ಶಾಹಿದ್ ಜೊತೆ ರಶ್ಮಿಕಾ ಡ್ಯುಯೆಟ್
Team Udayavani, May 15, 2023, 6:08 PM IST
ಈಗಾಗಲೇ ದಕ್ಷಿಣದಿಂದ ಉತ್ತರದತ್ತ ಮುಖ ಮಾಡಿರುವ ನಟಿ ರಶ್ಮಿಕಾ ಮಂದಣ್ಣ, ಬಾಲಿವುಡ್ ಸಿನಿಮಾ ರಂಗದಲ್ಲಿ ಮತ್ತೆ ಮಿಂಚಲು ರೆಡಿಯಾಗಿದ್ದಾರೆ. ಹಿಂದಿಯಲ್ಲಿ ಈಗಾಗಲೇ ಬಿಗ್ ಬಿ ಅಮಿತಾಭ್ ಬಚ್ಚನ್ ಜೊತೆ ತೆರೆ ಹಂಚಿಕೊಂಡಿರುವ ರಶ್ಮಿಕಾ, ಇದೀಗ ಶಾಹಿದ್ ಕಪೂರ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಸಿನಿಮಾಕ್ಕೂ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂಬ ಸುದ್ದಿ ಬಿಟೌನ್ನಲ್ಲಿ ಹರಿದಾಡುತ್ತಿದೆ.
ಇನ್ನು ಸದ್ಯಕ್ಕೆ ರಶ್ಮಿಕಾ ಮಂದಣ್ಣ ಬಾಲಿವುಡ್ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬಿಝಿಯಾಗಿದ್ದಾರೆ. ರಣಬೀರ್ ಕಪೂರ್ ಜೊತೆ ಆನಿಮಲ್ ಸಿನಿಮಾದಲ್ಲಿ ನಟಿಸುತ್ತಿದ್ದು, ವಿಕ್ಕಿ ಕೌಶಲ್ ಜೊತೆಯೂ ಒಂದು ಸಿನಿಮಾ ಮಾಡುತ್ತಿದ್ದಾರೆ. ಅಲ್ಲದೇ, ಛತ್ರಪತಿ ಶಿವಾಜಿ ಕುರಿತಾದ ಸಿನಿಮಾಗೂ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ನಡುವೆ ಶಾಹಿದ್ ಕಪೂರ್ ಅವರ ಹೊಸ ಸಿನಿಮಾ ಕೂಡ ರಶ್ಮಿಕಾಗೆ ಒಲಿದು ಬಂದಿದೆ.
ಮೂಲಗಳ ಪ್ರಕಾರ, ದಿಲ್ ರಾಜು, ಏಕ್ತಾ ಕಪೂರ್ ಜಂಟಿಯಾಗಿ ನಿರ್ಮಾಣ ಮಾಡಲಿರುವ, ಅನೀಸ್ ಬಾಜ್ಮಿ ನಿರ್ದೇಶನದಲ್ಲಿ ತಯಾರಾಗುವ ಹೊಸ ಚಿತ್ರಕ್ಕೆ ರಶ್ಮಿಕಾ ನಾಯಕಿ ಎನ್ನಲಾಗುತ್ತಿದೆ. ಬಿಗ್ ಬಜೆಟ್ ನಲ್ಲಿ ತಯಾರಾಗುತ್ತಿರುವ ಈ ಸಿನಿಮಾದಲ್ಲಿ ಶಾಹಿದ್ ಹೊಸ ಬಗೆಯಲ್ಲಿ ಮೊದಲ ಬಾರಿಗೆ ದ್ವಿ ಪಾತ್ರದಲ್ಲಿ ಕಾಣಿಸಿ ಕೊಳ್ಳಲಿದ್ದಾರಂತೆ. ಈ ಪಾತ್ರಕ್ಕಾಗಿ ಈಗಾಗಲೇ ಶಾಹಿದ್ ತಯಾರಿಯನ್ನೂ ಮಾಡಿಕೊಳ್ಳುತ್ತಿದ್ದು, ಸಿನಿಮಾಕ್ಕೆ ರಶ್ಮಿಕಾ ನಾಯಕಿಯಾದರೆ ಬೆಸ್ಟ್ ಎನ್ನುವ ಮಾತು ಚಿತ್ರತಂಡ ಅಭಿಪ್ರಾಯ. ಹೀಗಾಗಿ ಈಗಾಗಲೇ ಚಿತ್ರತಂಡ ಕೂಡ ರಶ್ಮಿಕಾ ಜೊತೆ ಮಾತನಾಡಿದ್ದು, ರಶ್ಮಿಕಾ ಕೂಡ ಈ ಆಫರ್ ಅನ್ನು ಖುಷಿಯಿಂದ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಶೀಘ್ರದಲ್ಲಿಯೇ ಈ ಸಿನಿಮಾದ ಟೈಟಲ್ ಮತ್ತಿತರ ಕಲಾವಿದರು ಮತ್ತು ತಂತ್ರಜ್ಞರ ಬಗ್ಗೆ ಹೆಚ್ಚಿನ ಮಾಹಿತಿ ಹೊರ ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood: ಜೂನ್ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್ ಭರಾಟೆ
Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್ ʼಬಾರ್ಡರ್ -2ʼ ರಿಲೀಸ್?
ಪುಸ್ತಕದಲ್ಲಿ ʼಬೈಬಲ್ʼ ಪದ ಬಳಸಿದ್ದಕ್ಕೆ ಆಕ್ಷೇಪ: ನಟಿ ಕರೀನಾ ಕಪೂರ್ಗೆ ಕೋರ್ಟ್ ನೋಟಿಸ್
Sikandar Movie: ಸಲ್ಮಾನ್ ಖಾನ್ ʼಸಿಕಂದರ್ʼಗೆ ರಶ್ಮಿಕಾ ಮಂದಣ್ಣ ನಾಯಕಿ
Sangeeth Sivan: ಮಾಲಿವುಡ್, ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ
MUST WATCH
ಹೊಸ ಸೇರ್ಪಡೆ
Election; ಪಾಕಿಸ್ತಾನದ ಪರಮಾಣು ಶಕ್ತಿಗೆ ಹೆದರುವ ವಿಪಕ್ಷದ ಹೇಡಿಗಳು…: ಪ್ರಧಾನಿ ಮೋದಿ
Bail; ಎಚ್.ಡಿ.ರೇವಣ್ಣ ಅವರಿಗೆ ಷರತ್ತು ಬದ್ದ ಜಾಮೀನು ಮಂಜೂರು
Queen Premier League; ಸಿನಿಮಾ ಸೀರಿಯಲ್ ನಟಿಯರ ಕ್ರಿಕೆಟ್ ಪಂದ್ಯಾವಳಿ
Rahul Gandhi ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಲಿಲ್ಲ: ಶಾ ವಾಗ್ದಾಳಿ
Gangavathi ಖಾಸಗಿ ಶಾಲೆಗಳಿಂದ ಪ್ರವೇಶ ನೆಪದಲ್ಲಿ ಲಕ್ಷಾಂತರ ರೂ.ವಸೂಲಿ ಖಂಡಿಸಿ ಪ್ರತಿಭಟನೆ