ಹಿರೋಶಿಮಾದಲ್ಲಿ ಕ್ವಾಡ್ ಜಿ7 ಶೃಂಗ: ಚೀನಕ್ಕೆ PM Modi ಖಡಕ್ ಸಂದೇಶ
Team Udayavani, May 21, 2023, 8:40 AM IST
ಹಿರೋಶಿಮಾ: ಮೂರು ದಿನಗಳ ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಕ್ವಾಡ್, ಜಿ7 ಶೃಂಗದಲ್ಲಿ ಭಾಗಿಯಾಗುವುದರ ಜತೆಗೆ, ವಿಶ್ವನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಕ್ವಾಡ್ ಶೃಂಗದ ಉದ್ಘಾಟನ ಸಭೆಯಲ್ಲಿ ಮಾತನಾಡಿದ ಅವರು, “ಇಂಡೋ-ಪೆಸಿಫಿಕ್ ಪ್ರದೇಶವು ಜಾಗತಿಕ ವ್ಯಾಪಾರ, ನಾವೀನ್ಯ ಮತ್ತು ಅಭಿವೃದ್ಧಿಯ ಎಂಜಿನ್ ಆಗಿದ್ದು, ಈ ಪ್ರದೇಶದ ಯಶಸ್ಸು ಮತ್ತು ಭದ್ರತೆಯು ಇಡೀ ಜಗತ್ತಿಗೇ ಮಹತ್ವವಾದದ್ದು’ ಎಂದು ಹೇಳಿದರು.
ಇದೇ ವೇಳೆ, “ಭಾರತವು ತನ್ನ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ರಕ್ಷಿಸಿಕೊಳ್ಳಲು ಬದ್ಧವಾಗಿದೆ. ಅಂತಾರಾಷ್ಟ್ರೀಯ ಕಾನೂನಿನ ಪ್ರಕಾರ ನೌಕಾ ವಿವಾದಗಳಿಗೆ ಶಾಂತಿಯುತ ಪರಿಹಾರ ಕಂಡುಕೊಳ್ಳಲಾಗುತ್ತದೆ’ ಎನ್ನುವ ಮೂಲಕ ವಿಸ್ತರಣಾವಾದವನ್ನು ನೆಚ್ಚಿಕೊಂಡಿರುವ ಚೀನಕ್ಕೆ ಪರೋಕ್ಷ ಸಂದೇಶ ರವಾನಿಸಿದರು.
2024ರ ಕ್ವಾಡ್ ಶೃಂಗದ ಆತಿಥ್ಯ ವಹಿಸಲು ಭಾರತ ಉತ್ಸುಕವಾಗಿದೆ ಎಂದೂ ಮೋದಿ ತಿಳಿಸಿದರು. ಇದೇ ವೇಳೆ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರನ್ನೂ ಭೇಟಿಯಾದ ಮೋದಿ, “ಯುದ್ಧವು ಅತ್ಯಂತ ಗಂಭೀರ ವಿಚಾರ. ಈ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳಲು ಏನೇನು ಬೇಕೋ ಅದನ್ನು ನಾವು ಮಾಡುತ್ತೇವೆ’ ಎಂದು ಭರವಸೆ ನೀಡಿದರು. ಹಿರೋಶಿಮಾದಲ್ಲಿ ಮಹಾತ್ಮಾ ಗಾಂಧಿಯ ಪುತ್ಥಳಿಯನ್ನೂ ಅನಾವರಣಗೊಳಿಸಿದರು.
ಹಸ್ತಲಾಘವ-ಆಲಿಂಗನ
ಪ್ರಧಾನಿ ಮೋದಿ ಅವರನ್ನು ಕಾಣುತ್ತಲೇ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಧಾವಿಸಿ ಬಂದು ಆಲಿಂಗಿಸಿಕೊಂಡರು. ಅನಂ ತರ ಪರಸ್ಪರ ಹಸ್ತಲಾಘವ ಮಾಡಿಕೊಂಡ ನಾಯಕರು, ಕುಶಲೋಪರಿ ವಿಚಾರಿಸಿಕೊಂಡರು. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ
ಪಾಕ್ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್ ಸಾವು
MUST WATCH
ಹೊಸ ಸೇರ್ಪಡೆ
Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು
Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ
Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ