ಭಾರಿ ಗಾಳಿ ಮಳೆಗೆ ಹೊಟೇಲ್ ಮೇಲೆ ಉರುಳಿ ಬಿದ್ದ ಬೃಹತ್ತಾದ ಮರ
ಪ್ರಾಣಾಪಾಯದಿಂದ ಪಾರಾದ ಮಾಲಿಕ
Team Udayavani, May 23, 2023, 9:04 AM IST
ಸಂಕೇಶ್ವರ : ಸೋಮವಾರ ರಾತ್ರಿ ಸುರಿದ ಭಾರಿ ಮಳೆ ಗಾಳಿಗೆ ಬೃಹತ್ ಆಕಾರದ ಮರವೊಂದು ಹೊಟೇಲ್ ಮೇಲೆ ಉರುಳಿ ಬಿದ್ದು ಲಕ್ಷಾಂತರ ರೂ. ಹಾನಿ ಸಂಭವಿಸಿರುವ ಘಟನೆ ಸಂಕೇಶ್ವರ ನಗರದಲ್ಲಿ ನಡೆದಿದೆ. ಮಾಲಿಕ ಓಡಿ ಬಂದು ಬಚಾವಾಗಿದ್ದಾನೆ.
ಸೋಮವಾರ ರಾತ್ರಿ ಬೀಸಿದ ಭಾರೀ ಗಾಳಿ ಮಳೆಗೆ ಸಂಕೇಶ್ವರ ಪಟ್ಟಣದ ಸರಕಾರಿ ಆಸ್ಪತ್ರೆಯ ಬಳಿ ಇದ್ದ ಸಣ್ಣ ಹೊಟೇಲ್ ಮೇಲೆ ಬೃಹತ್ತಾದ ಮರವೊಂದು ಬುಡಸಮೇತವಾಗಿ ಉರುಳಿಬಿದ್ದಿದೆ. ಈ ವೇಳೆ ಹೊಟೇಲ್ ನಲ್ಲಿ ಇದ್ದ ಬಡಪಾಯಿ ಮಾಲಿಕ ಹೊರ ಓಡಿ ಬಂದು ಜೀವ ಉಳಿಸಿಕೊಂಡಿದ್ದಾನೆ.
ಈ ಘಟನೆಯಲ್ಲಿ ಹೊಟೇಲ್ ನಲ್ಲಿ ಇದ್ದ ಫ್ರೀಜ್, ಟೇಬಲ್, ಕುರ್ಚಿ, ಅಡುಗೆ ಸಾಮಗ್ರಿಗಳು ಸೇರಿದಂತೆ ಲಕ್ಷಾಂತರ ರೂ. ಹಾನಿ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D. K. Shivakumar ಕಾಂಗ್ರೆಸ್ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ
Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್
Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ
Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ
Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು