ಮಳೆ ನಿಂತ ಬಳಿಕ ಹೆಚ್ಚುತ್ತಿದೆ ಸೆಕೆ: ಒಂದೇ ದಿನದಲ್ಲಿ 5 ಡಿ.ಸೆ. ಏರಿಕೆಯಾದ ಉಷ್ಣಾಂಶ!


Team Udayavani, May 15, 2023, 7:37 AM IST

temparature

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉರಿ ಸೆಕೆ ಏರುತ್ತಿದ್ದು, ಮಳೆ ನಿಂತ ಒಂದೇ ದಿನದಲ್ಲಿ ಗರಿಷ್ಠ ಉಷ್ಣಾಂಶದಲ್ಲಿ 5 ಡಿ.ಸೆ. ಏರಿಕೆ ಕಂಡಿದೆ. ಮಂಗಳೂರಿನಲ್ಲಿ ಶನಿವಾರ ಬೆಳಗ್ಗೆ ಬಿರುಸಿನ ಮಳೆಯಾಗಿತ್ತು. ಪರಿಣಾಮ, ಗರಿಷ್ಠ ಉಷ್ಣಾಂಶದಲ್ಲಿ ಭಾರೀ ಇಳಿಕೆ ಕಂಡು 30.8 ಡಿ.ಸೆ. ದಾಖಲಾಗಿತ್ತು. ಆದರೆ ರವಿವಾರ ಜಿಲ್ಲೆಯಲ್ಲಿ ಮಳೆಯ ಮುನ್ಸೂಚನೆ ಇರಲಿಲ್ಲ. ದಿನವಿಡೀ ಬಿಸಿಲು-ಉರಿ ಸೆಕೆಯಿಂದ ಕೂಡಿತ್ತು. ಇದೇ ಕಾರಣಕ್ಕೆ ಉಷ್ಣಾಂಶದಲ್ಲಿ 5 ಡಿ.ಸೆ. ಏರಿಕೆಯಾಗಿದ್ದು, 35 ಡಿ.ಸೆ. ದಾಖಲಾಗಿತ್ತು.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಸದ್ಯದ ಮುನ್ಸೂಚನೆ ಪ್ರಕಾರ ಮೇ 15ರಂದು ಬಂಟ್ವಾಳದಲ್ಲಿ 33.9 ಡಿ.ಸೆ., ಪಾಣೆಮಂಗಳೂರು 33.1, ವಿಟ್ಲ 34.6, ಬೆಳ್ತಂಗಡಿ 34.5, ಕೊಕ್ಕಡ 35.4, ವೇಣೂರು 34, ಗುರುಪುರ 32.7, ಮಂಗಳೂರು 31.2, ಉಳ್ಳಾಲ 31.8, ಮೂಡುಬಿದಿರೆ 33.2, ಮೂಲ್ಕಿ 30.5, ಸುರತ್ಕಲ್‌ 30.5, ಕಡಬ 35.9, ಪುತ್ತೂರು 35.3, ಉಪ್ಪಿನಂಗಡಿ 35.6 ಮತ್ತು ಪಾಣಾಜೆಯಲ್ಲಿ 33.7 ಡಿ.ಸೆ. ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಸದ್ಯಕ್ಕೆ ಭಾರೀ ಮಳೆಯ ಮುನ್ಸೂಚನೆ ಇಲ್ಲ. ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

ಜೂನ್‌ ಮೊದಲ ವಾರ ಮುಂಗಾರು ಸಾಧ್ಯತೆ
ಕರಾವಳಿಯಲ್ಲಿ ಸದ್ಯ ಪೂರ್ವ ಮುಂಗಾರು ಮರೀಚಿಕೆಯಾದರೂ ಮುಂಗಾರು ಮಳೆ ವಾಡಿಕೆಯಂತೆ ಸುರಿಯುವ ನಿರೀಕ್ಷೆ ಇದೆ. ಸದ್ಯದ ಮುನ್ಸೂಚನೆಯಂತೆ ಜೂನ್‌ ಮೊದಲ ವಾರದಲ್ಲಿ ಕರಾವಳಿ ತೀರಕ್ಕೆ ಮುಂಗಾರು ಅಪ್ಪಳಿಸಲಿದ್ದು, ವಾಡಿಕೆಯಂತೆ ಅಥವಾ ಅದಕ್ಕಿಂತಲೂ ಹೆಚ್ಚಿನ ಮಳೆ ಸುರಿಯುವ ಸಾಧ್ಯತೆಯನ್ನು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಲೆಕ್ಕಾಚಾರದ ಪ್ರಕಾರ ಪೂರ್ವ ಮುಂಗಾರು ಅವಧಿಯಲ್ಲಿ ಕಡಿಮೆ ಮಳೆ ಸುರಿದರೆ, ಮುಂಗಾರು ಅವಧಿ ಹೆಚ್ಚಿನ ಮಳೆಯಾಗುತ್ತದೆ. ಬೇಸಗೆ ಮಳೆ ಕಡಿಮೆಯಾದರೆ ಭೂ ಭಾಗದಲ್ಲಿ ತೇವಾಂಶವೂ ಕಡಿಮೆ ಇದ್ದು, ಆಗ ಉಷ್ಣಾಂಶದಲ್ಲಿ ಏರಿಕೆ ಕಂಡು ವಾತಾವರಣದ ಒತ್ತಡ ಕಡಿಮೆಯಾಗುತ್ತದೆ. ಮುಂಗಾರು ಮಾರುತ ವೇಗ ಪಡೆದು ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ.

ಮಳೆ ಇಲ್ಲದೆ “ರೆಡ್‌ ಅಲರ್ಟ್‌”
ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಮಳೆ ಮರೀಚಿಕೆಯಾಗಿದ್ದು, ವಾಡಿಕೆಗಿಂತ ಭಾರೀ ಕಡಿಮೆ ಸುರಿದಿದೆ. ಇದೇ ಕಾರಣಕ್ಕೆ ಕರಾವಳಿ ಭಾಗವನ್ನು “ರೆಡ್‌ ಅಲರ್ಟ್‌’ ನೀಡಲಾಗಿದೆ. ಮಾರ್ಚ್‌ ತಿಂಗಳಿನಿಂದ ಈವರೆಗೆ ದ.ಕ.ದಲ್ಲಿ ಶೇ. 38, ಉಡುಪಿ ಜಿಲ್ಲೆಯಲ್ಲಿ ಶೇ. 53 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ. 46ರಷ್ಟು ಪೂರ್ವ ಮುಂಗಾರು ಮಳೆ ಕೊರತೆ ಇದೆ. ಒಟ್ಟಾರೆ ಕರಾವಳಿಯಲ್ಲಿ ಶೇ. 44ರಷ್ಟು ಕೊರತೆ ಇದ್ದು, ಇದು ರಾಜ್ಯದ ಐದು ಭೂ ಪ್ರದೇಶಗಳಲ್ಲಿ ಅತ್ಯಧಿಕ.

ಟಾಪ್ ನ್ಯೂಸ್

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

state’s state of education has deteriorated; N. Ravikumar

Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

colon cancer

Colon Cancer; ಸಂಕೇತಗಳು ಮತ್ತು ಲಕ್ಷಣಗಳು, ರೋಗನಿರ್ಣಯ ಮತ್ತು ಚಿಕಿತ್ಸೆ

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.