ಜನರ ಬೇಡಿಕೆ, ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸಿರುವೆ: ಗೋಪಾಲಯ್ಯ


Team Udayavani, May 4, 2023, 10:14 AM IST

ಜನರ ಬೇಡಿಕೆ, ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸಿರುವೆ: ಗೋಪಾಲಯ್ಯ

ಬೆಂಗಳೂರು: “ಮಹಾಲಕ್ಷ್ಮೀ ಲೇ ಔಟ್‌ನಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ನಾನು ನನ್ನ ಕ್ಷೇತ್ರದಲ್ಲಿ ಆರೋಗ್ಯ, ಶಿಕ್ಷಣ ಮತ್ತು ಕುಡಿಯುವ ನೀರು ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಿದ್ದೇನೆ. ಮೂಲ ಸೌಕರ್ಯದ ಅಭಿವೃದ್ಧಿ ಮಾಡಿದ್ದೇನೆ. ಒಬ್ಬ ಕಾರ್ಪೋ ರೆಟರ್‌ ಮಟ್ಟದಿಂದ ಶಾಸಕ, ಸಚಿವನಾಗಿರುವ ಹಿನ್ನೆಲೆ ಯಲ್ಲಿ ಕ್ಷೇತ್ರದ ಎಲ್ಲ ಸಮಸ್ಯೆಗಳನ್ನು ಅರಿತು ಅವುಗಳನ್ನು ವ್ಯವಸ್ಥಿತವಾಗಿ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತ ನಾಗಿದ್ದೇನೆ. ಕ್ಷೇತ್ರದ ಜನರ ಒಡನಾಟದಲ್ಲಿದ್ದೇನೆ. ಈ ಹಿನ್ನೆಲೆಯಲ್ಲಿ ಈ ಬಾರಿಯು ಕ್ಷೇತ್ರದ ಜನತೆ ಕೈ ಹಿಡಿಯುವ ಸಂಪೂರ್ಣ ನಂಬಿಕೆಯಿದೆ ಎಂಬುದು’ ಮಹಾಲಕ್ಷ್ಮೀ ಲೇ ಔಟ್‌ನ ಬಿಜೆಪಿ ಅಭ್ಯರ್ಥಿ, ಅಬಕಾರಿ ಸಚಿವ ಕೆ. ಗೋಪಾಲಯ್ಯ ಅವರ ವಿಶ್ವಾಸದ ನುಡಿಗಳು. “ಉದಯವಾಣಿ’ ಸಂದರ್ಶನದಲ್ಲಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.

ಮತ್ತೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದೀರಿ?

ನಾನು ಕ್ಷೇತ್ರದಲ್ಲಿ ಬಹಳ ಹಿಂದಿನಿಂದ ಜನಸೇವೆ ಮಾಡಿಕೊಂಡು ಬಂದಿದ್ದೇನೆ. ಈ ಕ್ಷೇತ್ರದ ಜನರ ನಾಡಿಮಿಡಿತವನ್ನು ಅರಿತಿದ್ದೇನೆ. ಹಾಗೆಯೇ ಜನರ ಭಾವನೆ, ಬೇಡಿಕೆ, ಕ್ಷೇತ್ರದ ಸಮಸ್ಯೆಗಳನ್ನು ತಿಳಿದು, ಸ್ಪಂದಿಸಿದ್ದೇನೆ. ಇದರ ಜತೆಗೆ ಬಿಜೆಪಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಅವರ ಸಮರ್ಥ ನಾಯಕತ್ವವಿದೆ. ಇದರ ಪರಿಣಾಮವಾಗಿ ಈ ಬಾರಿ ದಾಖಲೆಯ ಮತಗಳಿಂದ ಗೆಲ್ಲುತ್ತೇನೆ.

ನಿಮ್ಮನ್ನು ‌ ಜನ ಏಕೆ ಚುನಾಯಿಸಬೇಕು?

ನಾನು ಕ್ಷೇತ್ರದಲ್ಲಿ ಮೂಲ ಸೌಕರ್ಯದ ಅಭಿವೃದ್ಧಿಗೆ ಒತ್ತು ನೀಡಿದ್ದೇನೆ. ಕ್ಷೇತ್ರದಲ್ಲಿನ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿ ಪಡಿಸಿದ್ದೇನೆ. ಆರೋಗ್ಯ ಕ್ಷೇತ್ರದಲ್ಲಿ ನಮ್ಮ ಕ್ಲಿನಿಕ್‌, ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸುಸಜ್ಜಿತಗೊಳಿಸಿದ್ದೇನೆ. ಹೆರಿಗೆ ಆಸ್ಪತ್ರೆ ಸ್ಥಾಪಿಸಿದ್ದೇನೆ. ಇನ್ನು ಬಹುತೇಕ ಎಲ್ಲ ಬೂತ್‌ಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಿದ್ದೇನೆ. ಕೆಲ ಬೂತ್‌ ಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಗಮನದಲ್ಲಿದ್ದು ಬಗೆಹರಿಸಲು ಪ್ರಯತ್ನಿಸುತ್ತೇನೆ. ವಿವಿಧ ಬಡಾವಣೆಗಳಿಗೆ ಅವುಗಳಿಗೆ ಪೂರಕವಾದ ಅಭಿವೃದ್ಧಿ ಕಾಮಗಾರಿ ಮಾಡಿದ್ದೇನೆ. ಮಹಾಲಕ್ಷ್ಮೀ ಲೇಔಟ್‌ ನಲ್ಲಿ ಬಸವಧಾಮ ಉದ್ಯಾನ, ಡಾ.ಬಾಲಗಂಗಾಧರನಾಥ ಸ್ವಾಮೀಜಿ ಉದ್ಯಾನ, ಹಾಗೂ ಡಾ.ಬಿ.ಆರ್‌.ಅಂಬೇಡ್ಕರ್‌ ಸಮುದಾಯ ಭವನ ನಿರ್ಮಿಸಿದ್ದೇವೆ. ಈ ಅಭಿವೃದ್ಧಿ ಕೆಲಸಗಳಿಗೆ ನನ್ನನ್ನು ಚುನಾಯಿಸಬೇಕು

ನೀವು ಶಾಸಕರಾಗುವ ಮೊದಲು ಈ ಕ್ಷೇತ್ರದಲ್ಲಿ ಏನು ಸಮಸ್ಯೆಗಳಿದ್ದವು?

ಈ ಕ್ಷೇತ್ರದಲ್ಲಿ ಕುಡಿಯವ ನೀರಿನ ಸಮಸ್ಯೆ ತೀವ್ರವಾಗಿತ್ತು. ಪಾರ್ಕ್‌ಗಳ ಸ್ಥಿತಿ ಉತ್ತಮವಿರಲಿಲ್ಲ. ರಸ್ತೆಗಳು ಹದಗೆಟ್ಟಿದ್ದವು. ಶಾಲೆಗಳಲ್ಲಿ ಮೂಲಭೂತ ಸೌಕರ್ಯವಿರಲಿಲ್ಲ. ಆರೋಗ್ಯ ಕ್ಷೇತ್ರಕ್ಕೂ ಹೆಚ್ಚಿನ ಒತ್ತು ನೀಡಿರಲಿಲ್ಲ. ಕ್ಷೇತ್ರದಲ್ಲಿ ಒಟ್ಟಾರೆ ಮೂಲಭೂತ ಸೌಕರ್ಯಗಳ ಕೊರತೆಯಿತ್ತು.

ನೀವು ಸದಾ ಜನರ ಕೈಗೆಟಕುವ ಶಾಸಕ ಎಂಬ ಅಭಿಪ್ರಾಯವಿದೆ?

ಹೌದು. ನಾನು ನಿರಂತರವಾಗಿ ಕ್ಷೇತ್ರದ ಜನರ ಜತೆ ಸಂಪರ್ಕದಲ್ಲಿರುತ್ತೇನೆ. ಚುನಾವಣೆ ಇರಲಿ, ಇಲ್ಲದಿರಲಿ ನಾನು ಕ್ಷೇತ್ರದ ಜನರನ್ನು ಭೇಟಿ ಆಗುತ್ತಿರುತ್ತೇನೆ. ಪ್ರತಿ ಬಡಾವಣೆಗೂ ಭೇಟಿ ನೀಡುತ್ತೇನೆ. ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಯಾವುದೇ ಕುಂದು ಕೊರತೆಗಳಿದ್ದರೂ ನನ್ನನ್ನು ನೇರವಾಗಿ ಸಂಪರ್ಕಿಸುವ ಅವಕಾಶವನ್ನು ನನ್ನ ಕ್ಷೇತ್ರದ ಜನತೆಗೆ ನೀಡಿದ್ದೇನೆ.

ಕೋವಿಡ್‌ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಿದಿರಿ?

ಕೋವಿಡ್‌ ಕಾಲದಲ್ಲಿ ಕ್ಷೇತ್ರದ ಜನರ ಸಂಕಷ್ಟ ಅರಿತು ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಮನೆ ಮನೆಗೆ ಆಹಾರದ ಕಿಟ್‌, ಆರೋಗ್ಯ ಕಿಟ್‌, ಅಗತ್ಯವಿದ್ದವರಿಗೆ ಆಕ್ಸಿಜನ್‌ ಸಿಲಿಂಡರ್‌ ವ್ಯವಸ್ಥೆ, ಲಸಿಕೆ, ಮಾತ್ರೆಗಳು ಹೀಗೆ ಅವಶ್ಯಕ ಸೇವೆಗಳನ್ನು ನನ್ನ ಕರ್ತವ್ಯವೆಂದು ಭಾವಿಸಿ ನೀಡಿದ್ದೆ.

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.