Gujarat-Chennai ಕ್ವಾಲಿಫೈಯರ್‌ ಕಾದಾಟ:  ಇಂದು ಚೆನ್ನೈ ಅಂಗಳದಲ್ಲಿ ಮೇಲಾಟ

ನಾಳೆ ಲಕ್ನೋ-ಮುಂಬೈ ಎಲಿಮಿನೇಟರ್‌ ಪಂದ್ಯ

Team Udayavani, May 23, 2023, 7:43 AM IST

Gujarat-Chennai ಕ್ವಾಲಿಫೈಯರ್‌ ಕಾದಾಟ:  ಇಂದು ಚೆನ್ನೈ ಅಂಗಳದಲ್ಲಿ ಮೇಲಾಟ

ಚೆನ್ನೈ: ಆರ್‌ಸಿಬಿ ನಿರ್ಗಮನದೊಂದಿಗೆ ಈ ಬಾರಿಯ ಐಪಿಎಲ್‌ ಲೀಗ್‌ ಸ್ಪರ್ಧೆಗೆ ತೆರೆ ಬಿದ್ದಿದೆ. 70 ಪಂದ್ಯಗಳು ರೋಚಕವಾಗಿಯೇ ನಡೆದಿವೆ. ಕ್ರಿಕೆಟ್‌ ಪ್ರೇಮಿಗಳಿಗೆ ಧಾರಾಳ ರಂಜನೆ ಲಭಿಸಿದೆ. ಸೋಮವಾರದ ವಿರಾಮದ ಬಳಿಕ ಪ್ಲೇ ಆಫ್ ಸ್ಪರ್ಧೆ ಗಳು ಕಾವೇರಿಸಿಕೊಳ್ಳಲಿವೆ.

ಲೀಗ್‌ ಹಂತದಲ್ಲಿ ಮೊದಲೆರಡು ಸ್ಥಾನ ಅಲಂಕರಿಸಿದ ಗುಜರಾತ್‌ ಟೈಟಾನ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ಮಂಗಳವಾರ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಸೆಣಸಲಿವೆ. ಗೆದ್ದವರು ನೇರವಾಗಿ ಫೈನಲ್‌ ಪ್ರವೇಶಿಸಲಿದ್ದಾರೆ. ಸೋತವರಿಗೆ ಎಂದಿನಂತೆ ಇನ್ನೊಂದು ಅವಕಾಶವಿದೆ.

ಬುಧವಾರ ಲಕ್ನೋ ಸೂಪರ್‌ ಜೈಂಟ್ಸ್‌ ಮತ್ತು ಮುಂಬೈ ಇಂಡಿಯನ್ಸ್‌ ನಡುವೆ ಎಲಿಮಿನೇಟರ್‌ ಪಂದ್ಯ ಏರ್ಪಡಲಿದೆ. ಇಲ್ಲಿ ಸೋತ ತಂಡ ಕೂಟದಿಂದ ನಿರ್ಗಮಿಸಲಿದೆ. ಈ ಎರಡೂ ಪಂದ್ಯಗಳ ತಾಣ ಚೆನ್ನೈ.

ಗುಜರಾತ್‌ 3-0 ಮುನ್ನಡೆ
ಗುಜರಾತ್‌ ಟೈಟಾನ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ಈ ಸೀಸನ್‌ನ ಉದ್ಘಾಟನ ಪಂದ್ಯದಲ್ಲಿ ಎದು ರಾಗಿದ್ದವು. ಅಹ್ಮದಾಬಾದ್‌ನಲ್ಲಿ ನಡೆದ ಈಮುಖಾಮುಖಿಯಲ್ಲಿ ಗುಜರಾತ್‌ 5 ವಿಕೆಟ್‌ಗಳಿಂದ ಧೋನಿ ಪಡೆಯನ್ನು ಮಗುಚಿತ್ತು. ಇದರೊಂದಿಗೆ ಚೆನ್ನೈ ವಿರುದ್ಧ ಆಡಿದ ಎಲ್ಲ 3 ಪಂದ್ಯ ಗಳಲ್ಲೂ ಜಯ ಸಾಧಿಸಿದ ಹಿರಿಮೆ ಗುಜರಾತ್‌ ತಂಡದ್ದಾಯಿತು. ಇದೀಗ ಪಾಂಡ್ಯ ಪಡೆಯ ವಿರುದ್ಧ ಸೇಡು ತೀರಿಸಿಕೊಳ್ಳಲು ಧೋನಿ ಬಳಗಕ್ಕೆ ಉತ್ತಮ ಅವಕಾಶವೊಂದ ಲಭಿಸಿದೆ. ಪಂದ್ಯ ಚೆನ್ನೈಯಲ್ಲಿ ನಡೆಯುವುದರಿಂದ ಧೋನಿಟೀಮ್‌ಗೆ ಲಾಭವಾದೀತು ಎಂಬು ದೊಂದು ಲೆಕ್ಕಾಚಾರ.

ಚೆನ್ನೈ 14 ಪಂದ್ಯಗಳಲ್ಲಿ ಎಂಟನ್ನು ಗೆದ್ದು ದ್ವಿತೀಯ ಸ್ಥಾನಿಯಾಗಿತ್ತು. ಆದರೆ “ಎಂ.ಎ. ಚಿದಂಬರಂ ಸ್ಟೇಡಿಯಂ’ನಲ್ಲಿ ಮಿಶ್ರ ಫ‌ಲ ಅನುಭವಿಸಿತ್ತು. ಆಡಿದ 7 ಪಂದ್ಯಗಳಲ್ಲಿ ಐದನ್ನು ಗೆದ್ದು ಮೂರರಲ್ಲಿ ಸೋಲನುಭವಿಸಿತ್ತು. ಸತತ 2 ಗೆಲುವು ಸಾಧಿಸಿದ್ದು ಒಮ್ಮೆ ಮಾತ್ರ. ಕೋಲ್ಕತಾ ವಿರುದ್ಧ ಇಲ್ಲಿ ಆಡಿದ ಕೊನೆಯ ಪಂದ್ಯವನ್ನು 6 ವಿಕೆಟ್‌ಗಳಿಂದ ಕಳೆದುಕೊಂಡಿತ್ತು.

ಗುಜರಾತ್‌ ತಂಡ ಚೆನ್ನೈಯಲ್ಲಿ ಆಡುತ್ತಿರುವುದು ಇದೇ ಮೊದಲು. ಹೀಗಾಗಿ “ಎಲ್ಲೋ ಆರ್ಮಿ’ ಫ್ಯಾನ್ಸ್‌ ಸಮ್ಮುಖದಲ್ಲಿ ಪಾಂಡ್ಯ ಪಡೆ ಎಂಥ ಪ್ರದರ್ಶನ ನೀಡಬಹುದು ಎಂಬ ಕುತೂಹಲ ಇದ್ದೇ ಇದೆ.

ಸಮಬಲದ ತಂಡಗಳು
ಮೇಲ್ನೋಟಕ್ಕೆ ಚೆನ್ನೈ ಮತ್ತು ಗುಜರಾತ್‌ ಸಮಬಲದ ತಂಡಗಳಾಗಿ ಗೋಚರಿಸುತ್ತಿವೆ. ಎರಡೂ ತಂಡಗಳ ನಾಯಕತ್ವ ಬಲಿಷ್ಠವಾಗಿದೆ. ಆಯ್ಕೆ ಪ್ರಕ್ರಿಯೆ ಸಮತೋಲನದಿಂದ ಕೂಡಿದೆ. ಕೊನೆಯ ನಿಮಿಷದ ತನಕ ಹೋರಾಡುವ ಕೆಚ್ಚು ಎರಡೂ ತಂಡಗಳ ವೈಶಿಷ್ಟé. ಹೀಗಾಗಿ ಸ್ಪರ್ಧೆ ಅತ್ಯಂತ ರೋಚಕವಾಗಿ ಸಾಗುವುದರಲ್ಲಿ ಅನುಮಾನವಿಲ್ಲ.

ಚೆನ್ನೈ ಆರಂಭಿಕರಾದ ಕಾನ್ವೇ- ಗಾಯಕ್ವಾಡ್‌ ಉತ್ತಮ ಫಾರ್ಮ್ ನಲ್ಲಿದ್ದಾರೆ. ರಹಾನೆ, ದುಬೆ ಮತ್ತಿಬ್ಬರು ಅಪಾಯಕಾರಿ ಆಟಗಾರರು. ದುಬೆ ಈಗಾಗಲೇ 33 ಸಿಕ್ಸರ್‌ ಸಿಡಿಸಿ ಪ್ರಚಂಡ ಫಾರ್ಮ್ ತೆರೆದಿರಿಸಿದ್ದಾರೆ. ಆದರೆ ತಂಡದ ಕೆಳ ಕ್ರಮಾಂಕದ ಬ್ಯಾಟಿಂಗ್‌ ನಿರೀಕ್ಷಿತ ಯಶಸ್ಸು ಕಾಣುತ್ತಿಲ್ಲ. ಅಲಿ, ರಾಯುಡು, ಜಡೇಜ ಮತ್ತು ಧೋನಿ ಸಿಡಿದು ನಿಲ್ಲಬೇಕಾದ ಅಗತ್ಯ ಎಂದಿಗಿಂತ ಹೆಚ್ಚಿದೆ.

ಚೆನ್ನೈ ಬೌಲಿಂಗ್‌ ವೈವಿಧ್ಯಮಯ. ಲಂಕೆಯ ತೀಕ್ಷಣ ಮತ್ತು ಪತಿರಣ ಸೇರಿಕೊಂಡು ಎದುರಾಳಿಯನ್ನು ಕೆಡವಲು ರಣವ್ಯೂಹ ಹೆಣೆಯುವಲ್ಲಿ ನಿಷ್ಣಾತರು. ದೀಪಕ್‌ ಚಹರ್‌, ತುಷಾರ್‌ ದೇಶಪಾಂಡೆ, ಜಡೇಜ ಕೂಡ ಅಪಾಯಕಾರಿ ಆಗಬಲ್ಲರು ಗಿಲ್‌ ಫ್ಯಾಕ್ಟರ್‌ ಸತತ ಎರಡು ಶತಕ ಬಾರಿಸಿ ಪ್ರಚಂಡ ಫಾರ್ಮ್ ಪ್ರದರ್ಶಿಸಿರುವ ಶುಭಮನ್‌ ಗಿಲ್‌ ಗುಜರಾತ್‌ ಪಾಲಿನ ದೊಡ್ಡ ಬ್ಯಾಟಿಂಗ್‌ ಅಸ್ತ್ರವಾಗಿದ್ದಾರೆ. ಆದರೆ ಸಾಹಾ ಇವರಿಗೆ ಅಷ್ಟು ಸೂಕ್ತ ಜತೆಗಾರನಾಗಿಲ್ಲ. ಕಳೆದ ಪಂದ್ಯದಲ್ಲಿ ಆರ್‌ಸಿಬಿಯನ್ನು ಕಾಡಿದ ವಿಜಯ್‌ ಶಂಕರ್‌, ಹಾರ್ದಿಕ್‌ ಪಾಂಡ್ಯ, ಡೇವಿಡ್‌ ಮಿಲ್ಲರ್‌, ಅಭಿನವ್‌ ಮನೋಹಾರ್‌, ಸಾಯಿ ಸುದರ್ಶನ್‌, ರಾಹುಲ್‌ ತೆವಾಟಿಯ, ರಶೀದ್‌ ಖಾನ್‌ ಅವರನ್ನೊಳಗೊಂಡ ಬ್ಯಾಟಿಂಗ್‌ ಸರದಿ ವೈವಿಧ್ಯಮಯ.

ಬೌಲಿಂಗ್‌ ವಿಭಾಗ ಶಮಿ, ರಶೀದ್‌ ಖಾನ್‌ ಮತ್ತು ನೂರ್‌ ಅಹ್ಮದ್‌ ಅವರನ್ನು ನೆಚ್ಚಿಕೊಂಡಿದೆ. ಶಮಿ ಮತ್ತು ರಶೀದ್‌ ಈಗಾಗಲೇ ತಲಾ 24 ವಿಕೆಟ್‌ ಬೇಟೆಯಾಡಿದ್ದಾರೆ. ಮೋಹಿತ್‌ ಶರ್ಮ ಬದಲು ಶಿವಂ ಮಾವಿ, ದಸುನ್‌ ಶಣಕ ಬದಲು ಜೋಶುವ ಲಿಟ್ಲ ಆಡಲಿಳಿಯಬಹುದು.

ಆದರೆ ಚೆನ್ನೈ ಟ್ರ್ಯಾಕ್‌ ಈವರೆಗೆ ಅನಿಶ್ಚಿತವಾಗಿ ವರ್ತಿಸುತ್ತ ಬಂದಿದೆ. ಕೆಲವೊಮ್ಮೆ ಬೌಲರ್‌ಗಳಿಗೆ, ಕೆಲವು ಸಲ ಬ್ಯಾಟರ್‌ಗಳಿಗೆ ನೆರವು ನೀಡಿದೆ. ಕ್ವಾಲಿಫೈಯರ್‌ ಪಂದ್ಯದ ಪಿಚ್‌ ಹೇಗಿ ದ್ದೀತು ಎಂಬ ಕುತೂಹಲ ಸಹಜ.

ಪ್ಲೇ ಆಫ್ ತಂಡಗಳ ಸ್ವಾರಸ್ಯ!
– ಕ್ವಾಲಿಫೈಯರ್‌ನಲ್ಲಿ ಸೆಣಸಲಿರುವ ಚೆನ್ನೈ ತಂಡ ಗುಜರಾತ್‌ ವಿರುದ್ಧ ಆಡಿದ ಎಲ್ಲ ಮೂರು ಪಂದ್ಯಗಳಲ್ಲಿ ಸೋತಿದೆ.
– ಎಲಿಮಿನೇಟರ್‌ನಲ್ಲಿ ಆಡಲಿರುವ ಮುಂಬೈ ತಂಡ ಲಕ್ನೋ ವಿರುದ್ಧ ಎಲ್ಲ ಮೂರು ಪಂದ್ಯಗಳಲ್ಲೂ ಮುಗ್ಗರಿಸಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.