‘ಜನತಾ ಪ್ರಣಾಳಿಕೆ’ ಇದು ಜನರೇ ಅನುಷ್ಠಾನಕ್ಕೆ ತರಬೇಕೇ ಹೊರತು ಸರ್ಕಾರ ಅಲ್ಲ: ಸಿದ್ದು ಲೇವಡಿ


Team Udayavani, May 1, 2023, 7:24 PM IST

siddu

ಬೆಂಗಳೂರು: ಭಾರತೀಯ ಜನತಾ ಪಕ್ಷ ಬಿಡುಗಡೆ ಮಾಡಿರುವ ಪ್ರಣಾಳಿಕೆಗೆ ‘’ಜನತಾ ಪ್ರಣಾಳಿಕೆ’’ ಎಂದು ಕರೆದಿರುವುದು ಅರ್ಥಪೂರ್ಣವಾಗಿದೆ. ಈ ಪ್ರಣಾಳಿಕೆಯನ್ನು ಜನತೆಯೇ ಅನುಷ್ಠಾನಕ್ಕೆ ತರಬೇಕೇ ಹೊರತು ಸರ್ಕಾರ ಅಲ್ಲ ಎನ್ನುವದೇ ಇದರ ಅರ್ಥವಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಅನ್ನ, ಅಭಯ, ಅಕ್ಷರ, ಅಭಿವೃದ್ದಿ ಮತ್ತು ಆದಾಯಗಳ ಭರವಸೆಗಳನ್ನು ನೀಡಿದೆ. ಕಳೆದ ಮೂರು ವರೆ ವರ್ಷಗಳ ಅವಧಿಯ ರಾಜ್ಯದ ಬಿಜೆಪಿ ಸರ್ಕಾರ ಈ ಐದು ಭರವಸೆಗಳನ್ನು ಜನರಿಂದ ಕಸಿದುಕೊಂಡಿದೆ.

ಪಡಿತರ ಚೀಟಿ ಮೂಲಕ ನೀಡಲಾಗುತ್ತಿದ್ದ 7 ಕಿಲೋ ಅಕ್ಕಿಯನ್ನು ಐದು ಕಿಲೋಗಳಿಗೆ ಇಳಿಸಿ ಅನ್ನವನ್ನು ಕಸಿದುಕೊಂಡಿದೆ.
ರಾಜ್ಯದಲ್ಲಿ 10.12 ಲಕ್ಷ ಮಕ್ಕಳು ಶಾಲೆಯನ್ನು ತೊರೆಯುವಂತೆ ಮಾಡುವ ಮೂಲಕ ಅಕ್ಷರವನ್ನು ಕಸಿದುಕೊಂಡಿದೆ.
ಕೊರೊನಾ ರೋಗ ನಿರ್ವಹಣೆಯಲ್ಲಿನ ನಿರ್ಲಕ್ಷ ಮತ್ತು ಭ್ರಷ್ಟಾಚಾರದಿಂದಾಗಿ ಜನತೆಯ ಆರೋಗ್ಯವನ್ನು ಕಸಿದುಕೊಂಡಿದೆ.
ಸರ್ಕಾರದ ಪ್ರತಿಯೊಂದು ಇಲಾಖೆಯಲ್ಲಿಯೂ 40% ಕಮಿಷನ್ ಹಾವಳಿಯ ಮೂಲಕ ಅಭಿವೃದ್ದಿಯನ್ನು ಕಸಿದುಕೊಂಡಿದೆ.
ರಾಜ್ಯದ ಗೃಹಸಚಿವರ ಅದಕ್ಷತೆ ಮತ್ತು ಭ್ರಷ್ಟತೆಯಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚಾಗಿರುವುದು ಮಾತ್ರವಲ್ಲ ರೌಡಿ-ಗೂಂಡಾಗಳೆಲ್ಲ ಮುಕ್ತವಾಗಿ ಓಡಾಡಲು ಸ್ವಾತಂತ್ರ್ಯ ಪಡೆದಿರುವ ಕಾರಣ ಜನತೆಯ ಭದ್ರತೆಯ ಅಭಯವನ್ನೂ ಕಸಿದುಕೊಂಡಿದೆ.

ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ರೂ.410 ರಿಂದ ರೂ.1105ಕ್ಕೆ ಏರಿಸಿರುವ ಮತ್ತು ಅಡುಗೆ ಅನಿಲದ ಮೇಲಿನ ಸಬ್ಸಿಡಿಯನ್ನು ರದ್ದುಪಡಿಸಿರುವ ಬಿಜೆಪಿ ಈಗ ಅಡುಗೆ ಅನಿಲದ ಮೂರು ಸಿಲಿಂಡರ್ ಗಳನ್ನು ಉಚಿತವಾಗಿ ನೀಡುವುದಾಗಿ ಭರವಸೆ ನೀಡುವ ಮೂಲಕ ರಾಜ್ಯದ ಜನರ ಕಿವಿಗೆ ಹೂ ಇಟ್ಟಿದೆ.

ಕಾಂಗ್ರೆಸ್ ಪಕ್ಷ ತನ್ನ ಅಧಿಕಾರವಧಿಯಲ್ಲಿ ರಾಜ್ಯದಾದ್ಯಂತ ಪ್ರಾರಂಭಿಸಿದ್ದ 600 ಇಂದಿರಾ ಕ್ಯಾಂಟೀನ್ ಗಳನ್ನು ರಾಜಕೀಯ ದ್ವೇಷಾಸೂಯೆಯಿಂದ ಮುಚ್ಚಿರುವ ಬಿಜೆಪಿ ಈಗ ಅಟಲ್ ಆಹಾರ ಕೇಂದ್ರಗಳನ್ನು ಪ್ರಾರಂಭಿಸುತ್ತೇವೆ ಎಂದು ಹೇಳಿರುವುದೇ ಹಾಸ್ಯಾಸ್ಪದ.

ಪಡಿತರ ಚೀಟಿಗಳಮೂಲಕ ನೀಡಲಾಗುತ್ತಿದ್ದ ಏಳು ಕಿಲೋ ಉಚಿತ ಅಕ್ಕಿಯನ್ನು ಐದು ಕಿಲೋಗಳಿಗೆ ಇಳಿಸಿದ್ದ ಬಿಜೆಪಿ ಐದು ಕಿಲೋ ಸಿರಿಧಾನ್ಯ ಕೊಡುತ್ತೇವೆ ಎಂದು ಹೇಳಿರುವುದು ಇನ್ನೊಂದು ವಿಪರ್ಯಾಸ.

ಹತ್ತು ಲಕ್ಷ ನಿವೇಶನಗಳನ್ನು ವಿತರಿಸುವ ಭರವಸೆ ನೀಡಿರುವ ಇದೇ ಬಿಜೆಪಿ ಕಳೆದ ಮೂರುವರೆ ವರ್ಷಗಳ ಅವಧಿಯಲ್ಲಿ ಒಂದೇ ಒಂದು ಹೊಸಮನೆಯನ್ನು ನಿರ್ಮಾಣ ಮಾಡಿಲ್ಲ.

ಕಾಂಗ್ರೆಸ್ ಪಕ್ಷ ತನ್ನ ಅಧಿಕಾರವಧಿಯ ಐದು ವರ್ಷಗಳಲ್ಲಿ ಹದಿನೈದು ಲಕ್ಷ ಮನೆಗಳನ್ನು ನಿರ್ಮಾಣ ಮಾಡಿತ್ತು. ಬಿಜೆಪಿ ಸರ್ಕಾರ ನಿರ್ಮಾಣ ಹಂತದಲ್ಲಿದ್ದ ನಮ್ಮ ಕಾಲದ ಮನೆಗಳನ್ನುಪೂರ್ಣಗೊಳಿಸಿ ಅದನ್ನೇ ಸಾಧನೆ ಎಂದು ಹೇಳಿಕೊಳ್ಳುತ್ತಿದೆ.

ಸಣ್ಣ ಕೈಗಾರಿಕೆಗಳು ಮತ್ತು ಐಟಿಐಗಳ ನಡುವೆ ಒಪ್ಪಂದ ಮಾಡಿಕೊಂಡು ಯುವ ಪ್ರತಿಭೆಗಳಿಗೆ ಶಿಕ್ಷಣ ಮತ್ತು ಉದ್ಯೋಗದ ಅವಕಾಶ ಕಲ್ಪಿಸುವ ‘ಸಮನ್ವಯ’ ಯೋಜನೆಯ ಭರವಸೆಯನ್ನು ಬಿಜೆಪಿ ನೀಡಿದೆ.

2019-2022ರ ನಡುವಿನ ಅವಧಿಯಲ್ಲಿ ನಿರುದ್ಯೋಗದ ಪ್ರಮಾಣ ಶೇಕಡಾ 22.9ರಷ್ಟು ಹೆಚ್ಚಾಗಿದೆ. 2021ರ ಅವಧಿಯಲ್ಲಿ ರಾಜ್ಯದಲ್ಲಿ ನಿರುದ್ಯೋಗದ ಕಾರಣದಿಂದಾಗಿ 1,129 ಯುವಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ 1258 ಕಂಪೆನಿಗಳು ರಾಜ್ಯದಲ್ಲಿ ಮುಚ್ಚಿ 60,000 ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಸಾರ್ವಜನಿಕ ಕ್ಷೇತ್ರದ 13 ಉದ್ಯಮಗಳು ಮುಚ್ಚಿವೆ.
ಈ ಅನಾಹುತಗಳಿಗೆಲ್ಲ ಕಾರಣವಾದ ಬಿಜೆಪಿ ಈಗ ಸಮನ್ವಯ ಎಂಬ ಹೊಸ ಯೋಜನೆಯ ಭರವಸೆಯನ್ನು ನೀಡಿದರೆ ನಂಬುವವರು ಯಾರು?

ಐಎಎಸ್/ಕೆಎಎಸ್/ ಬ್ಯಾಂಕಿಂಗ್/ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳ ಪರೀಕ್ಷಾ ತಯಾರಿಯ ಕೋಚಿಂಗ್ ಪಡೆಯಲು ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದೆ.
ಕಳೆದ ಮೂರುವರೆ ವರ್ಷಗಳಲ್ಲಿ ಪಿಎಸ್‌ಐ, ಕೆಪಿಟಿಸಿಎಲ್ ನೇಮಕಾತಿ ಸೇರಿದಂತೆ ಉದ್ಯೋಗ ನೇಮಕಾತಿಯ ಎಲ್ಲ ನಿರ್ಧಾರಗಳು ಅಂತಿಮವಾಗಿ ಲಂಚ/ಕಮಿಷನ್ ಪಡೆದಿರುವ ಹಗರಣಗಳಾಗಿವೆ.

ಮುನ್ಸಿಪಲ್ ಕಾರ್ಪೋರೇಷನ್ ವ್ಯಾಪ್ತಿಯಲ್ಲಿ 400 ‘’ನಮ್ಮ ಕ್ಲಿನಿಕ್’’ ಗಳನ್ನು ತೆರೆಯಲಾಗುವುದು ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಈ ಯೋಜನೆಯನ್ನು 2022-23ರ ಬಜೆಟ್ ನಲ್ಲಿ ಬಿಜೆಪಿ ಸರ್ಕಾರ ಘೋಷಿಸಲಾಗಿದ್ದರೂ ಇಲ್ಲಿಯ ವರೆಗೆ ನೂರು “ನಮ್ಮ ಕ್ಲಿನಿಕ್” ಗಳನ್ನು ತೆರೆದಿಲ್ಲ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: Karnataka Poll: ಶಿರಸಿಯಲ್ಲಿ ಅಂಚೆ ಮತದಾನ ಮಾಡಿದ 102 ವರ್ಷದ ಹಿರಿಯಜ್ಜಿ

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

Congress ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.