ಉಪ್ಪಿನಂಗಡಿ: 7 ಅಂಗಡಿಗಳಿಗೆ ನುಗ್ಗಿ ಕಳ್ಳತನ
Team Udayavani, May 1, 2023, 6:17 AM IST
ಉಪ್ಪಿನಂಗಡಿ: ಇಲ್ಲಿನ ಬ್ಯಾಂಕ್ ರಸ್ತೆಯಲ್ಲಿನ 7 ಅಂಗಡಿಗಳಿಗೆ ಶನಿವಾರ ರಾತ್ರಿ ವೇಳೆ ನುಗ್ಗಿ ಹಲವಾರು ವಸ್ತುಗಳನ್ನು ಕಳ್ಳತನಗೈದ ಘಟನೆ ನಡೆದಿದೆ.
ಉಪ್ಪಿನಂಗಡಿ ಹಳೆ ಬಸ್ ನಿಲ್ದಾಣದ ಬಳಿಯ ಚಿನ್ನ – ಬೆಳ್ಳಿ ಆಭರಣದ ಅಂಗಡಿಯ ಮಾಡಿನ ಹೆಂಚು ತೆಗೆದು ಒಳ ನುಗ್ಗಿದ ಕಳ್ಳ ಚಿನ್ನಾಭರಣದ ತಿಜೋರಿಯ ಬಾಗಿಲು ತೆರೆಯಲು ವಿಫಲವಾಗಿ, ಚಿಲ್ಲರೆ ಮೊತ್ತವನ್ನು ಎಗರಿಸಿದ್ದಾನೆ. ಸನಿಹದ ಮೆಡಿಕಲ್ ಶಾಪಿನ ಹೆಂಚು ತೆಗೆದು ಒಳ ನುಗ್ಗಿದ ಕಳ್ಳ, ಅಂಗಡಿ ಯೊಳಗಿದ್ದ ಮೊಬೈಲ್ವೊಂದನ್ನು ಕದ್ದೊಯ್ದಿದ್ದು, ಹಣಕ್ಕಾಗಿ ಹುಡುಕಾಟ ನಡೆಸಿದ್ದಾನೆ. ಅದೇ ಕಟ್ಟಡದ ಜವುಳಿ ಅಂಗಡಿಗೂ ಮಾಡಿನ ಹೆಂಚು ತೆಗೆದು ನುಗ್ಗಿದ ಸ್ನಾನಕ್ಕೆ ಬಳಸುವ 2 ಟೆವೆಲ್ ಕದ್ದೊಯ್ದಿದ್ದಾನೆ.
ಇದೇ ರಸ್ತೆಯ ಕೆನರಾ ಬ್ಯಾಂಕ್ ಸನಿಹದ ಹೊಟೇಲ್, ಫರ್ನಿಚರ್ ಅಂಗಡಿ, ಜನರಲ್ ಸ್ಟೋರ್, ದಿನಸಿ ಅಂಗಡಿ ಕಟ್ಟಡಗಳಿಗೂ ಒಳ ನುಗ್ಗಿದ ಕಳ್ಳ ಅಲ್ಲಿಂದಲೂ ಕೈಗೆ ದೊರೆತ ವಸ್ತುಗಳನ್ನೆಲ್ಲ ಎಗರಿಸಿದ್ದಾನೆ. ಫನಿರ್ಚರ್ ಅಂಗಡಿಯೊಳಗಿದ್ದ ಬೆಲೆ ಬಾಳುವ ವಾಚೊಂದನ್ನು ಕದ್ದೊಯ್ದಿದ್ದು, ಎಲ್ಲೆಡೆ ಅಂಗಡಿಯ ಮಾಡಿನಿಂದಲೇ ಕಳ್ಳ ಒಳಪ್ರವೆಶಿಸಿದ ನಡೆ ವ್ಯಕ್ತವಾಗಿದೆ. ಈ 7 ಪ್ರಕರಣಗಳಿಗೂ ಸಾಮ್ಯತೆ ಇದ್ದು, ಓರ್ವನೇ ನಡೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಸಿಸಿ ಕೆಮರಾದಲ್ಲಿ ಕಳ್ಳನ ಭಾವ ಚಿತ್ರ ಸ್ಪಷ್ಟವಾಗಿ ಸೆರೆಯಾಗಿದ್ದು, ಪ್ರತಿಯೊಂದು ಅಂಗಡಿಯೊಳಕ್ಕೆ ನುಗ್ಗಿದಾಕ್ಷಣದಲ್ಲೇ ಕಳ್ಳ ಸಿಸಿ ಕೆಮ ರಾದ ದಿಕ್ಕು ಬದಲಾಯಿಸುವ ಪ್ರಯತ್ನ ಮಾಡಿದ್ದು, ಆ ವೇಳೆ ಆತನ ಮುಖ ಕೆಮರಾದಲ್ಲಿ ಸೆರೆಯಾಗಿದೆ.
ಉಪ್ಪಿನಂಗಡಿ ಪೊಲೀಸರು ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Sandalwood: ದರ್ಶನ್ ʼಡೆವಿಲ್ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್ ಪೋಸ್ಟರ್ ಔಟ್
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ
Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ