Karnataka Election; ಎಂಇಎಸ್ ನಿಂದ ಜನರ ಭಾವನೆಗಳನ್ನು ಕೆರಳಿಸುವ ಕಾರ್ಯ: ಸಿಎಂ ಬೊಮ್ಮಾಯಿ
Team Udayavani, May 5, 2023, 11:01 AM IST
ಹುಬ್ಬಳ್ಳಿ: ಎಂಇಎಸ್ ಪುಂಡಾಟಿಕೆ ಇದು ಹೊಸದೇನಲ್ಲ, ಅವರ ಒಟ್ಟು ಚಟುವಟಿಕೆಗಳೇ ಕಪ್ಪಾಗಿದ್ದು ಜನರ ಭಾವನೆಗಳನ್ನು ಕೆರಳಿಸುವ ಕಾರ್ಯವನ್ನು ಸದಾ ಅವರು ಮಾಡುತ್ತಾ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಂಇಎಸ್ ಕಳೆದ 20 ವರ್ಷಗಳಿಂದಲೇ ನೆಲೆ ಕಳೆದುಕೊಂಡಿದ್ದು, ಇಂತಹ ಕಿಡಗೇಡಿ ಕೃತ್ಯಗಳ ಮೂಲಕ ಜನರ ಬೆಂಬಲ ಗಳಿಸಬಹುದೆಂಬ ಯತ್ನಕ್ಕೆ ಮುಂದಾಗಿದೆ ಎಂದು ನುಡಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪ್ರಧಾನಿಯ ಅಥವಾ ಕರ್ನಾಟಕದ ಮುಖ್ಯಮಂತ್ರಿ ಅಭ್ಯರ್ಥಿಯು ಎಂಬ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ನಮ್ಮ ಪ್ರಧಾನಿ ಹಿಂದಿನ ಪ್ರಧಾನಿಯಂತೆ ಸೂಟು- ಬೂಟು, ಎಸಿ ಕೋಣೆ ದೆಹಲಿ ವಾಸ್ತವ್ಯದ ಪ್ರಧಾನ ಮಂತ್ರಿಯಲ್ಲ ಹಳ್ಳಿ ಹಳ್ಳಿಗಳಿಗೂ ಹೋಗುತ್ತಿರುವ ಪ್ರಧಾನಿಯವರು ಜನರ ಭಾವನೆಗಳನ್ನು ಅರಿಯುವ ಕೆಲಸ ಮಾಡುತ್ತಿದ್ದು ಅದನ್ನು ಸಹಿಸಿಕೊಳ್ಳಲು ಕಾಂಗ್ರೆಸ್ ನವರಿಗೆ ಆಗುತ್ತಿಲ್ಲ ಎಂದರು.
ನಮ್ಮ ಪ್ರಣಾಳಿಕೆ ಕಂಡು ಬಿಜೆಪಿ ಅವರಿಗೆ ಹೆದರಿಕೆ ಆಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದ ಸಿಎಂ, ಇದೊಂದು ಹಾಸ್ಯಾಸ್ಪದ ವಿಷಯ ಎಂದರು.
ಬಜರಂಗದಳ ವಿಷಯವಾಗಿ ಪ್ರತಿಕ್ರಿಯಿಸಿದ ಸಿಎಂ ಕಾಂಗ್ರೆಸ್ ನವರು ಎಸ್ ಡಿಪಿಐ -ಪಿಎಫ್ಐ ಮೆಚ್ಚಿಸಲು ಏನೇನೋ ಯತ್ನಕ್ಕೆ ಮುಂದಾಗಿದ್ದಾರೆ ಅವರನ್ನು ಸಂತೋಷ ಪಡಿಸಲು ಹೋಗಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಎಂದು ಸಿಎಂ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ
Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.