ಸಾಧನಗಳ ಮೂಲಕ ಇವಿಎಂ ಮಷಿನ್‌ ಅನ್ನು ವಿನ್ಯಾಸ ಮಾಡಲಾಗಿದೆ.

ತಾನು ಉದ್ದೇಶಿಸಿದ ಅಭ್ಯರ್ಥಿಗೆ ಮತ ಬಿದ್ದಿದೆಯೇ ಇಲ್ಲವೇ ಎಂದು ಮತದಾರ ಖಾತರಿಪಡಿಸಿಕೊಳ್ಳಲು ಇರುವ ಯಂತ್ರವೇ ವಿವಿಪ್ಯಾಟ್‌ (ವೋಟರ್‌ ವೆರಿಫೈಯೆಬಲ್‌ ಪೇಪರ್‌ ಟ್ರಾಯಲ್‌) ಮೆಷಿನ್‌. ಇವಿಎಂನಲ್ಲಿ ಮತದಾನ ಮಾಡಿದ ಕೂಡಲೇ ವಿವಿಪ್ಯಾಟ್‌ನಲ್ಲಿ ಮತದಾರ ಗುಂಡಿ ಒತ್ತಿದ ಕೂಡಲೇ ಮತ ಚಲಾಯಿಸಿದ ಅಭ್ಯರ್ಥಿಯ ಹೆಸರು, ಚಿಹ್ನೆ, ಕ್ರಮ ಸಂಖ್ಯೆ ಮುಂತಾದ ಮಾಹಿತಿಗಳು ಕಾಣಿಸಿಕೊಳ್ಳುತ್ತವೆ. ಅದು ಮುದ್ರಣ ಕೂಡ ಆಗುತ್ತದೆ. ಈ ಚೀಟಿ 7 ಸೆಕೆಂಡುಗಳ ಕಾಲ ಮತದಾರರಿಗೆ ಕಾಣಿಸಿಕೊಂಡು ಬಳಿಕ ಬಾಕ್ಸ್‌ನೊಳಗೆ ಬೀಳುತ್ತದೆ. ಚುನಾವಣೆ ಮೋಸ ತಡೆಯಲು ಈ ಯಂತ್ರವನ್ನು ವಿನ್ಯಾಸಗೊಳಿಸಲಾಗಿದೆ. ಇವಿಎಂ ಹಾಗೂ ವಿವಿಪ್ಯಾಟ್‌ ತಾಳೆಯಾಗದಿದ್ದರೆ, ವಿವಿಪ್ಯಾಟ್‌ನಲ್ಲಿ ಮುದ್ರಣವಾಗಿರುವ ಚೀಟಿಗಳನ್ನು ಎಣಿಕೆ ಮಾಡಲಾಗುತ್ತದೆ.

ಇವಿಎಂನಲ್ಲಿ ಕೇವಲ ಕಂಟ್ರೋಲ್‌ ಯುನಿಟ್‌ ಮತ್ತು ಬ್ಯಾಲೆಟ್‌ ಯುನಿಟ್‌ ಇರುತ್ತದೆ. ಬ್ಯಾಲೆಟ್‌ ಯುನಿಟ್‌ ಅಂದರೆ ಮತ ಚಲಾಯಿಸುವ ಯಂತ್ರ. ಕಂಟ್ರೋಲ್‌ ಯುನಿಟ್‌ ಅಂದರೆ ಈ ಮತಗಳು ಹೋಗಿ ಸಂಗ್ರಹವಾಗುವ ಯಂತ್ರ. ವಿವಿ ಪ್ಯಾಟ್‌ನಲ್ಲಿ ಇವುಗಳ ಜತೆಗೆ ವಿವಿ ಪ್ಯಾಟ್‌ ಯಂತ್ರ ಇರುತ್ತದೆ. ಇದು ಬ್ಯಾಲೆಟ್‌ ಯುನಿಟ್‌ ಪಕ್ಕದಲ್ಲಿರುತ್ತದೆ.
ಜಿಲ್ಲೆಗೆ ಈಗಾಗಲೇ ಇವಿಎಂ ಯಂತ್ರಗಳು ಆಗಮಿಸಿದ್ದು, ಆಯಾ ವಿಧಾನಸಭಾ ಕ್ಷೇತ್ರಗಳಿಗೆ ಹಂಚಿಕೆಯಾಗಿದೆ. 1,111 ಮತಗಟ್ಟೆಗಳಿಗೆ ಶೇ.120 ಇವಿಎಂ ಮತಯಂತ್ರಗಳನ್ನು ಹಂಚಿಕೆ ಮಾಡಲಾಗಿದೆ. ಎಲ್ಲ ಕ್ಷೇತ್ರಗಳಿಗೆ ತಲಾ ಶೇ. 20 ಹೆಚ್ಚುವರಿ ಯಂತ್ರಗಳನ್ನು ನೀಡಲಾಗಿದೆ. ಶೇ. 30 ಹೆಚ್ಚುವರಿ ವಿವಿ ಪ್ಯಾಟ್‌ಗಳನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Untitled-1

ಪವಿತ್ರಾ – ಚಂದು ಪ್ರೀತಿಯಲ್ಲಿದ್ದರು.. ಆತ ನನ್ನ ಗಂಡ ಎಂದಿದ್ದರಂತೆ ಪವಿತ್ರಾ – ಚಂದು ಪತ್ನಿ

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.