ಮುದ್ದೇಬಿಹಾಳ: ಚುನಾವಣಾ ಕರ್ತವ್ಯಕ್ಕೆ ಹೊರಟಿದ್ದ ಸಿಬ್ಬಂದಿ ಬಸ್ ಪಲ್ಟಿ-ಹಲವರಿಗೆ ಗಾಯ
Team Udayavani, May 2, 2023, 9:04 AM IST
ಮುದ್ದೇಬಿಹಾಳ: ಚುನಾವಣಾ ಕರ್ತವ್ಯದ ಭಾಗವಾಗಿರುವ ತರಬೇತಿ ಕಾರ್ಯಕ್ಕೆ ಸಿಬ್ಬಂದಿ ಕರೆದೊಯ್ಯುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮುದ್ದೇಬಿಹಾಳ ತಾಲೂಕಿನ ಹಳ್ಳೂರ ಕ್ರಾಸ್ ಬಳಿ ವಿಜಯಪುರ ಮುಖ್ಯ ರಸ್ತೆ ಪಕ್ಕದ ತಗ್ಗಿನಲ್ಲಿ ಪಲ್ಟಿಯಾಗಿ ಹಲವರು ಗಾಯಗೊಂಡಿರುವ ಘಟನೆ ಮೇ.2 ಬೆಳಿಗ್ಗೆ ಸುಮಾರು 8-10 ಗಂಟೆಗೆ ನಡೆದಿದೆ.
ಬಸ್ಸಿನ ಎಕ್ಸೆಲ್ ತುಂಡಾಗಿ ಈ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.
ತಕ್ಷಣ ಸ್ಥಳಕ್ಕೆ ಅಂಬ್ಯೂಲೆನ್ಸ್ ಕರೆಸಲಾಗಿದ್ದು, ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗುತ್ತಿದೆ. ಹಿಂದಿನ ಬಸ್ಸಿನಲ್ಲಿದ್ದವರು ಗಾಯಾಳುಗಳ ನೆರವಿಗೆ ಧಾವಿಸಿದ್ದಾರೆ.
ಚುನಾವಣಾಧಿಕಾರಿ ಚಂದ್ರಕಾಂತ ಪವಾರ, ತಹಶೀಲ್ದಾರ ರೇಖಾ, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಮುದ್ದೇಬಿಹಾಳದ ಸರ್ಕಾರಿ ಮತ್ತು ಖಾಸಗಿ ಅನುದಾನಿತ ನೌಕರರನ್ನು ಸಿಂದಗಿ ವಿಧಾನಸಭಾ ಮತಕ್ಷೇತ್ರದ ತರಬೇತಿಗೆ ನಿಯೋಜಿಸಿದ್ದರಿಂದ ಅವರನ್ನು ಬಸ್ ಮೂಲಕ ಸಿಂದಗಿಗೆ ಕರೆದೊಯ್ಯುವಾಗ ಈ ಘಟನೆ ನಡೆದಿದೆ.
ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಿದ್ದು, ಅವರ ಸ್ಥಾನದಲ್ಲಿ ರಿಸರ್ವ್ ಸಿಬ್ಬಂದಿ ಬಳಸಿಕೊಳ್ಳಲಾಗುತ್ತದೆ ಎಂದು ಚುನಾವಣಾಧಿಕಾರಿ ಚಂದ್ರಕಾಂತ ಪವಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ