Hanur;ನೆಲ್ಲಿಕತ್ತರಿ ಗ್ರಾಮದಲ್ಲಿ ನಾಲ್ಕು ತಾಸು ತಡವಾಗಿ ಆರಂಭವಾದ ಮತದಾನ
Team Udayavani, May 10, 2023, 1:28 PM IST
ಹನೂರು: ಗ್ರಾಮಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸಿಲ್ಲ ಎಂದು ಮತದಾರರು ಮತದಾನ ಬಹಿಷ್ಕರಿಸಿದ್ದು, ಅಧಿಕಾರಿಗಳು ಮನವೊಲಿಸಿದ ಬಳಿಕ ಮತದಾನ ನಡೆದ ಘಟನೆ ನೆಲ್ಲಿಕತ್ತರಿ ಗ್ರಾಮದಲ್ಲಿ ಜರುಗಿದೆ.
ಹನೂರು ತಾಲೂಕಿನ ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲ್ಲಿಕತ್ತರಿ ಗ್ರಾಮ ಅರಣ್ಯದೊಳಗಿನ ಗ್ರಾಮವಾಗಿದ್ದು ಗ್ರಾಮಕ್ಕೆ ರಸ್ತೆ ಕುಡಿಯುವ ನೀರು ಸೇರಿದಂತೆ ಯಾವುದೇ ಮೂಲ ಸೌಕರ್ಯ ಕಲ್ಪಿಸಿಲ್ಲ ಎಂದು ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದರು ಬಡಿಕ ಪರಿಶಿಷ್ಟ ಪಂಗಡಗಳ ಕಲ್ಯಾಣ ಅಧಿಕಾರಿ ಮಂಜುನಾಥ್ ಅವರು ಗ್ರಾಮಕ್ಕೆ ತೆರಳಿ ಮತದಾರರ ಜೊತೆ ಚರ್ಚಿಸಿ ಈಗಾಗಲೇ ಅಗತ್ಯ ಕ್ರಮವಹಿಸಲಾಗಿದ್ದು ಅರಣ್ಯ ಇಲಾಖೆಯಿಂದ ಅಗತ್ಯ ಅನುಮೋದನೆ ದೊರೆತ ಕೂಡಲೇ ರಸ್ತೆ ಸೌಕರ್ಯ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ಮತದಾನ ಪ್ರಕ್ರಿಯೆ ಆರಂಭವಾಗಿದೆ.
ತಾಲೂಕಿನ ಮಾರಳ್ಳಿ ಗ್ರಾಮದ ಮತಗಟ್ಟೆಯಲ್ಲಿ ಮತಯಂತ್ರ ಕೈಕೊಟ್ಟ ಹಿನ್ನೆಲೆ ಅರ್ಧ ತಾಸು ತಡವಾಗಿ ಮತದಾನ ಪ್ರಕ್ರಿಯೆ ಆರಂಭವಾಗಿದೆ.
ಹನೂರು ತಾಲೂಕಿನ ದಿನ್ನಳ್ಳಿ ಸಮೀಪದ ಮಾರಳ್ಳಿ ಗ್ರಾಮದ ಮತಗಟ್ಟೆಯಲ್ಲಿ ಮತದಾನ ಪ್ರಾರಂಭ ವಾಗುವ ವೇಳೆಗೆ ಮತಯಂತ್ರ ಕೈಗೊಂಡಿದ್ದು ಈ ಹಿನ್ನಲೆ ಮತದಾನ ಪ್ರಕ್ರಿಯೆ ಅರ್ಧ ಗಂಟೆಗಳ ಕಾಲ ತಡವಾಗಿ ಆರಂಭವಾಗಿದ್ದು ಬಳಿಕ ಮತದಾನ ಪ್ರಕ್ರಿಯೆ ಜರುಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು