NASA Developing: ಶನಿಯ ಉಪ ಗ್ರಹದತ್ತ “ಹಾವಿನ’ ಸಂಚಾರ!

ಎನ್‌ಸೆಲಡಸ್‌ ಅಧ್ಯಯನಕ್ಕೆ ಉರಗ ರೂಪದ ರೊಬೋಟ್‌

Team Udayavani, May 9, 2023, 7:45 AM IST

NASA Developing: ಶನಿಯ ಉಪ ಗ್ರಹದತ್ತ “ಹಾವಿನ’ ಸಂಚಾರ!

ವಾಷಿಂಗ್ಟನ್‌: ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಪ್ರಯೋಗವೊಂದಕ್ಕೆ ಈಗ ನಾಸಾ ಮುಂದಾಗಿದೆ. ಶನಿ ಗ್ರಹದ ಉಪ ಗ್ರಹವಾದ “ಎನ್‌ಸೆಲಡಸ್‌’ನ ಅಂಗಳದಲ್ಲಿ ಅಧ್ಯಯನ ನಡೆಸಲು ಹಾವಿನ ಆಕಾರದ ರೊಬೋಟ್‌ವೊಂದನ್ನು ನಾಸಾ ಅಭಿವೃದ್ಧಿಪಡಿಸುತ್ತಿದೆ!

ಎನ್‌ಸೆಲಡಸ್‌ನಲ್ಲಿನ ಭೌಗೋಳಿಕ ರಚನೆಯನ್ನು ಅಭ್ಯಸಿಸಿ, ಅದು ವಾಸಯೋಗ್ಯವೇ, ಅಲ್ಲಿ ಜೀವಸಂಕುಲದ ಕುರುಹೇನಾದರೂ ಇದೆಯೇ ಎಂಬ ಬಗ್ಗೆ ಈ ರೊಬೋಟ್‌ ಅಧ್ಯಯನ ನಡೆಸಲಿದೆ.

ಈ ಅಧ್ಯಯನಕ್ಕೆಂದೇ ಎಕೊಬಯಾಲಜಿ ಎಕ್ಸ್‌ಟೆಂಟ್‌ ಲೈಫ್ ಸರ್ವೇಯರ್‌(ಈಲ್ಸ್‌) ಎಂಬ ಸಂಚಾರಿ ಸಾಧನವನ್ನು ನಾಸಾ ಅಭಿವೃದ್ಧಿಪಡಿಸುತ್ತಿದೆ. ಈ ಸಾಧನವು ನೋಡಲು ಥೇಟ್‌ ಹಾವಿನಂತಿರಲಿದೆ. ಉಬ್ಬು, ತಗ್ಗು ಸೇರಿದಂತೆ ಎಲ್ಲ ರೀತಿಯ ಭೂ ಪ್ರದೇಶದಲ್ಲೂ ಸುಗಮವಾಗಿ ಸಂಚರಿಸಲು ಆಗಬೇಕು ಎಂಬ ಕಾರಣದಿಂದಲೇ ಇದಕ್ಕೆ ಹಾವಿನ ಆಕಾರ ನೀಡಲಾಗುತ್ತಿದೆ.

ಏನಿದು ಎನ್‌ಸೆಲಡಸ್‌?
ಇದು ಶನಿ ಗ್ರಹದ ಉಪ ಗ್ರಹವಾಗಿದ್ದು, ಇದನ್ನು 1789ರಲ್ಲಿ ಆವಿಷ್ಕರಿಸಲಾಯಿತು. ಮಂಜುಗಡ್ಡೆ ಆವೃತ ಪುಟ್ಟ ಗ್ರಹ ಇದಾಗಿದ್ದು, ಇದನ್ನು “ವೈಜ್ಞಾನಿಕವಾಗಿ ಅತ್ಯಂತ ಆಸಕ್ತಿದಾಯಕ ತಾಣ’ ಎಂದು ಪರಿಗಣಿಸಲಾಗಿದೆ. ಎನ್‌ಸೆಲಡಸ್‌ನಲ್ಲಿನ ಮಂಜುಗಡ್ಡೆಯ ತಿರುಳಿನ ತಳಭಾಗದಲ್ಲಿ ದ್ರವರೂಪದ ಸಾಗರವೇ ಇದೆ. ಅಲ್ಲದೇ, ಇದರ ಮೇಲ್ಮೈ ತಾಪಮಾನ ಸುಮಾರು ಮೈನಸ್‌ 201 ಡಿ.ಸೆ.ನಷ್ಟಿದೆ ಎಂದು ಕ್ಯಾಸಿನಿ ಬಾಹ್ಯಾಕಾಶ ನೌಕೆಯ ದತ್ತಾಂಶ ಹೇಳಿದೆ.

ಅಧ್ಯಯನದ ಉದ್ದೇಶ
ಎನ್‌ಸೆಲಡಸ್‌ನಲ್ಲಿರುವ ಸಮುದ್ರ ಮತ್ತು ಆಂತರಿಕ ಉಷ್ಣತೆಯ ಕಾರಣಕ್ಕೆ ಇದು ವಾಸಯೋಗ್ಯವೇ ಎಂಬ ಪ್ರಶ್ನೆ ನಾಸಾಗೆ ಹುಟ್ಟಿದೆ. ಇದಕ್ಕೆ ಉತ್ತರ ಕಂಡುಕೊಳ್ಳಲೆಂದೇ ಈಲ್ಸ್‌ ಅನ್ನು ಕಳುಹಿಸಲಾಗುತ್ತದೆ. ಹಾವಿನ ರೂಪದಲ್ಲಿರುವ ಈಲ್ಸ್‌ನಲ್ಲಿ ಟ್ರ್ಯಾಕ್‌ಗಳು, ಬಿಗಿಹಿಡಿತದ ಮತ್ತು ನೀರಿನಡಿಯೂ ಸಂಚರಿಸಬಲ್ಲ ವ್ಯವಸ್ಥೆಯಿರುತ್ತದೆ. ಹೀಗಾಗಿ, ಎನ್‌ಸೆಲಡಸ್‌ನಲ್ಲಿನ ಸಮುದ್ರದ ಕಡೆಗೂ ಇದು ಹೋಗಲು ಸಾಧ್ಯವಾಗಲಿದೆ. ಈ ಮೂಲಕ ಹಿಂದೆಂದೂ ಆವಿಷ್ಕರಿಸಿರದ ಪ್ರದೇಶಗಳಲ್ಲಿ ಅಧ್ಯಯನ ನಡೆಸಲು ಅನುಕೂಲವಾಗಲಿದೆ ಎನ್ನುತ್ತದೆ ನಾಸಾ.

ಟಾಪ್ ನ್ಯೂಸ್

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.