ಸಿಎಂ ಚರ್ಚೆ ಅನಗತ್ಯ: ಬಿಎಸ್ವೈ
Team Udayavani, Apr 30, 2023, 6:06 AM IST
ಹುಣಸಗಿ: ರಾಜ್ಯದಲ್ಲಿ ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂದು ನಮಗೆ ಗೊತ್ತಿದೆ. ಈ ಬಗ್ಗೆ ಚರ್ಚೆ ಅನಗತ್ಯ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಬಿಜೆಪಿಯನ್ನು ಅ ಧಿಕಾರಕ್ಕೆ ತರುವುದೇ ನಮ್ಮ ಗುರಿಯಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಪ್ರಚಾರ ನಡೆಸಿದ್ದು, ಬಿಜೆಪಿ 140ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಸ್ವತಂತ್ರ ಸರಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಡಾ| ಜಿ. ಪರಮೇಶ್ವರ ಮೇಲೆ ಹಲ್ಲೆ ನಡೆದಿರುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತನಿಖೆಗೆ ಆದೇಶಿಸಿದ್ದಾರೆ. ಈ ಘಟನೆಯನ್ನು ಖಂಡಿಸುತ್ತೇನೆ ಎಂದರು. ಯತ್ನಾಳ್ “ವಿಷಕನ್ಯೆ’ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾರೂ ಕೆಟ್ಟದಾಗಿ ಮಾತನಾಡಬಾರದು. ಪಕ್ಷದ ಎಲ್ಲ ಮುಖಂಡರಿಗೂ ಈ ಬಗ್ಗೆ ಹೇಳುತ್ತೇನೆ ಎಂದರು.