ಬಂಟ್ವಾಳ:ರಮಾನಾಥ ರೈ ಅವರು ತಂದ 4 ಸಾವಿರ ಕೋಟಿ ರೂ. ಎಲ್ಲಿ? ಹರಿಕೃಷ್ಣ ಬಂಟ್ವಾಳ

ಈ ಬಾರಿ ರಾಜೇಶ್‌ ನಾೖಕ್‌ ಗೆಲ್ಲುವುದು ಈಗಾಗಲೇ ಗ್ಯಾರಂಟಿಯಾಗಿದೆ

Team Udayavani, May 2, 2023, 3:19 PM IST

Naik

ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ಅವರು 2018ರ ಚುನಾವಣೆಗೆ ಮೊದಲು ಬಂಟ್ವಾಳದಲ್ಲಿ 1 ಸಾವಿರ ಕೋ.ರೂ.ಗಳ ಅಭಿವೃದ್ಧಿ ಮಾಡಿರುವುದಾಗಿ ಬ್ಯಾನರ್‌, ಮಾಧ್ಯಮಗಳ ಮೂಲಕ ತಿಳಿಸಿದ್ದು, ಈಗ ಅವರು ಹೇಳುವಂತೆ 5 ಸಾವಿರ ಕೋ.ರೂ.ತಂದಿದ್ದರೆ 4 ಸಾವಿರ ಕೋ.ರೂ. ಎಲ್ಲಿಗೆ ಹೋಯಿತು? ಸೋಲಿನ ಭೀತಿಯಿಂದ ಇಂತಹ ಸುಳ್ಳು ಹೇಳುತ್ತಿದ್ದಾರೆ ಎಂದು ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್‌ ಆರೋಪಿಸಿದರು.

ಅವರು ಸೋಮವಾರ ಬಿ.ಸಿ.ರೋಡಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಹಿಂದೆ ರೈ ಅವರ ರಾಜಕೀಯ ಚಿಂತನೆಯ ಪರಿಣಾಮದಿಂದಲೇ ಬಂಟ್ವಾಳದಲ್ಲಿ ಕೋಮು ಸಂಘರ್ಷ ಉಂಟಾಗಿದ್ದು, ಒಂದು ವೇಳೆ ಅವರು ಹೇಳುವಂತೆ ಬಿಜೆಪಿ ಆ ಸಂದರ್ಭದಲ್ಲಿ ಶಾಂತಿ ಕದಡಿದ್ದರೆ 2018ರ ಚುನಾವಣೆಯಲ್ಲಿ ರಾಜೇಶ್‌ ನಾೖಕ್‌ ಗೆಲ್ಲುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ. ಬಂಟ್ವಾಳ ಕ್ಷೇತ್ರದ ಜನತೆ ಪ್ರಜ್ಞಾವಂತಿಕೆ ಮೆರೆದು ಬಿಜೆಪಿಯನ್ನು ಗೆಲ್ಲಿಸಿದ್ದಾರೆ ಎಂದರು.

ಬಂಟ್ವಾಳ ಕ್ಷೇತ್ರದ ಜನತೆಯ ನಾಡಿಮಿಡಿತ ಅರಿಯದ ಪರಿಣಾಮ ಪ್ರಸ್ತುತ ಕೊನೆಯ ಚುನಾವಣೆ ಎಂದು ಹೇಳುವ ಪರಿಸ್ಥಿತಿ ಬಂದಿದ್ದು, ಅದರ ಅಧಿಕಾರದ ಆಸೆಗೆ ಬಂಟ್ವಾಳದ ಜನತೆ ಈ ಬಾರಿ ಮಣೆ ಹಾಕುವುದಿಲ್ಲ. ಸಾಮರಸ್ಯದ ಸಂಕೇತವಾಗಿ ಈ ಬಾರಿ ರಾಜೇಶ್‌ ನಾೖಕ್‌ ಗೆಲ್ಲುವುದು ಈಗಾಗಲೇ ಗ್ಯಾರಂಟಿಯಾಗಿದೆ ಎಂದರು.

ಈ ಹಿಂದೆ ಮಲ್ಲಿಕಟ್ಟೆ ಕಾಂಗ್ರೆಸ್‌ ಭವನ ಉದ್ಘಾಟನೆಗೆ ಜನಾರ್ದನ ಪೂಜಾರಿ ಅವರನ್ನು ಕರೆಯದ, ಪ್ರಜಾಧ್ವನಿ ಯಾತ್ರೆಯಲ್ಲಿ ಪೂಜಾರಿ ಅವರ ಪೋಟೊ ಹಾಕದ ರೈ ಅವರು ಈಗ ಪೂಜಾರಿ ಅವರ ಮನೆಗೆ ತೆರಳಿ ಕೈಕಾಲು ಹಿಡಿಯುತ್ತಿದ್ದಾರೆ. ಪೂಜಾರಿ ಅವರನ್ನು ನಿಂದನೆ ಮಾಡಿ ಕಂಕನಾಡಿ ಗರಡಿಯಲ್ಲಿ ಕಣ್ಣೀರು ಹಾಕಿಸಿರುವುದನ್ನು ಮತದಾರರು, ಬಿಲ್ಲವ ಸಮಾಜ ಮರೆತಿಲ್ಲ. ಇತ್ತೀಚೆಗೆ ತಾನು ಕಾಂಗ್ರೆಸ್‌ ಅಲ್ಲ ಎನ್ನುತ್ತಿದ್ದ ಪದ್ಮರಾಜ್‌ ಅವರು ಈಗ ಏಕಾಏಕಿ ಕಾಂಗ್ರೆಸ್‌ ಆಗಿದ್ದಾರೆ. ದಿನಕ್ಕೊಂದು ಉಚಿತಗಳನ್ನು ಪ್ರಕಟಿಸುತ್ತಿರುವ ಕಾಂಗ್ರೆಸ್‌ ರಾಜ್ಯವನ್ನು ದಿವಾಳಿಯನ್ನಾಗಿಸಲು ಹೊರಟಿದೆ ಎಂದು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಮುಖರಾದ ಸಂತೋಷ್‌ಕುಮಾರ್‌ ರೈ, ಡೊಂಬಯ ಅರಳ, ಪುರುಷೋತ್ತಮ ಶೆಟ್ಟಿ, ಹರಿದಾಸ್‌, ರಂಜಿತ್‌ ಮೈರ ಉಪಸ್ಥಿತರಿದ್ದರು.

ಯೋಗಿ-ಮೋದಿ ಕಾರ್ಯಕ್ರಮದಲ್ಲಿ ಭಾಗಿಗಳಾಗೋಣ
ಮೇ 6ರಂದು ಮಧ್ಯಾಹ್ನ 2ಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಬಂಟ್ವಾಳಕ್ಕೆ ಆಗಮಿಸಿ ಬಿ.ಸಿ.ರೋಡಿನ ಕೈಕಂಬದಿಂದ ನಾರಾಯಣಗುರು ವೃತ್ತದವರೆಗೆ ರೋಡ್‌ಶೋ ನಡೆಸಲಿದ್ದಾರೆ. ಜತೆಗೆ ಮೇ 3ರಂದು ಪ್ರಧಾನಿ ನರೇಂದ್ರ ಮೋದಿಯವರು ಮೂಲ್ಕಿಯ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಈ ಎರಡೂ ಕಾರ್ಯಕ್ರಮಗಳಲ್ಲೂ ಎಲ್ಲಾ ಕಾರ್ಯಕರ್ತರು ಪಾಲ್ಗೊಳ್ಳಬೇಕಿದೆ ಎಂದು ಹರಿಕೃಷ್ಣ ಬಂಟ್ವಾಳ್‌ ಅವರು ವಿನಂತಿಸಿದರು.

ಟಾಪ್ ನ್ಯೂಸ್

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.