Bhopal: ಆ್ಯಂಬ್ಯುಲೆನ್ಸ್ ನೀಡದ ಆಸ್ಪತ್ರೆ: ಮಗಳ ಮೃತದೇಹವನ್ನು ಬೈಕ್ನಲ್ಲಿ ಸಾಗಿಸಿದ ತಂದೆ
Team Udayavani, May 17, 2023, 10:29 AM IST
ಭೋಪಾಲ್: ತೀರಿಹೋದ ಮಗನ ಮೃತದೇಹವನ್ನು ಮನೆಗೆ ತರಲು ಆ್ಯಂಬ್ಯುಲೆನ್ಸ್ ನವರು ಹೆಚ್ಚು ಹಣ ಕೇಳಿದಕ್ಕೆ ತಂದೆಯೊಬ್ಬ ಮೃತದೇಹವನ್ನು ಬ್ಯಾಗ್ ನಲ್ಲಿ ಹಾಕಿ ಮನೆಗೆ ತಂದ ಪಶ್ಚಿಮ ಬಂಗಾಳದ ಸುದ್ದಿ ಪ್ರಚಲಿತದಲ್ಲಿರುವಾಗಲೇ ಅಂಥದ್ದೇ ಹೃದಯ ವಿದ್ರಾವಕ ಘಟನೆ ಮಧ್ಯ ಪ್ರದೇಶದದಲ್ಲಿ ನಡೆದಿದೆ.
ಮಧ್ಯ ಪ್ರದೇಶದ ಕೋಟಾ ಗ್ರಾಮದ ನಿವಾಸಿ ಲಕ್ಷ್ಮಣ್ ಸಿಂಗ್ ಎಂಬುವರ ಮಗಳು ಮಾಧುರಿ (13) ಯನ್ನು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿತು. ರಕ್ತಹೀನತೆಯಿಂದ ಆಕೆ ಮೃತಪಟ್ಟಿದ್ದಾಳೆ. ಗ್ರಾಮದಿಂದ 70 ಕಿ.ಮೀ ದೂರದಲ್ಲಿರುವ ಶಹದೋಲ್ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ಆಕೆ ಮೃತಪಟ್ಟಿದ್ದು ಮಗಳ ಮೃತದೇಹವನ್ನು ಊರಿಗೆ ಕರೆತರಲು ಲಕ್ಷ್ಮಣ್ ಸಿಂಗ್ ಆ್ಯಂಬ್ಯುಲೆನ್ಸ್ ವ್ಯವಸ್ಥೆಯನ್ನು ಕೇಳಿದ್ದಾರೆ. ಆದರೆ ಆಸ್ಪತ್ರೆಯವರು 15 ಕಿ.ಮೀಕ್ಕಿಂತ ದೂರದ ಪ್ರದೇಶಕ್ಕೆ ಆ್ಯಂಬ್ಯುಲೆನ್ಸ್ ಇಲ್ಲ ಎಂದು ಹೇಳಿದ್ದಾರೆ.
ಖಾಸಗಿ ಆ್ಯಂಬ್ಯುಲೆನ್ಸ್ ಮಾಡಲು ನಮ್ಮ ಬಳಿ ಹಣವಿಲ್ಲದ ಕಾರಣ ನಾವು ಮಗಳ ಮೃತದೇಹವನ್ನು ಬೈಕ್ ನಲ್ಲಿ ಹಿಡಿದುಕೊಂಡು ಬಂದಿದ್ದೇವೆ ಎಂದು ತಂದೆ ಲಕ್ಷ್ಮಣ್ ಸಿಂಗ್ ಹೇಳಿದ್ದಾರೆ.
ಇನ್ನೇನು ಊರಿಗೆ ತಲುಪಲು 20 ಕಿ.ಮೀ ದೂರವಿರುವಾಗ ಬೇರೊಂದು ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಶಹದೋಲ್ ನ ಜಿಲ್ಲಾಧಿಕಾರಿ ವಂದನಾ ವೈದ್ಯ ಅವರು ಬೈಕ್ ನಲ್ಲಿ ಹೋಗುತ್ತಿದ್ದವರನ್ನು ತಡೆದು ಕೂಡಲೇ ವಾಹನದ ವ್ಯವಸ್ಥೆ ಮಾಡಿಸಿ, ಈ ಬಗ್ಗೆ ಸೂಕ್ತ ತನಿಖೆಗೆ ಆದೇಶಿಸಿದ್ದಾರೆ ಎಂದು ವರದಿ ತಿಳಿಸಿದೆ.
ಮೃತ ಯುವತಿಯ ಕುಟುಂಬಕ್ಕೆ ಆರ್ಥಿಕವಾಗಿ ಜಿಲ್ಲಾಧಿಕಾರಿಗಳು ನೆರವಾಗಿದ್ದಾರೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ