ತೆರೆಗೆ ಬಂತು ಸೋನು ಸೂದ್ ನಟನೆಯ ‘ಶ್ರೀಮಂತ’


Team Udayavani, May 19, 2023, 11:45 AM IST

sonu sood’s Kannada movie srimantha released

ಬಾಲಿವುಡ್‌ ನಟ ಸೋನು ಸೂದ್‌ ಕನ್ನಡದ “ಶ್ರೀಮಂತ’ ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿರುವುದು ನಿಮಗೆ ಗೊತ್ತಿರಬಹುದು. ಎಲ್ಲ ಅಂದುಕೊಂಡಂತೆ ನಡೆದಿದ್ದರೆ, ಇದೇ ಏಪ್ರಿಲ್‌ 14 ರಂದು “ಶ್ರೀಮಂತ’ ಸಿನಿಮಾ ಬಿಡುಗಡೆಯಾಗಿ ತೆರೆಗೆ ಬರಬೇಕಿತ್ತು. ಆದರೆ ಆ ವೇಳೆ ಜಾರಿಯಲ್ಲಿರುವ ಚುನಾವಣಾ ಅಬ್ಬರ ಜೋರಾಗಿದ್ದರಿಂದ, ಚಿತ್ರತಂಡ ತಮ್ಮ ಸಿನಿಮಾದ ಬಿಡುಗಡೆಯನ್ನು ಕೆಲ ಕಾಲ ಮುಂದೂಡಿಕೊಂಡಿತ್ತು. ಇದೀಗ ಚುನಾವಣೆಯ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಚಿತ್ರತಂಡ ಇಂದು (ಮೇ. 19) “ಶ್ರೀಮಂತ’ ಸಿನಿಮಾವನ್ನು ತೆರೆಗೆ ತರುತ್ತಿದೆ.

“ಗೋಲ್ಡನ್‌ ರೈನ್‌ ಮೂವೀಸ್‌’ ಮತ್ತು “ಅಣ್ಣ ಟಾಕೀಸ್‌’ ಬ್ಯಾನರಿನಲ್ಲಿ ನಿರ್ಮಾಣವಾಗಿರುವ “ಶ್ರೀಮಂತ’ ಸಿನಿಮಾದಲ್ಲಿ ಸೋನು ಸೂದ್‌ ಅವರೊಂದಿಗೆ ಯುವನಟ ಕ್ರಾಂತಿ, ವೈಷ್ಣವಿ ಪಟುವರ್ಧನ್‌, ವೈಷ್ಣವಿ ಚಂದ್ರನ್‌ ಮೆನನ್‌, ಗಿರೀಶ್‌ ಶಿವಣ್ಣ, ಕುರಿರಂಗ, ಮಂಜುನಾಥ್‌ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಬರೋಬ್ಬರಿ ಎಂಟು ಹಾಡುಗಳಿದ್ದು, ಹಂಸಲೇಖ ಸಂಗೀತ ಸಂಯೋಜನೆಯಿದೆ. “ಶ್ರೀಮಂತ’ ಸಿನಿಮಾಕ್ಕೆ ಹಾಸನ್‌ ರಮೇಶ್‌ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.

ಇನ್ನು ಸಿನಿಮಾದ ಬಿಡುಗಡೆಯ ಬಗ್ಗೆ ಮಾತನಾಡಿರುವ ನಿರ್ದೇಶಕ ಹಾಸನ್‌ ರಮೇಶ್‌, “ಇದೊಂದು ಅಪ್ಪಟ ರೈತರ ಕುರಿತಾಗಿ ಮಾಡಿರುವ ಸಿನಿಮಾ. ಹಳ್ಳಿಯ ಸೊಗಡು, ರೈತರ ಜೀವನದ ಏಳು-ಬೀಳುಗಳನ್ನು ಸಿನಿಮಾದಲ್ಲಿ ತೆರೆಮೇಲೆ ತರಲಾಗಿದೆ. ನಮ್ಮ ದೇಶದಲ್ಲಿ ಶೇ. 80ರಷ್ಟು ಜನ ರೈತರೇ ಆಗಿದ್ದಾರೆ. ಈ ಥಾಟ್‌ ಇಟ್ಟುಕೊಂಡು ಮಾಡಿರುವ ಸಂಗೀತಮಯ ಚಿತ್ರವಿದು. ಕಥೆಯಲ್ಲಿ ತುಂಬಾ ಮಜಲುಗಳಿವೆ. ಈಗಾಗಲೇ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಪ್ರಚಾರ ಮಾಡಲಾಗಿದೆ. ನಮ್ಮ ಸಿನಿಮಾದಲ್ಲಿ ಕೇವಲ ರಾಜಕಾರಣಿಗಳು ಮಾತ್ರವಲ್ಲದೆ ಅನೇಕ ಸಾಧಕರು, ಸ್ವಾಮಿಜಿಗಳು, ಸಮಾಜ ಸೇವಕರು, ರೈತ ಸಂಘಟನೆಗಳು ಕೈಜೋಡಿಸಿದ್ದಾರೆ. ಪ್ರತಿಯೊಬ್ಬರಿಗೂ ತಲುಪುವಂತ ವಿಷಯ ಈ ಸಿನಿಮಾದಲ್ಲಿದೆ’ ಎಂದು ವಿವರಣೆ ನೀಡಿದರು.

“ಶ್ರೀಮಂತ’ ಸಿನಿಮಾದಲ್ಲಿ ಮಾಜಿ ಪ್ರಧಾನಿ ಹೆಚ್‌. ಡಿ ದೇವೇಗೌಡ, ಮಾಜಿ ಸಿಎಂ ಬಿ. ಎಸ್‌ ಯಡಿಯೂರಪ್ಪ, ಹಿರಿಯ ರಾಜಕಾರಣಿ ಬಸವರಾಜ ಹೊರಟ್ಟಿ ಹೀಗೆ ಬೇರೆ ಬೇರೆ ಪಕ್ಷಗಳ ಅನೇಕ ರಾಜಕಾರಣಿಗಳು ಕಾಣಿಸಿಕೊಂಡಿದ್ದಾರೆ. ನಮ್ಮ ಯೋಜನೆಯಂತೆ ಏಪ್ರಿಲ್‌ 14ರಂದು ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಚುನಾವಣೆ ಸಂದರ್ಭವಾಗಿರುವುದರಿಂದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿತ್ತು. ಈ ವೇಳೆ ಬೇರೆ ಬೇರೆ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿರುವ ಪ್ರಮುಖ ರಾಜಕಾರಣಿಗಳು ಸಿನಿಮಾದಲ್ಲಿ ಕಾಣಿಸಿಕೊಂಡಿರುವುದರಿಂದ, ಸಿನಿಮಾ ಬಿಡುಗಡೆ ಮಾಡಿದರೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಗುರಿಯಾಗಬಹುದು ಎಂಬ ಆತಂಕದಲ್ಲಿ ನಮ್ಮ ಸಿನಿಮಾವನ್ನು ಚುನಾವಣೆ ಫ‌ಲಿತಾಂಶ ಬಂದ ನಂತರ ಬಿಡುಗಡೆ ಮಾಡಲು ನಿರ್ಧರಿಸಿದೆವು’ ಎನ್ನುವುದು ನಿರ್ದೇಶಕರ ಮಾತು

ಟಾಪ್ ನ್ಯೂಸ್

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.