Modi ಸಂಪುಟದ ನೂತನ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ರ ಕಿರು ಪರಿಚಯ ಇಲ್ಲಿದೆ ನೋಡಿ
14 ವರ್ಷಕ್ಕೇ ಮದುವೆ, ಸಂಸತ್ತಿಗೇ ಸೈಕಲ್ ಸವಾರಿ, ನಿವೃತ್ತ IAS ಅಧಿಕಾರಿ ಮೇಘವಾಲ್ ಈಗ ಕೇಂದ್ರ ಕಾನೂನು ಸಚಿವ
Team Udayavani, May 18, 2023, 6:11 PM IST
ನವದೆಹಲಿ: ಲೋಕಸಭೆ ಚುನಾವಣೆಗೆ ಇನ್ನೊಂದು ವರ್ಷ ಬಾಕಿ ಇರುವಂತೆಯೇ ಮೋದಿ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರನ್ನು ಕೈಬಿಟ್ಟು ಆ ಸ್ಥಾನಕ್ಕೆ ನಿವೃತ್ತ IAS ಅಧಿಕಾರಿ, ಸಂಸದ ಅರ್ಜುನ್ ರಾಮ್ ಮೇಘವಾಲ್ ಅವರನ್ನು ನೇಮಕ ಮಾಡಲಾಗಿದೆ. ಮೇಘವಾಲ್ ಈ ಮೊದಲು ಹೊಂದಿದ್ದ ಖಾತೆಗಳಾದ ಸಂಸದೀಯ ವ್ಯವಹಾರಗಳ ರಾಜ್ಯ ಖಾತೆ ಮತ್ತು ಸಂಸ್ಕೃತಿ ಖಾತೆ ರಾಜ್ಯ ಸಚಿವ ಸ್ಥಾನದ ಜೊತೆಗೆ ಹೆಚ್ಚುವರಿಯಾಗಿ ಕಾನೂನು ಮತ್ತು ನ್ಯಾಯ ಸಚಿವಾಲಯದ ರಾಜ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ರಿಜಿಜು ಅವರಿಗೆ ಭೂ ವಿಜ್ಙಾನ ಸಚಿವಾಲಯದ ಖಾತೆಯನ್ನು ನೀಡಲಾಗಿದೆ.
ಯಾರು ಈ ಅರ್ಜುನ್ ರಾಮ್ ಮೇಘವಾಲ್?
ರಾಜಸ್ಥಾನದ ಬಿಕನೇರ್ನ ಮಧ್ಯಮ ವರ್ಗದ ಕುಟುಂಬದಿಂದ ಬಂದಿರುವ ಮೇಘವಾಲ್ ತಮ್ಮ ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣ ಪೂರೈಸಿ, ಭೀನಾಸರ್ನ ಜವಾಹರ್ ಜೈನ್ ಸೆಕೆಂಡರಿ ಶಾಲೆಯಲ್ಲಿ ಪ್ರೌಢ ಶಿಕ್ಷಣ ಪಡೆದರು. ವಿಶೇಷವೇನೆಂದರೆ, ಅವರು ತಮ್ಮ 8 ನೇ ತರಗತಿಯಲ್ಲಿದ್ದಾಗಲೇ ಅಂದರೆ ತಮ್ಮ 14 ವರ್ಷ ವಯಸ್ಸಿನಲ್ಲೇ ವಿವಾಹವಾಗಿದ್ದರು. ವಿವಾಹದ ಬಳಿಕ ವಿದ್ಯಾಭ್ಯಾಸ ಮುಂದುವರೆಸಿದ ಇವರು ಬಿಎ, LLB ಪದವಿಯನ್ನೂ ಪಡೆದಿದ್ದಾರೆ, ಫಿಲಿಪೈನ್ಸ್ ವಿವಿಯಿಂದ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ ವಿಭಾಗದಲ್ಲಿ MBA ಪದವಿಯನ್ನೂ ಪಡೆದಿದ್ದಾರೆ.
ಸೈಕಲ್ ಪ್ರಿಯ ಮೇಘಾವಾಲ್ರಿಂದ ಸಂಸತ್ತಿಗೂ ಸೈಕಲ್ ಸವಾರಿ.!
ಈ ಅರ್ಜುನ್ ರಾಮ್ ಮೇಘವಾಲ್ರಿಗೆ ಸೈಕಲ್ ರೈಡಿಂಗ್ ಎಂದರೆ ಅಚ್ಚುಮೆಚ್ಚು. ಅವರು ಸಂಸದರಾಗಿದ್ದಾಗ ಸಂಸತ್ತಿಗೂ ಸೈಕಲ್ ತುಳಿದುಕೊಂಡೇ ಬರುತ್ತಿದ್ದರು.! 2016ರಲ್ಲಿ ಮೋದಿ ಸಂಪುಟದಲ್ಲಿ ಸಚಿವರಾದಾಗ ಸಂಸತ್ತಿಗೆ ಸೈಕಲ್ ಸವಾರಿ ನಿಲ್ಲಿಸಿದ್ದರು.
ನಿವೃತ್ತ IAS ಅಧಿಕಾರಿ ಈಗ ಕೆಂದ್ರ ಕಾನೂನು ಸಚಿವ
ರಾಜಸ್ಥಾನ ಕೇಡರ್ನ IAS ಅಧಿಕಾರಿಯಾಗಿದ್ದ ಅರ್ಜುನ್ ರಾಮ್ ಮೇಘವಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಸಮಾಜ ಸೇವೆಯ ಉದ್ದೇಶದಿಂದ ರಾಜಕೀಯ ರಂಗ ಪ್ರವೇಶಿಸಿದ ಇವರು 2009ರಲ್ಲಿ BJPಯಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.
ಹೆಚ್ಚಾಗಿ ತಮ್ಮ ಕೇಸರಿ-ಹಸಿರು ಬಣ್ಣದ ರುಮಾಲಿನೊಂದಿಗೇ ಗುರುತಿಸಲ್ಪಡುವ ಮೇಘವಾಲ್ ತಮ್ಮ ರಾಜಕೀಯ ಜೀವನದಲ್ಲಿ ವಿವಿಧ ಹುದ್ದೆಗಳನ್ನು, ವಿವಿಧ ಸಲಹಾ ಸಮಿತಿಗಳ ಜವಾಬ್ದಾರಿಗಳನ್ನೂ ಸಮರ್ಥವಾಗಿ ನಿರ್ವಹಿಸಿದ ಗರಿಮೆಯನ್ನು ಹೊಂದಿದ್ದಾರೆ. ಅಲ್ಲದೇ ರಾಜಸ್ಥಾನ ಬಿಜೆಪಿ ಉಪಾಧ್ಯಕ್ಷರಾಗಿ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ , ಲೋಕಸಭೆಯ ಮುಖ್ಯ ಸಚೇತಕರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದಾರೆ.
ಇದನ್ನೂ ಓದಿ: DK; 27ನೇ ವರ್ಷಕ್ಕೆ ರಾಜಕೀಯ ಪ್ರವೇಶ…ಟ್ರಬಲ್ ಶೂಟರ್ ಡಿಕೆಶಿ ರಾಜಕೀಯದ ಏಳು..ಬೀಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ