ಜಿಲ್ಲೆಯ ರೈತರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ


Team Udayavani, May 21, 2023, 2:17 PM IST

ಜಿಲ್ಲೆಯ ರೈತರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡಲಾಗುವುದು. ಈಗಿನ ಕಾಂಗ್ರೆಸ್‌ ಸರ್ಕಾರ ರೈತರಿಗೆ ಬೆಂಬಲ ಬೆಲೆ ಘೋಷಣೆ ಮಾಡಿ ಸಂಕಷ್ಟ ಗಳಿಂದ ದೂರ ಮಾಡಬೇಕು ಎಂದು ವಿಶ್ವಚೇತನ ನಾಯಕ ಎಂ.ಡಿ.ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ಜಿಲ್ಲಾ ಗೌರವ ಅಧ್ಯಕ್ಷ ವಿನೋಧ್ಕುಮಾರ್‌ಗೌಡ ಬಿ.ಕೆ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ವಿಶ್ವಚೇತನ ನಾಯಕ ಎಂ.ಡಿ.ನಂಜುಂಡಸ್ವಾಮಿ ಸ್ಥಾಪಿತ ಕರ್ನಾ ಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ವತಿ ಯಿಂದ ಹಮ್ಮಿಕೊಂಡಿದ್ದ ಪದಾಧಿಕಾರಿಗಳ ಸಭೆ ಯಲ್ಲಿ ಮಾತನಾಡಿ, ರೈತರು ಸಾಲಸೋಲ ಮಾಡಿ ಬೆಳೆಗಳನ್ನು ಬೆಳೆದರೂ ಸಹ ಅವರು ಹಾಕಿದ ಹಣ ಅವರ ಕೈಸೇರುತ್ತಿಲ್ಲ. ಅದಕ್ಕಾಗಿ ಸಿದ್ದ ರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರೈತರನ್ನು ಮೇಲೆತ್ತಲು ರೈತರಿಗೆ ತಾವು ಬೆಳೆದ ಎಲ್ಲಾ ಬೆಳೆಗೆ ಬೆಂಬಲ ಬೆಲೆ ಘೋಷಿಸಬೇಕು. ಅವರು ನೀಡಿರುವ ಗ್ಯಾರಂಟಿ ಕಾರ್ಡ್‌ನಲ್ಲಿನ ಎಲ್ಲ ಅಂಶಗಳನ್ನು ಜಾರಿಗೆ ತರ ಬೇಕು. ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ ನೀಡುವಂತಾಗಬೇಕು. ರೈತ ಸಂಘದ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ಕೊಡಲಾಗುವುದು. ರೈತರಿಗೆ ಅನ್ಯಾಯ ಆದಾಗಿ ಜಿಲ್ಲೆಯಾದ್ಯಂತ ಹೋರಾಟ ಗಳನ್ನು ಮಾಡಿ ನ್ಯಾಯ ಒದಗಿಸುವ ಕೆಲಸವನ್ನು ಹಳ್ಳಿಯಿಂದ ಹಿಡಿದು ದೆಹಲಿವರೆಗೆ ಹೋರಾಟ ಮಾಡುತ್ತೇವೆ. ರೈತ ಸಂಘವನ್ನು ಪ್ರತಿ ಹಳ್ಳಿಯಲ್ಲಿ ಸಂಘಟಿಸುತ್ತೇವೆ. ರೈತರಿಗೆ ಎಲ್ಲೇ ಅನ್ಯಾಯವಾದರೂ ಅವರ ಪರವಾಗಿ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.‌

ರೈತ ಸಂಘದ ಉಪಾಧ್ಯಕ್ಷ ನಾರಾಯಣಸ್ವಾಮಿ (ನಾಣಿ) ಮಾತನಾಡಿ, ರೈತಸಂಘದ ರಾಜ್ಯಾ ಧ್ಯಕ್ಷರನ್ನು ಕರೆಸಿ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿಸಲಾಗುವುದು. ಅಧ್ಯಕ್ಷರಾಗಿದ್ದ ಬೂವನಹಳ್ಳಿ ವೆಂಕಟೇಶ್‌ ನಿಧನರಾಗಿದ್ದರು. ಅವರ ಜಾಗಕ್ಕೆ ಹೊಸ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿಕೊಳ್ಳಬೇಕು. ಪೂರ್ವಭಾವಿ ಸಭೆಯಲ್ಲಿ ಯಾರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎಂಬುವುದು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ಈ ವೇಳೆಯಲ್ಲಿ ತಾಲೂಕು ಅಧ್ಯಕ್ಷ ಜಯ ಶಂಕರ್‌, ಉಪಾಧ್ಯಕ್ಷ ಗಯಾಜ್ ಪಾಷಾ, ತಾಲೂಕು ಪ್ರಧಾನ ಕಾರ್ಯದರ್ಶಿ ನಜಿ‚àರ್‌ ಅಹಮದ್‌, ತಾ. ಗೌರವಾಧ್ಯಕ್ಷ ನಾರಾಯಣಸ್ವಾಮಿ, ವಿಜಯಪುರ ಹೋಬಳಿ ಅಧ್ಯಕ್ಷ ಶ್ರೀನಾಥ್‌, ಮುಖಂಡರಾದ ಎ.ಎನ್‌.ರವಿ, ಚಿಕ್ಕಗೊಲ್ಲಹಳ್ಳಿ ರಾಮಾಂಜಿನಪ್ಪ, ಪೋಲನಹಳ್ಳಿ ನಾಗರಾಜ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.