ಚಿತ್ತಾಪುರ: ಗುಂಡು ಹೊಡೆದುಕೊಂಡು ಪೋಲಿಸ್ ಪೇದೆ ಅತ್ಮಹತ್ಯೆ
Team Udayavani, May 4, 2023, 1:47 PM IST
ವಾಡಿ: ಚುನಾವಣೆ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆಯೋರ್ವರು ಗುಂಡು ಹೊಡೆದುಕೊಂಡು ಅತ್ಮಹತ್ಯೆ ಮಾಡಿಕೊಂಡ ಘಟನೆ ಮೇ.4 ರ ಗುರುವಾರ ಚಿತ್ತಾಪುರ ಪಟ್ಟಣದಲ್ಲಿ ಸಂಭವಿಸಿದೆ.
ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 2012/23ನೇ ಬ್ಯಾಚ್ ನ ಪೇದೆ, ಶಹಾಬಾದ ಮಡ್ಡಿ ಏರಿಯಾ ನಿವಾಸಿ ಮಲ್ಲಿಕಾರ್ಜುನ ಪತ್ತೇಪೂರ (38) ಮೃತಪಟ್ಟವರು.
ಚಿತ್ತಾಪುರ ತಹಶಿಲ್ದಾರರ ಕಚೇರಿಯಲ್ಲಿ ಚುನಾವಣೆ ಕರ್ತವ್ಯದಲ್ಲಿದ್ದ ಪೇದೆ ಮಲ್ಲಿಕಾರ್ಜುನ, ಇತರ ಸಿಬ್ಬಂದಿಗಳೊಂದಿಗೆ ಬುಧವಾರ ರಾತ್ರಿ ಗಸ್ತು ತಿರುಗುತ್ತಿದ್ದರು. ಮಧ್ಯರಾತ್ರಿ ಸುಮಾರು 2.30 ಗಂಟೆಗೆ ತಹಶಿಲ್ದಾರ್ ಕಚೇರಿಯ ಕಟ್ಟಡದ ಮೇಲೆ ಹೋಗಿದ್ದಾರೆ ಎನ್ನಲಾಗಿದ್ದು, ಬೆಳಗಿನ ಜಾವ ಕೈಯಲ್ಲಿ ಬಂದೂಕು ಇದ್ದು, ಗಂಟಲಿನ ಮೂಲಕ ತಲೆಯಿಂದ ಗುಂಡು ಪಾರಾದ ಸ್ಥಿತಿಯಲ್ಲಿ ಪೊಲೀಸ್ ಪೇದೆಯ ಮೃತದೇಹ ಪತ್ತೆಯಾಗಿದೆ.
ಕಸ ಗುಡಿಸಲು ಹೋದ ಪೌರಕಾರ್ಮಿಕ ಮಹಿಳೆಯೊಬ್ಬರಿಂದ ಘಟನೆ ಬೆಳಕಿಗೆ ಬಂದಿದೆ. ಇದು ಕೊಲೆಯೋ ಅಥವ ಆತ್ಮಹತ್ಯೆಯೋ ಎಂಬುದರ ನಿಖರವಾಗಿ ತಿಳಿದುಬಂದಿಲ್ಲ. ಘಟನೆಯಿಂದ ಖಾಕಿ ಪಾಳೆಯದಲ್ಲಿ ತಲ್ಲಣ ಉಂಟುಮಾಡಿದೆ.
ಘಟನಾ ಸ್ಥಳಕ್ಕೆ ಎಸ್ ಪಿ ಇಶಾ ಪಂತ್, ಸಿಪಿಐ ಶಿವಾನಂದ ಅಂಬಿಗೇರ, ಪಿಎಸ್ ಐ ನಂದಕುಮಾರ, ತಹಶಿಲ್ದಾರ ಪಾಷಾವಲಿ ಭೇಟಿ ನೀಡಿದ್ದಾರೆ. ತನಿಖೆ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್