SSLC Result : ಶೇ. 100 ಅಂಕ ಗಳಿಸಿದ ಅನುಪಮಾ ಹಿರೇಹೊಳಿ ರಾಜ್ಯಕ್ಕೆ ಪ್ರಥಮ

ಬಡ ಕುಟುಂಬ.. ತಂದೆಯನ್ನು ಕಳೆದುಕೊಂಡ ವಿದ್ಯಾರ್ಥಿನಿಯ ಯಶೋಗಾಥೆ

Team Udayavani, May 8, 2023, 8:07 PM IST

1-dsfdsf

ಸವದತ್ತಿ: ಸಾಧನೆಗೆ ಬಡತನ ಅಡ್ಡಿಯಲ್ಲ. ನಿರಂತರ ಪರಿಶ್ರಮ, ಶ್ರದ್ಧೆ ಹಾಗೂ ದೃಢ ಆತ್ಮವಿಶ್ವಾಸ ಇದ್ದರೆ ಏನನ್ನಾದರೂ ಸಾಧಿಸಬಹುದೆಂಬುವದಕ್ಕೆ ಇಲ್ಲಿನ ಅಕ್ಕಿ ಓಣಿಯ ಅನುಪಮಾ ಹಿರೇಹೊಳಿ ಸಾಕ್ಷಿಯಾಗಿದ್ದಾಳೆ. ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಮುಂದಿನ ಪೀಳಿಗೆಗೆ ಮಾದರಿಯಾಗಿದ್ದಾಳೆ.

ಬಡ ಕುಟುಂಬದಲ್ಲಿ ಜನಿಸಿದ ಈಕೆ ಎರಡು ವರ್ಷದ ಹಿಂದೆ ಅನಾರೋಗ್ಯದ ಕಾರಣ ತಂದೆ ಶ್ರೀಶೈಲ ಅವರನ್ನು ಕಳೆದುಕೊಂಡಳು. ತಾಯಿ ರಾಜೇಶ್ವರಿ ಮಗಳ ವಿದ್ಯಾಭ್ಯಾಸಕ್ಕೆ ಕೊರತೆಯಾಗದಂತೆ ಖಾಸಗಿ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಾ ಕುಟುಂಬ ನಿರ್ವಹಣೆ ನಡೆಸುತ್ತಿದ್ದಾರೆ. ಮಗಳ ಈ ಸಾಧನೆಗೆ ಅತೀವ ಸಂತಸ ವ್ಯಕ್ತಪಡಿಸಿದ ಅವರು ಧನ್ಯತಾ ಭಾವದಲ್ಲಿದ್ದಾರೆ.

ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಅಧಿಕಾರಿಗಳು ಹಾಗೂ ಗಣ್ಯರು ವಿದ್ಯಾರ್ಥಿನಿಯ ನಿವಾಸಕ್ಕೆ ಭೇಟಿ ನೀಡಿ ಸಿಹಿ ತಿನ್ನಿಸಿ ಅಭಿನಂದಿಸಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪತ್ರಕರ್ತರ ಧ್ವನಿ ಸಂಘದಿಂದ 10 ಸಾವಿರ ರೂ. ಸಹಾಯಧನ ನೀಡಿ ವಿದ್ಯಾರ್ಥಿಯನ್ನು ಪ್ರೋತ್ಸಾಯಿಸಲಾಯಿತು.

ಇಲ್ಲಿನ ಕುಮಾರೇಶ್ವರ ಶಾಲೆಯಲ್ಲಿ ವ್ಯಾಸಂಗ ಮಾಡಿದ ಈ ವಿದ್ಯಾರ್ಥಿನಿ ಆಂಗ್ಲಭಾಷೆ 125, ಕನ್ನಡ 100, ಹಿಂದಿ 100, ಗಣಿತ 100, ವಿಜ್ಞಾನ 100, ಸಮಾಜ ವಿಜ್ಞಾನ 100 ಅಂಕ ಗಳಿಸಿ ತಾಯಿಯ ಮೊಗದಲ್ಲಿ ಸಂತಸ ಮೂಡಿಸಿದ್ದಾಳೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೆ ಇಲ್ಲಿನ ಅಕ್ಕಿ ಓಣಿಯಲ್ಲಿ ಎಲ್ಲಿಲ್ಲದ ಸಂಭ್ರಮ ಮನೆ ಮಾಡಿದೆ. ಶೇ.100 ಅಂಕಗಳೊಂದಿಗೆ ಉತ್ತೀರ್ಣನಾದ ಅನುಪಮಾ ಶ್ರೀಶೈಲ ಹಿರೇಹೊಳಿ ಅವರ ನಿವಾಸಕ್ಕೆ ಅಧಿಕಾರಿಗಳು ಸೇರಿ ಗಣ್ಯರು ಭೇಟಿ ನೀಡಿ ಅಭಿನಂದಿಸಿದ್ದಾರೆ.

ಶಾಲೆಯ ಪ್ರಾರಂಭದ ದಿನದಿಂದಲೇ ಶಿಕ್ಷಕರ ಮಾರ್ಗದರ್ಶನದಂತೆ ಅಭ್ಯಾಸ ಆರಂಭಿಸಿದೆ. ಮನರಂಜನೆಗೆ ಸಮಯ ನೀಡದೇ ಸದಾ ಅಧ್ಯಯನದಲ್ಲಿ ತೊಡಗಿರುತ್ತಿದ್ದೆ. ಮದುವೆ, ಸಮಾರಂಭಗಳಿಂದ ದೂರ ಇದ್ದು, ಪಠ್ಯದ ವಿಷಯಕ್ಕೆ ಸಂಬಂಧಿಸಿದಂತೆ ಮೊಬೈಲ್ ಬಳಸುತ್ತಿದ್ದೆ. ಪರೀಕ್ಷೆಯಲ್ಲಿ ಶೇ 100 ರಷ್ಟು ಅಂಕ ಪಡೆಯುವ ಇಂಗಿತವನ್ನು ಮೊದಲೇ ಶಿಕ್ಷಕರಿಗೆ ತಿಳಿಸಿದ್ದೆ. ಅದರಂತೆ ಅಂಕ ಲಭಿಸಿದ್ದು ಖುಷಿ ತಂದಿದೆ. ಮುಂದೆ ಉನ್ನತ ವ್ಯಾಸಂಗ ಕೈಗೊಂಡು ಭವಿಷ್ಯದಲ್ಲಿ ಐಎಎಸ್ ಅಧಿಕಾರಿ ಆಗುವ ಕನಸು ನನಗಿದೆ ಎಂದು ಮನದಾಳದ ಮಾತುಗಳನ್ನು ‘ಉದಯವಾಣಿ’ಯೊಂದಿಗೆ ಅನುಪಮಾ ಹಂಚಿಕೊಂಡಿದ್ದಾಳೆ.

ಪುಸ್ತಗಳನ್ನೇ ಪ್ರಪಂಚವಾಗಿಸಿಕೊಂಡ ಅನುಪಮಾ ಸದಾ ಓದಿನಲ್ಲಿ ಕಾಲ ಕಳೆಯುತ್ತದ್ದಳು. ಶಾಲೆಯಲ್ಲೂ ಓದು, ಮನೆಯಲ್ಲೂ ಓದು, ಆಟವಾಡುವಾಗಲೂ ಓದು ಹೀಗೆ ಓದೇ ಅವಳ ದಿನಚರಿಯಾಗಿತ್ತು. ಮಗಳ ಓದಿಗೆ ತೊಂದರೆ ಕೊಡಬಾರದೆಂದು ಅವಳ ಪಾಡಿಗೆ ಬಿಟ್ಟು, ಇತರೆ ಕೆಲಸದಲ್ಲಿ ನಾವು ತೊಡಗಿಕೊಳ್ಳುತ್ತಿದ್ದೇವು. ಆದರೆ 2021 ರಲ್ಲಿ ನನ್ನ ಪತಿ ಅನಾರೋಗ್ಯದ ಕಾರಣ ನಿಧನ ಹೊಂದಿದರು. ಅಲ್ಲಿಂದ ಕುಟುಂಬ ನಿರ್ವಹಣೆ ಕಷ್ಟಕರವಾಯಿತು. ಹೀಗಾಗಿ ಜೋಶಿ ಫೌಂಡೇಷನ್ ಕೆಲಸ ಮಾಡುತ್ತಾ ಮನೆಯ ಜವಾಬ್ದಾರಿಯನ್ನು ಅಲ್ಪ ಸಲ್ಪ ನಿಭಾಯಿಸುತ್ತಾ ಬಂದಿದ್ದೇನೆ. ಇದೀಗ ಮಗಳ ಈ ಸಾಧನೆ ಅತೀವ ಸಂತೋಷವನ್ನುಂಟು ಮಾಡಿದೆ. ಬರುವ ಸಂಬಳ ಕುಟುಂಬ ನಿರ್ವಹಣೆಗೆ ಸಾಲದು. ಮಗಳು ಐಎಎಸ್ ಅಧಿಕಾರಿಯಾಗುವ ಕನಸು ಕಂಡಿದ್ದಾಳೆ. ನನಗೆ ಎಷ್ಟೇ ಕಷ್ಟಗಳೂ ಬಂದರೂ ಅವಳ ಓದಿಗೆ ಕೊರತೆಯಾಗದಂತೆ ನೋಡಿಕೊಳ್ಳತ್ತೇನೆ. ಆರ್ಥಿಕ ಪರಿಸ್ಥಿತಿ ಸರಿಯಿಲ್ಲದ ಕಾರಣ ಸಹಾಯದ ಅಗತ್ಯವಿದೆ ಎಂದು ವಿದ್ಯಾರ್ಥಿನಿಯ ತಾಯಿ ರಾಜೇಶ್ವರಿ ಹೀರೆಹೊಳಿ ಹೇಳಿಕೊಂಡಿದ್ದಾರೆ.

-ಡಿ.ಎಸ್. ಕೊಪ್ಪದ

ಟಾಪ್ ನ್ಯೂಸ್

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.