ಸ್ವಾಭಿಮಾನಿ ಕಾರ್ಯಕರ್ತರನ್ನು ಕೆಣಕಿದರೆ ಸಹಿಸಲಾರೆವು; ಕೈ ಪ್ರಣಾಳಿಕೆಗೆ ಬಜರಂಗದಳ ಆಕ್ರೋಶ
Team Udayavani, May 2, 2023, 6:20 PM IST
ಉಡುಪಿ: ಕಾಂಗ್ರೆಸ್ ಪಕ್ಷ ತನ್ನ ಚುನಾವಣ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧಿಸುವ ಪ್ರಸ್ತಾಪ ಮಾಡಿರುವುದನ್ನು ಖಂಡಿಸಿ ಬಜರಂಗದಳದ ಪ್ರಮುಖರು ಉಡುಪಿಯಲ್ಲಿ ಮಂಗಳವಾರ ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಗಳನ್ನು ಸುಟ್ಟು ಆಕ್ರೋಶ ಹೊರ ಹಾಕಿದರು.
ರಾಜ್ಯ ಸಂಯೋಜಕ ಸುನಿಲ್ ಕೆ.ಆರ್. ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ತಾಕತ್ತು, ಗುಂಡಿಗೆ ಇದ್ದರೆ ನಿಷೇಧ ಮಾಡಿ ತೋರಿಸಲಿ, ಆಗ ನಮ್ಮ ಶಕ್ತಿ ಏನೂ ಎಂಬುದನ್ನು ತೋರಿಸಲಿದ್ದೇವೆ. ನಾವು ದೇಶ, ಧರ್ಮದ ರಕ್ಷಣೆಗಾಗಿ ಸಂಘರ್ಷ ಮಾಡಿಕೊಂಡು ಬಂದವರು, ಸ್ವಾಭಿಮಾನಿ ಕಾರ್ಯಕರ್ತರ ಪಡೆಯನ್ನು ಕೆಣಕಿದರೆ ಸುಮ್ಮನೆ ಇರಲಾರೆವು. ತತ್ ಕ್ಷಣವೇ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಹಿಂದಕ್ಕೆ ಪಡೆಯಬೇಕು. ಇಲ್ಲವಾದರೆ ಮೇ 10ರಂದು ಸೂಕ್ತ ಉತ್ತರ ಕಾಂಗ್ರೆಸ್ ಗೆ ಕೊಡಲಿದ್ದೇವೆ ಎಂದು ಎಚ್ವರಿಕೆ ನೀಡಿದರು.
ಬಜರಂಗ ದಳದ ಪ್ರಮುಖರಾದ ಭುಜಂಗ ಕುಲಾಲ್, ಪುನೀತ್ ಅತ್ತಾವರ, ನವೀನ್ ಮೂಡುಶೆಡ್ಡೆ, ಚೇತನ್ ಪೆರಲ್ಕೆ, ವಿಎಚ್ ಪಿ ಮುಖಂಡ ದಿನೇಶ್ ಮೆಂಡನ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ