ಮುದ್ದೇಬಿಹಾಳ: ಗಾಳಿಗೆ ಮರ ಮುರಿದು ಬಿದ್ದು ಕಲಾವಿದರಾಗಿದ್ದ ಶಿಕ್ಷಕ ಮೃತ್ಯು
Team Udayavani, Apr 30, 2023, 10:02 PM IST
ಮುದ್ದೇಬಿಹಾಳ: ಮರ ಮೈಮೇಲೆ ಮುರಿದು ಬಿದ್ದು ಕಲಾವಿದರೂ ಆಗಿದ್ದ ಶಿಕ್ಷಕ ಪ್ರಕಾಶ ವೀರಭದ್ರಪ್ಪ ಛಲವಾದಿ (35) ದುರಂತ ಸಾವನ್ನಪ್ಪಿರುವ ಘಟನೆ ಆಲಮಟ್ಟಿ ಮುಖ್ಯ ರಸ್ತೆಯ ಹುಲ್ಲೂರ ಗ್ರಾಮದ ಹಳ್ಳದ ಹತ್ತಿರ ರವಿವಾರ ಸಂಜೆ ನಡೆದಿದೆ.
ಬಾಗಲಕೋಟೆ ಜಮಖಂಡಿ ತಾಲೂಕು ಚಿಮ್ಮಡ ಗ್ರಾಮದವರಾಗಿದ್ದ ನಿಡಗುಂದಿಯಲ್ಲಿ ಮನೆ ಮಾಡಿ ಕುಟುಂಬ ಸಮೇತ ವಾಸವಿದ್ದ ವೀರಭದ್ರಪ್ಪ ಅವರು ಮುದ್ದೇಬಿಹಾಳ ತಾಲೂಕು ಸಿದ್ದಾಪೂರ ಪಿಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿದ್ದು ಪ್ರಭಾರಿ ಮುಖ್ಯಾಧ್ಯಾಪಕರಾಗಿಯೂ ಜವಾಬ್ಧಾರಿ ನಿರ್ವಹಿಸುತ್ತಿದ್ದರು.
ಚುನಾವಣಾ ಆಯೋಗದ ನಿರ್ದೇಶನದ ಅನ್ವಯ ರವಿವಾರ ಬೆಳಗ್ಗೆ ಗ್ರಾಮದಲ್ಲಿ ನಡೆದ ನಮ್ಮ ಮತ ನಮ್ಮ ಹಕ್ಕು ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಮಧ್ಯಾಹ್ನ ಮುದ್ದೇಬಿಹಾಳದಲ್ಲಿ ನಡೆದ ಶಿಕ್ಷಕ ದಂಪತಿ ಬಿ.ವಿ.ಕೋರಿ ಮತ್ತು ಸರೋಜಾ ಕಿತ್ತೂರ ದಂಪತಿಯರ ಪುತ್ರಿಯ ಮದುವೆಯಲ್ಲಿ ಭಾಗವಹಿಸಿದ್ದರು. ಸಂಜೆ ಜೋರಾಗಿ ಗಾಳಿ ಬೀಸುತ್ತಿದ್ದರೂ ಲೆಕ್ಕಿಸದೆ ಬೈಕ್ ಮೇಲೆ ನಿಡಗುಂದಿಗೆ ಹೊರಟಾಗ ಜೋರಾದ ಗಾಳಿಗೆ ಬೇವಿನ ಮರ ಮುರಿದು ಇವರ ಮೇಲೆ ಬಿದ್ದಿದೆ. ಅದರ ಕೆಳಗೆ ಸಿಕ್ಕ ಇವರ ಪ್ರಾಣಪಕ್ಷಿ ಸ್ಥಳದಲ್ಲೇ ಹಾರಿಹೋಗಿದೆ.
ಜೋರಾದ ಗಾಳಿ ಮಳೆಯ ಕಾರಣ ಯಾರೂ ಈ ಘಟನೆ ಗಮನಿಸಿದ್ದಿಲ್ಲ. ಇವರ ದುರಂತ ಸಾವು ಇಡೀ ಶಿಕ್ಷಕ ವಲಯದಲ್ಲಿ ಅಪಾರ ಶೋಕದ ಮೂಡಿಸಿದೆ. ಕಲಾವಿದರೂ, ಗಾಯಕರು, ಸಾಹಿತಿ, ಕವಿ ಹೀಗೆ ಬಹುಮುಖ ವ್ಯಕ್ತಿತ್ವ ಹೊಂದಿದ್ದ ಇವರು ಹಲವು ಕಡೆಗಳಲ್ಲಿ ತಂಡದೊಂದಿಗೆ ವೇದಿಕೆ ಪ್ರದರ್ಶನವನ್ನೂ ನೀಡುತ್ತಿದ್ದರು. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು