ಮಳೆಗೆ ಕುಸಿದ ಮನೆ: ನವಜಾತ ಶಿಶು ಸೇರಿ ಇಬ್ಬರು ಮೃತ್ಯು
Team Udayavani, May 2, 2023, 9:44 AM IST
ಕನಕಗಿರಿ: ಸಮೀಪದ ಜೀರಾಳ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಸುರಿದ ಮಳೆಯಿಂದಾಗಿ ಮನೆ ಕುಸಿದು ಬಿದ್ದಿದ್ದರಿಂದ ನವಜಾತ ಶಿಶು ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.
ಇಲ್ಲಿನ ನಿವಾಸಿ ಕನಕಮ್ಮ ಎಂಬುವವರು ಇತ್ತೀಚಿಗೆ ಮಗುವಿಗೆ ಜನ್ಮ ನೀಡಿದ್ದರು. ಮನೆಯ ಒಳಗಡೆ ಮಲಗಿದ್ದ ಕನಕಮ್ಮನ ತಾಯಿ ಫಕೀರಮ್ಮ ತಿಮ್ಮಣ್ಣ ಬೋವಿ (60) ಸ್ಥಳದಲ್ಲಿಯೇ ಮೃತಪಟಿದ್ದು ಶಿಶು ಆಸ್ಪತ್ರೆ ಕರೆದುಕೊಂಡು ಹೋಗುವಾಗ ರಸ್ತೆಯಲ್ಲಿ ಮೃತ ಪಟ್ಟಿದೆ ಎಂದು ಮೂಲಗಳು ತಿಳಿಸಿವೆ.
ಕನಕಮ್ಮನ ಕಾಲು ಮುರಿದಿದ್ದು ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ. ಕನಕಮ್ಮನ ಪತಿ ಮನೆಯ ಹೊರಗಡೆ ಮಲಗಿದ್ದರಿಂದ ಯಾವುದೇ ಸಮಸ್ಯೆಯಾಗಿಲ್ಲ. ಎರಡು ದಿನ ಸುರಿದ ಮಳೆಯಿಂದಾಗಿ ಮನೆಯ ಗೋಡೆಗಳು ನೆಂದು ಹೋಗಿದ್ದವು.
ಮಂಗಳವಾರ ಬೀಸಿದ ಜೋರಾದ ಗಾಳಿಯಿಂದಾಗಿ ಮನೆಯ ಚಾವಣಿಗೆ ಹಾಕಲಾಗಿದ್ದ ಸಿಮೆಂಟ್ ಸೀಟುಗಳೊಂದಿಗೆ ಮನೆ ಕುಸಿದು ಬಿದ್ದಿದೆ. ಮನೆಯಲ್ಲಿ ಇರುವ ಗೃಹ ಬಳಕೆ ವಸ್ತುಗಳು, ಸೇರಿದಂತೆ ಅನೇಕ ಸಾಮಾನುಗಳಿಗೆ ಹಾನಿಯಾಗಿದೆ. ಆಘಾತಕಾರಿ ಸಾವಿಗೆ ಗ್ರಾಮಸ್ಥರು ಕಂಬನಿ ಮಿಡಿದಿದ್ದು ಕುಟುಂಬಕ್ಕೆ ಸಾಂತ್ವನ ನೀಡುತ್ತಿದ್ದಾರೆ.
ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪಿಡಿಒ ಭೇಟಿ ನೀಡಿ ಪರಿಶೀಲನೆ ಮಾಡಿ ಮಾಹಿತಿ ಪಡೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ