ಬಜರಂಗದಳ ನಿಷೇಧಕ್ಕೆ ಕೇಂದ್ರದ ಸಮ್ಮತಿ ಅಗತ್ಯ: ನಡ್ಡಾ


Team Udayavani, May 6, 2023, 8:04 AM IST

nadda

ಯಲಬುರ್ಗಾ: ರಾಜ್ಯದಲ್ಲಿ ಕಾಂಗ್ರೆಸ್‌ ಅಧಿ ಕಾರಕ್ಕೆ ಬಂದರೆ ಬಜರಂಗ ದಳ ಸಂಘಟನೆ ನಿಷೇಧ ಮಾಡುತ್ತೇವೆ ಎಂದು ಹೇಳುತ್ತಾರೆ. ಆದರೆ ನಿಷೇಧಕ್ಕೆ ಕೇಂದ್ರದ ಗೃಹ ಸಚಿವರ ಅನುಮತಿ ಬೇಕು. ಇಷ್ಟು ಸಾಮಾನ್ಯ ಪ್ರಜ್ಞೆ ಕಾಂಗ್ರೆಸ್ಸಿನವರಿಗೆ ಇಲ್ಲ. ಇದು ಅಸಾಧ್ಯವಾದ ಮಾತು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.
ಕುಕನೂರಿನಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾ ಡಿದ ಅವರು, ಕಾಂಗ್ರೆಸ್‌ನವರು ಈ ಹಿಂದೆ ಶ್ರೀರಾಮ ಚಂದ್ರನಿಗೆ ಬೀಗ ಹಾಕಿದ್ದರು. ಈಗ ಬಜರಂಗ ದಳಕ್ಕೆ ಬೀಗ ಹಾಕಲು ಪ್ರಯತ್ನ ಮಾಡುತ್ತಿದ್ದಾರೆ. ಬಜರಂಗ ದಳವನ್ನು ಪಿಎಫ್‌ಐ ಜತೆ ಹೋಲಿಸುತ್ತಿದ್ದಾರೆ. ಪಿಎಫ್‌ಐ ರಾಷ್ಟ್ರದ್ರೋಹಿ ಸಂಘಟನೆ. ಅದನ್ನು ನರೇಂದ್ರ ಮೋದಿ ನೇತೃತ್ವದ ಸರಕಾರ ನಿಷೇಧಿ ಸಿದೆ. ಆದರೆ ಕಾಂಗ್ರೆಸ್‌ ಆಡ ಳಿತದಲ್ಲಿ ದೇಶದ್ರೋಹಿ ಪಿಎಫ್‌ಐ ಮೇಲಿನ 175 ಕೇಸ್‌ಗಳನ್ನು ಖುಲಾಸೆ ಮಾಡಿದ್ದರು. ಈಗ ಕಾಂಗ್ರೆಸ್‌ನವರು ಪಿಎಫ್‌ಐ ನಿಷೇಧ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.

ದೇವರ ಹೆಸರಿನಲ್ಲಿರುವ ಸಂಘಟನೆಗಳು ಮಾಡುವ ಕುಕೃತ್ಯಗಳು ಹಾಗೂ ಅದರಿಂದ ಉಂಟಾಗುವ ಸಾಮಾಜಿಕ ಸಮಸ್ಯೆಗಳನ್ನು ತಡೆಯುವ ನಿಟ್ಟಿನಲ್ಲಿ ಅಂತಹ ಸಂಘಟನೆಗಳನ್ನು ನಿಷೇಧಿಸುವುದರಲ್ಲಿ ತಪ್ಪೇನಿದೆ? ದೇವರ ಹೆಸರಿಟ್ಟುಕೊಳ್ಳುವ ಸಂಘಟನೆಗಳು ಮಾಡಿದ್ದೆಲ್ಲವನ್ನು ನೋಡಿಕೊಂಡು, ಸಹಿಸಿಕೊಂಡು ಇರಬೇಕೇ ?
-ಕನ್ಹಯ್ಯಕುಮಾರ್‌ , ಕಾಂಗ್ರೆಸ್‌ ಮುಖಂಡ

ಬಜರಂಗದಳ ನಿಷೇಧಿಸುವ ಅಧಿಕಾರ ರಾಜ್ಯಕ್ಕಿಲ್ಲ: ಸಿಎಂ
ಕಲಘಟಗಿ: ಕಾಂಗ್ರೆಸ್‌ನವರು ಎಸ್‌ಡಿಪಿಐ-ಪಿಎಫ್‌ಐ ಜತೆ ಬಜರಂಗದಳವನ್ನೂ ನಿಷೇಧಿಸುವುದಾಗಿ ಹೇಳಿದ್ದಾರೆ. ಬಜರಂಗದಳ ನಿಷೇಧ ಮಾಡುವ ಅ ಧಿಕಾರ ರಾಜ್ಯ ಸರಕಾರಕ್ಕೆ ಇಲ್ಲ. ಬಜರಂಗದಳ ದೇಶಾದ್ಯಂತ ಇರುವ ಸಂಘಟನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್‌ ಸರಕಾರದ ಅವ ಧಿಯಲ್ಲಿ ತುಷ್ಟೀಕರಣ, ಭ್ರಷ್ಟಾಚಾರ, ರೈತರ ಆತ್ಮಹತ್ಯೆ, ರೈತನ ದುಃಸ್ಥಿತಿಯನ್ನು ಕೇಳುವವರಿರಲಿಲ್ಲ. ದುಡಿಯುವ ವರ್ಗ ನಿರಾಶರಾಗಿದ್ದರು. ವಿದ್ಯಾರ್ಥಿಗಳಿಗೆ ಕೆಲಸ ಸಿಗುವ ಭರವಸೆ ಇರಲಿಲ್ಲ. ಇವರು ಮಾತ್ರ ಭಾಗ್ಯದ ಮೇಲೆ ಭಾಗ್ಯ ಕೊಡುತ್ತ ಬಂದಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಬಿಜೆಪಿಗೆ ಬೆಂಬಲ ದೊರೆಯುತ್ತಿದೆ. ಸ್ವಾತಂತ್ರÂ ಬಂದಾಗಿನಿಂದಲೂ ರೇಷನ್‌ ಕೊಡಲಾಗುತ್ತಿದೆ. ಈಗ ಹತ್ತು ಕೆಜಿ ಅಕ್ಕಿ ಕೊಡುತ್ತೇನೆ ಅಂತ ಹೇಳುತ್ತಿದ್ದಾರೆ. ಮೋದಿ ಅಕ್ಕಿಗೆ ಸಿದ್ದರಾಮಯ್ಯ ನೀಡಿದ್ದು ಖಾಲಿ ಚೀಲ ಮಾತ್ರ ಎಂದರು.

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Slander about Malabar group: Mumbai High Court harsh verdict

Malabar group ಬಗ್ಗೆ ಅಪಪ್ರಚಾರ:  ಮುಂಬಯಿ ಹೈಕೋರ್ಟ್‌ ಕಠಿನ ತೀರ್ಪು

Modi insults Tamils ​​for votes: CM Stalin sparks

Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್‌ ಕಿಡಿ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

This time 2004 result will repeat: Jairam Ramesh

Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.