Karnataka Election Result: ಗೆದ್ದವರು ಬೆಂಗಳೂರಿಗೆ, ಸೋತವರು ಗೋವಾಕ್ಕೆ

ಹೆಚ್ಚು ಮತ ಪಡೆದವರು ಸೋತವರನ್ನು ಗೇಲಿ ಮಾಡುತ್ತಿದ್ದಾರೆ.

Team Udayavani, May 17, 2023, 2:37 PM IST

ಧಾರವಾಡ: ಗೆದ್ದವರು ಬೆಂಗಳೂರಿಗೆ, ಸೋತವರು ಗೋವಾಕ್ಕೆ

ಧಾರವಾಡ: ನಮ್ಮ ಸಾಹೇಬ್ರಗೆ ಎಷ್ಟು ಬಿದ್ದವು? ಎರಡನೇ ರೌಂಡ್ಸ್‌ನ್ಯಾಗ ನಾವ ಲೀಡ್‌, ನಮ್ಮ ಸಾಹೇಬ್ರ ಗೆದ್ದರೂ..ಜೈ ವಾಗಲಿ, ಅಯ್ಯೋ ಈ ಸಲಾ ನಮ್ಮ ಸೋಲು ಪಕ್ಕಾ, ನಡಿರಪಾ ಇನ್ನೇನು ಇಲ್ಲಿ ಕೆಲಸಾ ಗೋವಾಕ್ಕ ಹತ್ತೋಣ. ಹೌದು, ವಿಧಾನಸಭೆ ಚುನಾವಣೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಕೈ-ಕಮಲ ಪಕ್ಷಗಳ ಕಾರ್ಯಕರ್ತರ ಮಧ್ಯೆ ರಾಗದ್ವೇಷವನ್ನು ಹುಟ್ಟು ಹಾಕಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿ. ಕೆಲವು ಕಡೆಗಳಲ್ಲಂತೂ ಕೊಲೆ, ಚಾಕು ಇರಿತ, ಪಟಾಕಿ ಸಿಡಿಸುವುದು, ಘೋಷಣೆ ಕೂಗಿ ಇರಿಸು
ಮುರುಸು ಮಾಡಿದ ಘಟನೆಗಳು ನಡೆದಿವೆ. ಆದರೆ ಜಿಲ್ಲೆಯಲ್ಲಿ ಇಂತಹ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲವಾದರೂ, ಸೋಲುಂಡ ಪಕ್ಷದ ಕಾರ್ಯಕರ್ತರು ಮಾತ್ರ ಗೋವಾ ಯಾತ್ರೆ ಕೈಗೊಂಡಿದ್ದಾರೆ.

ಸತತ ಎರಡು ಮೂರು ತಿಂಗಳ ಕಾಲ ಹಗಲು ರಾತ್ರಿ ಎನ್ನದೇ ತಮ್ಮ ತಮ್ಮ ಪಕ್ಷಗಳ ಮುಖಂಡರೊಂದಿಗೆ ಆಯಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದ ಕಾರ್ಯಕರ್ತರು ಇದೀಗ ಗೋವಾದ ರೆಸಾರ್ಟ್ ಗಳು, ಕಡಲ ತೀರದ ಸುಂದರ ಬೀಚ್‌ಗಳಲ್ಲಿ ಜಾಲಿ‌ ಮೂಡ್‌ನ‌ಲ್ಲಿ ಸುತ್ತಾಡುತ್ತಿದ್ದಾರೆ. ಕೆಲ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೂ ತಮ್ಮ ನಾಯಕರ ಸೋಲು ತೀವ್ರ ನಿರಾಸೆ ತಂದಿದ್ದರಿಂದ ಗ್ರಾಮಗಳನ್ನೇ ತೊರೆದು ಒಂದಿಷ್ಟು ರಿಲ್ಯಾಕ್ಸ್‌ ಪಡೆಯಲು ಗೋವಾದಲ್ಲಿದ್ದಾರೆ.

ಹೊಲವನ್ನೇ ಬೆಟ್ಟಿಂಗ್‌ ಕಟ್ಟಿದ್ದ ಭೂಪರು: ಮನಸ್ಸಿಗೆ ಒಂದಿಷ್ಟು ನೆಮ್ಮದಿ ಪಡೆದುಕೊಳ್ಳಲು ಸ್ನೇಹಿತರು ಮತ್ತು ಪಕ್ಷದ ಕಾರ್ಯಕರ್ತರೊಂದಿಗೆ ಕೆಲವರು ಗೋವಾದತ್ತ ಹೋಗಿದ್ದಾರೆ. ಇನ್ನು ಕೆಲವಷ್ಟು ಜನರು ದಾಂಡೇಲಿ ರೆಸಾರ್ಟ್‌ಗಳಲ್ಲಿಯೇ ಬೀಡುಬಿಟ್ಟಿದ್ದಾರೆ.

ಚುನಾವಣೆ ಫಲಿತಾಂಶ ಬಂದು ನಾಲ್ಕು ದಿನ ಕಳೆದರೂ ಮರಳಿ ಗ್ರಾಮಗಳತ್ತ ಮುಖ ಮಾಡಿಲ್ಲ. ಇನ್ನು ಜಿಲ್ಲೆಯಲ್ಲಿ ಚುನಾವಣೆ ಫಲಿತಾಂಶಕ್ಕಾಗಿ ಬೆಟ್ಟಿಂಗ್‌ ದಂಧೆ ಕೂಡ ನಡೆದು ಹೋಗಿದೆ. ಈ ಪೈಕಿ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಪ್ಪಿನಬೆಟಗೇರಿ ಪಕ್ಕದ ಹಳ್ಳಿಯೊಂದರಲ್ಲಿನ ರೈತರಿಬ್ಬರು ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ವಿನಯ್‌ ಕುಲಕರ್ಣಿ ಮತ್ತು ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ಅವರಲ್ಲಿ ಯಾರು ಗೆಲ್ಲುತ್ತಾರೆ ನೋಡೋಣ ಎಂದು ಪರಸ್ಪರ ಸವಾಲು ಹಾಕಿಕೊಂಡು ಎರಡು ಎಕರೆಯಷ್ಟು ಜಮೀನನ್ನು ಬೆಟ್ಟಿಂಗ್‌ ಕಟ್ಟಿದ್ದ ಪ್ರಕರಣ ಕೂಡ ನಡೆದಿದೆ.

ಇನ್ನು ಗ್ರಾಮೀಣ ಕ್ಷೇತ್ರದ ಹಳ್ಳಿ ಹಳ್ಳಿಗಳಲ್ಲಿ ಸಾವಿರ ಸಾವಿರ ರೂ. ಹಣವನ್ನು ಯುವಕರ ಪಡೆ ಬೆಟ್ಟಿಂಗ್‌ ಕಟ್ಟಿದ್ದು ಚುನಾವಣೆ ಮರುದಿನ ಹೊರಬಿದ್ದಿದೆ. ಈ ಪೈಕಿ ಪೊಲೀಸರಿಗೆ ಕೆಲವು ಪ್ರಕರಣಗಳು ಗೊತ್ತಾಗಿದ್ದರೂ, ಅವುಗಳನ್ನು ಸ್ಥಳೀಯವಾಗಿ ಪರಿಹರಿಸಿಕೊಳ್ಳುವಂತೆ ಪಕ್ಷದ ವರಿಷ್ಠರಿಗೆ ಸೂಚಿಸಿ ಕೈ ತೊಳೆದುಕೊಂಡಿದ್ದಾರೆ.

ಜಾಲತಾಣಗಳಲ್ಲಿ ವೈರಲ್‌ ತಂತ್ರ: ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ ಬಂದಾಗಿದ್ದು, ಗೆಲುವು-ಸೋಲು ಘೋಷಣೆಯಾಗಿ ಹೋಗಿದೆ. ಆದರೆ ಕೈ ಮತ್ತು ಕಮಲ ಪಕ್ಷದ ಕಾರ್ಯಕರ್ತರು ಮಾತ್ರ ಚುನಾವಣೆಯಲ್ಲಿ ತಾವು ಮಾಡಿದ ಸಾಧನೆಯನ್ನು ವಾರ್ಡ್‌ವಾರು ಫಲಿತಗಳನ್ನು ಜಾಲತಾಣದಲ್ಲಿ ಹರಿಬಿಡುತ್ತಿದ್ದಾರೆ. ಅಷ್ಟೇಯಲ್ಲ, ಆಯಾ ವಾರ್ಡ್‌ನಲ್ಲಿ ಪಡೆದ ಮತಗಳು, ಮುನ್ನಡೆ ಮತ್ತು ಹಿನ್ನಡೆ ಅಂಕಿ-ಅಂಶಗಳನ್ನು ಸಂಗ್ರಹಿಸಿ ಅವುಗಳನ್ನು ಆಯಾ ಗ್ರಾಮಗಳ ವಾಟ್ಸ್‌ ಆ್ಯಪ್‌ ಗುಂಪಿನಲ್ಲಿ ತೇಲಿಬಿಟ್ಟು ತಮ್ಮ ಸಾಧನೆಗೆ ತಾವೇ ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ. ಹೆಚ್ಚು ಮತ ಪಡೆದವರು ಸೋತವರನ್ನು ಗೇಲಿ ಮಾಡುತ್ತಿದ್ದಾರೆ.

ನಿಲ್ಲದ ವೈಷಮ್ಯ ಭಾವ: ಕೆಲವು ಕ್ಷೇತ್ರ ವ್ಯಾಪ್ತಿಯಲ್ಲಿ ಸೋತ ಅಭ್ಯರ್ಥಿಗಳ ಬೆಂಬಲಿಗರು ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿದ್ದು ಸತ್ಯ. ಗೆದ್ದವರು ತಮ್ಮ ಗ್ರಾಮಗಳಲ್ಲಿ ಡಿಜೆ, ಲೈಟಿನ ರಥ ತರಿಸಿ ಅಭ್ಯರ್ಥಿಗಳನ್ನು ಕೂಡಿಸಿ ಮೆರವಣಿಗೆ ಮಾಡುತ್ತಿದ್ದಾರೆ. ಇದು ಕೆಲವರ ಆಕ್ರೋಶಕ್ಕೆ ಕಾರಣವಾದರೆ, ಹಳ್ಳಿಗಳಲ್ಲಿ ಯುವಕರ ಮಧ್ಯೆ ವೈಷಮ್ಯ ಭಾವ ಹೆಚ್ಚುವಂತೆ ಮಾಡಿದೆ.

ಕಾರ್ಯಕರ್ತರಲ್ಲಿ ಜಿಪಂ ಲೆಕ್ಕಾಚಾರ
ತಮ್ಮ ಗ್ರಾಮಗಳು ಮತ್ತು ವಾರ್ಡ್‌ಗಳಲ್ಲಿ ತಮ್ಮ ಪಕ್ಷಕ್ಕೆ ಎಷ್ಟು ಮತಗಳನ್ನು ತಾವು ತಂದುಕೊಟ್ಟಿದ್ದೇವೆ ಎನ್ನುವ ವಿವರಣೆಯನ್ನು ಕೂಡ ಎಲ್ಲರೂ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡುತ್ತಿದ್ದಾರೆ. ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಕೂಡ ಗೆಲುವು ನಮ್ಮ ಪಕ್ಷದ್ದೇ ಆಗಲಿದೆ ಎನ್ನುವ ಬರಹವುಳ್ಳ ಪೋಸ್ಟ್‌ಗಳನ್ನು ಸ್ಟೇಟಸ್‌ಗೆ ಹಾಕಿಕೊಳ್ಳುತ್ತಿದ್ದಾರೆ. ಅದರಲ್ಲೂ ಜಿಪಂ ಕ್ಷೇತ್ರ ವ್ಯಾಪ್ತಿಯಲ್ಲಿ ತಮ್ಮ ಪಕ್ಷ ಪಡೆದುಕೊಂಡ ಮತವನ್ನು ಆಧರಿಸಿಕೊಂಡೆ ಮುಂದಿನ ಜಿಪಂ ಚುನಾವಣೆಗೆ ಸಜ್ಜಾಗಿ ಎಂದು ಸವಾಲು ಹಾಕುತ್ತಿದ್ದಾರೆ.

ಚುನಾವಣೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಆದರೆ ಯುವಕರು ತಮ್ಮ ಪಕ್ಷಗಳ ಸೋಲು ಗೆಲುವನ್ನು ಸಮಾನವಾಗಿ
ಸ್ವೀಕರಿಸಬೇಕು. ಪಕ್ಷಗಳ ವರಿಷ್ಠರು, ಮುಖ್ಯಸ್ಥರು ಪರಸ್ಪರ ಚೆನ್ನಾಗಿಯೇ ಇರುತ್ತಾರೆ. ಹೀಗಾಗಿ ಯುವಕರು ವೈಷಮ್ಯ ಬೆಳೆಸಿಕೊಳ್ಳುವ ಅಗತ್ಯವಿಲ್ಲ.
*ಪಿ.ಎಚ್‌. ನೀರಲಕೇರಿ,
ಕಾಂಗ್ರೆಸ್‌ ಮುಖಂಡ

ಚುನಾವಣೆ ಸಮಯದಲ್ಲಿ ವಿಷಯವಾರು ಭಿನ್ನಾಭಿಪ್ರಾಯಗಳು ಎಲ್ಲೆಡೆ ಇದ್ದೇ ಇರುತ್ತವೆ. ಆದರೆ ಚುನಾವಣೆ  ಮೊದಲು ಮತ್ತು ನಂತರ ಎಲ್ಲರೂ ಪರಸ್ಪರ ಪ್ರೀತಿಯಿಂದಲೇ ನಡೆದುಕೊಳ್ಳುವ ಅಗತ್ಯವಿದೆ. ಎಂತದೇ ಸಂದರ್ಭದಲ್ಲೂ ರಾಜಕೀಯವನ್ನು
ವ್ಯಕ್ತಿಗತ ನೆಲೆಯಲ್ಲಿ ತರಲೇಬಾರದು.
*ನಾಗೇಂದ್ರ ಮಟ್ಟಿ,
ಹಿರಿಯ ವಕೀಲರು, ಧಾರವಾಡ

ಬಸವರಾಜ್‌ ಹೊಂಗಲ್‌

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.