ಕುಂದಾಪುರದೆಲ್ಲೆಡೆ ಕಾಂಗ್ರೆಸ್‌ ಅಲೆ; ಸಾಸ್ತಾನದಿಂದ ಬೈಕ್‌ Rally, ನಗರದಲ್ಲಿ ಪಾದಯಾತ್ರೆ

ಹಿಂದುತ್ವದ ಯುವಕರು ಸಾಲು ಸಾಲಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ

Team Udayavani, May 9, 2023, 5:01 PM IST

ಕುಂದಾಪುರದೆಲ್ಲೆಡೆ ಕಾಂಗ್ರೆಸ್‌ ಅಲೆ; ಸಾಸ್ತಾನದಿಂದ ಬೈಕ್‌ Rally, ನಗರದಲ್ಲಿ ಪಾದಯಾತ್ರೆ

ಕುಂದಾಪುರ: ಕಾಂಗ್ರೆಸ್‌ ಅಭ್ಯರ್ಥಿ ದಿನೇಶ್‌ ಹೆಗ್ಡೆ ಮೊಳಹಳ್ಳಿ ಪರವಾಗಿ ಸೋಮವಾರ ಬೈಕ್‌ Rally, ಪಾದಯಾತ್ರೆ ನಡೆಯಿತು. ಸಾವಿರಾರು ದ್ವಿಚಕ್ರ ವಾಹನಗಳು, ಸಾವಿರಾರು ಮಂದಿ ಪಾಲ್ಗೊಂಡರು.

ಬಿಜೆಪಿಗೆ ನಡುಕ
ಅಭ್ಯರ್ಥಿ ದಿನೇಶ್‌ ಹೆಗ್ಡೆ ಮೊಳಹಳ್ಳಿ ಮಾತನಾಡಿ, ಕಾಂಗ್ರೆಸ್‌ ಪಕ್ಷದ ಸರಕಾರ ನೀಡಲಿರುವ ಗ್ಯಾರಂಟಿಗಳನ್ನು ಜನ ನಂಬಿದ್ದಾರೆ. ಈ ಭರವಸೆಯ ಮೇಲೆ ಕಾಂಗ್ರೆಸ್‌ಗೆ ಮತ ನೀಡಲಿದ್ದಾರೆ. ಬಿಜೆಪಿಯನ್ನು ಜನ ನಿರಾಕರಿಸಿದ್ದು , ಅಪಪ್ರಚಾರಕ್ಕೆ ಸೋಲಿನ ಜವಾಬು ನೀಡಲಿದ್ದಾರೆ. ಇದು ಬಿಜೆಪಿಗೆ ನಡುಕ ಉಂಟು ಮಾಡಿದೆ. ಕ್ಷೇತ್ರಾದ್ಯಂತ ಕಾಂಗ್ರೆಸ್‌ ಅಲೆ ಇದೆ ಎಂದರು.

ಸಂಚಲನ
ಇಂದು ಇಲ್ಲಿ ಸೇರಿದ 5 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯ ದ್ವಿಚಕ್ರವಾಹನಗಳ Rally ಸಾಸ್ತಾನದಿಂದ ಕುಂದಾಪುರವರೆಗೆ ಹೊಸ ಸಂಚಲನ ಉಂಟು ಮಾಡಿದೆ. ಸಾವಿರಾರು ಮಂದಿ ಕಾಂಗ್ರೆಸ್‌ಗೆ ಬೆಂಬಲ ನೀಡುತ್ತಿದ್ದಾರೆ. ಜಾತಿ, ಮತ, ಧರ್ಮದ ಭೇದ ಮರೆತು ಕಾಂಗ್ರೆಸ್‌ನ್ನು ಬೆಂಬಲಿಸುತ್ತಿದ್ದಾರೆ. ಹಳ್ಳಿ ಹಳ್ಳಿಗಳಲ್ಲಿ ಮಹಿಳೆಯರು, ಹಿರಿಯರು ಕಾಂಗ್ರೆಸ್‌ ಸರಕಾರ ಅಸ್ತಿತ್ವಕ್ಕೆ ಬರಲಿ ಎನ್ನುತ್ತಿದ್ದಾರೆ. ಹಿಂದುತ್ವದ ಯುವಕರು ಸಾಲು ಸಾಲಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಹರಿಪ್ರಸಾದ್‌ ಶೆಟ್ಟಿ ಕಾನ್ಮಕ್ಕಿ, ಕೋಟ ಬ್ಲಾಕ್‌ ಅಧ್ಯಕ್ಷ ಶಂಕರ ಎ.ಕುಂದರ್‌, ಮುಖಂಡರಾದ ಬೆಳ್ವೆ ಸತೀಶ್‌ ಕಿಣಿ, ಅಶೋಕ್‌ ಪೂಜಾರಿ ಬೀಜಾಡಿ, ಕೆದೂರು ಸದಾನಂದ ಶೆಟ್ಟಿ, ವಿಕಾಸ್‌ ಹೆಗ್ಡೆ, ಯುವ ಕಾಂಗ್ರೆಸ್‌ನ ಇಚ್ಛಿತಾರ್ಥ ಶೆಟ್ಟಿ, ಸುನಿಲ್‌ ಮಡಿವಾಳ, ಮಹಿಳಾ ಕಾಂಗ್ರೆಸ್‌ನ ದೇವಕಿ ಸಣ್ಣಯ್ಯ ಮೊದಲಾದವರಿದ್ದರು.

ಕೇಸರಿ ಶಾಲು, ಬಜರಂಗಿ ಧ್ವಜ
ಬಜರಂಗದಳ ನಿಷೇಧದ ಕುರಿತು ಬಿಜೆಪಿ ಹೇಳುತ್ತಿದ್ದಂತೆಯೇ ಕಾಂಗ್ರೆಸ್‌ ರ್ಯಾಲಿ, ಪಾದಯಾತ್ರೆಯಲ್ಲೂ ಕೇಸರಿ ಧ್ವಜ, ಕೇಸರಿ ಶಾಲಿನ ಅಬ್ಬರ ಕಂಡುಬಂತು. ನೂರಾರು ಮಂದಿ ಯುವಕರು ಕೇಸರಿ ಶಾಲು, ಕೇಸರಿ ಪೇಟ ಧರಿಸಿದ್ದು ಕೇಸರಿ ಧ್ವಜಗಳನ್ನು ಹಾರಿಸುತ್ತಾ, ಬಜರಂಗಿ ಧ್ವಜವನ್ನು ಬೀಸುತ್ತಾ ಮೆರವಣಿಗೆಯುದ್ದಕ್ಕೂ ಸಾಗಿದರು. ಈ ಮೂಲಕ ಹಿಂದುತ್ವ ಎಂದರೆ ಕಾಂಗ್ರೆಸ್‌ಗೆ ಭೇದ ಇಲ್ಲ, ಕಾಂಗ್ರೆಸ್‌ನಲ್ಲಿ ಇರುವವರು ಹಿಂದೂ ವಿರೋಧಿಗಳಲ್ಲ, ಕಾಂಗ್ರೆಸ್‌ ಹಿಂದುತ್ವದ ವಿರೋಧಿ ಅಲ್ಲ ಎಂಬ ಸಂದೇಶ ಸಾರಿದರು.

ಪ್ರತಾಪ್‌ ಚಂದ್ರ ಶೆಟ್ಟಿ ಚಾಲನೆ
ವಿಧಾನಪರಿಷತ್‌ ಮಾಜಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರು ಶಾಸಿŒ ಸರ್ಕಲ್‌ ಬಳಿ ಪಾದಯಾತ್ರೆಗೆ ಚಾಲನೆ ನೀಡಿ ಶುಭ ಹಾರೈಸಿದರು.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dowry harassment: ವರದಕ್ಷಿಣೆ ಕಿರುಕುಳ, ಹಲ್ಲೆ, ಜೀವಬೆದರಿಕೆ: ದೂರು

Dowry harassment: ವರದಕ್ಷಿಣೆ ಕಿರುಕುಳ, ಹಲ್ಲೆ, ಜೀವಬೆದರಿಕೆ: ದೂರು

Fraud Case ಕೆನರಾ ಬ್ಯಾಂಕ್‌ ಹೆಸರಲ್ಲಿ ಸಂದೇಶ ಕಳುಹಿಸಿ 3.27 ಲಕ್ಷ ರೂ. ವಂಚನೆ

Fraud Case ಕೆನರಾ ಬ್ಯಾಂಕ್‌ ಹೆಸರಲ್ಲಿ ಸಂದೇಶ ಕಳುಹಿಸಿ 3.27 ಲಕ್ಷ ರೂ. ವಂಚನೆ

Kota ಚಿಟ್‌ ಫಂಡ್‌ ಹೆಸರಲ್ಲಿ ವಂಚನೆ; ದೂರು ದಾಖಲು

Kota ಚಿಟ್‌ ಫಂಡ್‌ ಹೆಸರಲ್ಲಿ ವಂಚನೆ; ದೂರು ದಾಖಲು

ಕೊಲ್ಲೂರು: ದಿನೇ ದಿನೆ ಹೆಚ್ಚುತ್ತಿದೆ‌ ಟ್ರಾಫಿಕ್‌ ಜಾಮ್‌ ಕಿರಿಕಿರಿ…

ಕೊಲ್ಲೂರು: ದಿನೇ ದಿನೆ ಹೆಚ್ಚುತ್ತಿದೆ‌ ಟ್ರಾಫಿಕ್‌ ಜಾಮ್‌ ಕಿರಿಕಿರಿ…

ಕರಾವಳಿ ಜಿಲ್ಲೆಗಳಲ್ಲಿ ಬಂದಿದೆ ಹಾಲಿಗೆ ಬರ! ಹೈನುಗಾರಿಕೆಗೆ ಮನಮಾಡದ ಯುವಜನ

ಕರಾವಳಿ ಜಿಲ್ಲೆಗಳಲ್ಲಿ ಬಂದಿದೆ ಹಾಲಿಗೆ ಬರ! ಹೈನುಗಾರಿಕೆಗೆ ಮನಮಾಡದ ಯುವಜನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.