New Parliament ಭವನ ಉದ್ಘಾಟನೆ ಮಾಡಬೇಕಿರುವುದು ಪ್ರಧಾನಿ ಅಲ್ಲ: ರಾಹುಲ್
ದೇಶದ ಸ್ಥಾಪಕ ಪಿತಾಮಹರಿಗೆ ಸಂಪೂರ್ಣ ಅವಮಾನ...
Team Udayavani, May 21, 2023, 3:11 PM IST
ಹೊಸದಿಲ್ಲಿ: ನೂತನ ಸಂಸತ್ ಭವನವನ್ನು ರಾಷ್ಟ್ರಪತಿಗಳು ಉದ್ಘಾಟಿಸಬೇಕೇ ಹೊರತು ಪ್ರಧಾನಿಯಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.
ಮೇ 28 ರಂದು ನೂತನವಾಗಿ ನಿರ್ಮಿಸಲಾಗಿರುವ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕಳೆದ ಗುರುವಾರ ಮೋದಿ ಅವರನ್ನು ಭೇಟಿಯಾಗಿ ಹೊಸ ಕಟ್ಟಡವನ್ನು ಉದ್ಘಾಟಿಸಲು ಆಹ್ವಾನವನ್ನು ನೀಡಿದರು ಎಂದು ಲೋಕಸಭೆ ಸಚಿವಾಲಯ ತಿಳಿಸಿದೆ.
ಟ್ವಿಟರ್ನಲ್ಲಿ ರಾಹುಲ್ ಗಾಂಧಿ, “ರಾಷ್ಟ್ರಪತಿಗಳು ಹೊಸ ಸಂಸತ್ ಭವನವನ್ನು ಉದ್ಘಾಟಿಸಬೇಕೇ ಹೊರತು ಪ್ರಧಾನಿಯಲ್ಲ” ಎಂದು ಹೇಳಿದ್ದಾರೆ.
ಮೇ 28 ರಂದು ಹೊಸ ಸಂಸತ್ ಕಟ್ಟಡದ ಉದ್ಘಾಟನೆಯು ಹಿಂದುತ್ವ ಸಿದ್ಧಾಂತವಾದಿ ವಿ.ಡಿ. ಸಾವರ್ಕರ್ ಅವರ ಜನ್ಮ ದಿನಾಚರಣೆಯಂದು ನಡೆಯಲಿದೆ. ಹಲವಾರು ವಿರೋಧ ಪಕ್ಷಗಳು ಈ ಬಗ್ಗೆ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದು, ಕಾಂಗ್ರೆಸ್ ಇದನ್ನು ದೇಶದ ಸ್ಥಾಪಕ ಪಿತಾಮಹರಿಗೆ “ಸಂಪೂರ್ಣ ಅವಮಾನ” ಎಂದು ಕರೆದಿದೆ.
ಹೊಸ ಸಂಸತ್ ಕಟ್ಟಡವು ಲೋಕಸಭೆಯ ಚೇಂಬರ್ನಲ್ಲಿ 888 ಸದಸ್ಯರು ಮತ್ತು ರಾಜ್ಯಸಭಾ ಚೇಂಬರ್ನಲ್ಲಿ 300 ಸದಸ್ಯರು ಆರಾಮವಾಗಿ ಕುಳಿತುಕೊಳ್ಳಬಹುದು ಎಂದು ಲೋಕಸಭೆ ಸಚಿವಾಲಯ ತಿಳಿಸಿದೆ.
ಉಭಯ ಸದನಗಳ ಜಂಟಿ ಅಧಿವೇಶನದ ಸಂದರ್ಭದಲ್ಲಿ, ಲೋಕಸಭೆಯ ಕೊಠಡಿಯಲ್ಲಿ ಒಟ್ಟು 1,280 ಸದಸ್ಯರಿಗೆ ಅವಕಾಶ ಕಲ್ಪಿಸಬಹುದು. ಪ್ರಧಾನಿಯವರು ಡಿಸೆಂಬರ್ 10, 2020 ರಂದು ಹೊಸ ಸಂಸತ್ತಿನ ಕಟ್ಟಡದ ಶಂಕುಸ್ಥಾಪನೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
Covishield ಲಸಿಕೆಯಿಂದ ಮತ್ತೊಂದು ಸೈಡ್ಎಫೆಕ್ಟ್!
MUST WATCH
ಹೊಸ ಸೇರ್ಪಡೆ
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು
Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ
Ramanagara: ಈಜಲು ಹೋಗಿದ್ದ ಮೂವರು ಮಕ್ಕಳು ನೀರುಪಾಲು
Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ