Health Tips: ಕಣ್ಣಿನ ಊತ ಕಡಿಮೆ ಮಾಡಿಕೊಳ್ಳುವುದು ಹೇಗೆ ?

ತರಕಾರಿ ಜ್ಯೂಸ್ ಸೇವನೆಯಿಂದ ಕಣ್ಣಿನ ಊತ ಕಡಿಮೆ ಮಾಡಿಕೊಳ್ಳಬಹುದು

Team Udayavani, May 20, 2023, 6:22 PM IST

Health Tips: ಕಣ್ಣಿನ ಊತ ಕಡಿಮೆ ಮಾಡಿಕೊಳ್ಳುವುದು ಹೇಗೆ ?

ಮನುಷ್ಯನಿಗೆ ಕಣ್ಣುಗಳು ತುಂಬ ಮುಖ್ಯ. ನೇತ್ರಗಳಿಲ್ಲದ ಬದುಕು ಊಹಿಸಿಕೊಂಡರೆ ಭಯ ಆಗುತ್ತದೆ. ನಮ್ಮ ದೇಹದಲ್ಲಿರುವ ಅತೀ ಸೂಕ್ಷ್ಮ ಭಾಗಗಳಲ್ಲಿ ಕಣ್ಣುಗಳು ಹೌದು. ಇವುಗಳನ್ನು ಎಚ್ಚರಿಕೆಯಿಂದ ಬಹು ಜೋಪಾನವಾಗಿ ಕಾಯ್ದುಕೊಂಡು ಹೋಗುವುದು ಅತೀ ಅಗತ್ಯ.

ನಮ್ಮ ಕಣ್ಣುಗಳು ಆಗಾಗ ಹಲವು ಕಾಯಿಲೆಗಳಿಗೆ ತುತ್ತಾಗುತ್ತಿರುತ್ತವೆ. ‘ಮದ್ರಾಸ್ ಐ’ ಸೋಂಕು, ಕಣ್ಣುಗಳಲ್ಲಿ ನಿರಂತರ ನೀರು ಸುರಿಯುವುದು, ಊದಿಕೊಳ್ಳುವುದು ಹೀಗೆ ಹಲವು ತೊಂದರೆ ಕಾಣಿಸಿಕೊಳ್ಳುತ್ತವೆ. ಇಂದು ನಾವು ಕಣ್ಣುಗಳು ಊದಿಕೊಳ್ಳುಲು ಕಾರಣ ಹಾಗೂ ಅದನ್ನು ಶಮನಗೊಳಿಸುವ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.

ಕೆಲವರ ಕಣ್ಣು ಉಬ್ಬಿಕೊಂಡು ಕೆಂಪಾಗಿರುತ್ತದೆ. ಕೆಲವು ಬಾರಿ ಲಿಂಫಾಟಿಕ್ ಗ್ರಂಥಿಗಳಲ್ಲಿ ನೀರು (ಫ್ಲ್ಯುಯ್ಡ್) ಶೇಖರಗೊಂಡು ಹೀಗಾಗುತ್ತದೆ. ನಿದ್ರಾಹೀನತೆ, ನೀರು ಸಾಕಷ್ಟು ಕುಡಿಯದಿರುವುದು, ಆಗಾಗ ಕಣ್ಣುಗಳನ್ನು ಉಜ್ಜಿಕೊಳ್ಳುವುದು, ಕಣ್ಣುಗಳಿಗೆ ಪೆಟ್ಟು ಬಿದ್ದಾಗ ಹಾಗೂ ಕಣ್ಣೀರಿನ ನಾಳಗಳಿಗೆ ತೊಂದರೆಯಾದಾಗ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ.

ಕಣ್ಣಿನ ಊತ ಕಡಿಮೆ ಮಾಡಿಕೊಳ್ಳುವುದು ಹೇಗೆ ?

ಕಣ್ಣಿನ ಊತ ಕಡಿಮೆ ಪ್ರಮಾಣದಲ್ಲಿದ್ದರೆ ಅಥವಾ ಯಾವಾಗಲಾದರೂ ಒಮ್ಮೆ ಕಾಣಿಸಿಕೊಂಡರೆ ಭಯ ಪಡುವ ಅಗತ್ಯ ಇಲ್ಲ. ನೀವು ವೈದ್ಯರ ಬಳಿ ಹೋಗುವುದು ಬೇಡ. ಮನೆಯಲ್ಲಿಯೇ ಕೆಲವೊಂದು ಕ್ರಮ ಕೈಗೊಳ್ಳುವುದರಿಂದ ಊದಿಕೊಂಡಿರುವ ಕಣ್ಣಿನ ಊತ ಕಡಿಮೆ ಮಾಡಿಕೊಳ್ಳಬಹುದು.

ಮೊದಲನೇಯದಾಗಿ ಅತೀ ಹೆಚ್ಚು ನೀರಿನ ಪ್ರಮಾಣ ಹೊಂದಿರುವ ತರಕಾರಿ ಹಾಗೂ ಹಣ್ಣುಗಳನ್ನು ಸೇವಿಸಬೇಕು. ಇದರಿಂದ ನಿರ್ಜಲಿಕರಣ ದೂರವಾಗುತ್ತದೆ. ಪರಿಣಾಮ ಕಣ್ಣುಗಳು ಆರಾಮದಾಯಕವಾಗುತ್ತವೆ. ಟೀ, ಕಾಫಿ, ಎನರ್ಜಿ ಡ್ರಿಂಕ್ಸ್ ಹಾಗೂ ಮದ್ಯ ಸೇವನೆ ಕಡಿಮೆ ಮಾಡಬೇಕು.

ಈ ಮೇಲಿನ ಕ್ರಮಗಳನ್ನು ಅನುಸರಿಸುವುದರ ಜತೆಗೆ ತರಕಾರಿ ಜ್ಯೂಸ್ ಸೇವನೆಯಿಂದ ಕಣ್ಣಿನ ಊತ ಕಡಿಮೆ ಮಾಡಿಕೊಳ್ಳಬಹುದು. ಹಾಗಾದರೆ ಜ್ಯೂಸ್ ತಯಾರಿಸುವುದು ಹೇಗೆ  ? ಅದಕ್ಕೆ ಬೇಕಾಗುವ ಪದಾರ್ಥಗಳು ಯಾವುದು ?

  • ಸೌತೆ ಕಾಯಿ
  • ಸೆಲರಿ ಸೊಪ್ಪು
  • ಒಂದು ಟೊಮೆಟೊ
  • ನಿಂಬೆ ರಸ

ಈ ಮೇಲಿನ ಪದಾರ್ಥಗಳನ್ನು ಚೆನ್ನಾಗಿ ತೊಳೆದು ಮಿಕ್ಸರ್ ಸಹಾಯದಿಂದ ಜ್ಯೂಸ್ ತಯಾರಿಸಿ ಸೇವನೆ ಮಾಡುವುದರಿಂದ ಕಣ್ಣಿನ ಊತ ( ಊದಿಕೊಳ್ಳುವುದು) ಕಡಿಮೆ ಮಾಡಿಕೊಳ್ಳಬಹುದು.

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.