ಬಡತನ: ಮಕ್ಕಳ ಕಾಲಿಗೆ ಚಪ್ಪಲಿಯಂತೆ ಪ್ಲ್ಯಾಸ್ಟಿಕ್‌ ಸುತ್ತಿ ಕೆಲಸಕ್ಕಾಗಿ ಬೀದಿ ಅಲೆದ ತಾಯಿ.!

ಮಕ್ಕಳ ಕಾಲಿಗೆ ಪ್ಲ್ಯಾಸ್ಟಿಕ್‌ ಕವರ್‌ ಗಳನ್ನು ಶೂಗಳಂತೆ ಹಾಕಿದ್ದಾರೆ.

Team Udayavani, May 23, 2023, 3:18 PM IST

tdy-11

ಭೋಪಾಲ್:‌ ಎರಡೂ ಹೊತ್ತಿನ ಊಟಕ್ಕೂ ಪರದಾಡುವ ಬಡತನ ಯಾರಿಗೂ ಬರಬಾರದು. ತಾನು ಹಸಿವಿನಲ್ಲಿದ್ದರೂ, ತನ್ನ ಮಕ್ಕಳಿಗೆ ಒಂದು ಹೊತ್ತಿನ ಊಟವನ್ನಾದರೂ ಎಂಥ ಪರಿಸ್ಥಿತಿಯಲ್ಲೂ ಮಾಡಿ ಹಾಕುವ ಏಕೈಕ ಜೀವವೆಂದರೆ ಅದು ತಾಯಿ ಮಾತ್ರ.

ತನ್ನ ಮೂವರು ಪುಟ್ಟ ಮಕ್ಕಳೊಂದಿಗೆ ಕೆಲಸವನ್ನು ಹುಡುಕುತ್ತಾ ಬೀದಿಯಲ್ಲಿ ಅಲೆಯುತ್ತಿದ್ದ ಮಹಿಳೆಯೊಬ್ಬರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಮಧ್ಯಪ್ರದೇಶದ ಶಿಯೋಪುರದ ಬುಡಕಟ್ಟು ಸಮುದಾಯದ ಮಹಿಳೆಯಾಗಿರುವ ರುಕ್ಮಿಣಿ ಎಂಬಾಕೆ ತನ್ನ ಮೂವರು ಮಕ್ಕಳೊಂದಿಗೆ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಸ್ಥಳೀಯ ಪತ್ರಕರ್ತರೊಬ್ಬರು ಅವರ ಫೋಟೋವೊಂದನ್ನು ಸೆರೆಹಿಡಿದು ಹಂಚಿಕೊಂಡಿದ್ದೀಗ ವೈರಲ್‌ ಆಗಿದೆ.

ರಣಬಿಸಿಲಿನಲ್ಲಿ ತನ್ನ ತಾಯಿಯೊಂದಿಗೆ ಮಕ್ಕಳಿಬ್ಬರು ನಡೆಯುತ್ತಿದ್ದಾರೆ. ಒಂದು ಮಗುವನ್ನು ರುಕ್ಮಿಣಿ ಅವರು ಕೈಯಲ್ಲಿ ಹಿಡಿದುಕೊಂಡಿದ್ದಾರೆ. ಅವರ ಬಡತನ ಸ್ಥಿತಿ ಎಷ್ಟು ಇದೆ ಎಂದರೆ ಮಕ್ಕಳ ಕಾಲಿನಲ್ಲಿ ಚಪ್ಪಲಿಯೂ ಇಲ್ಲ. ಆ ಮಕ್ಕಳಿಗೆ ಬಿಸಿಲಿನ ಬಿಸಿ ತಟ್ಟಬಾರದೆಂದು ತಾಯಿ ರುಕ್ಮಿಣಿ ತಮ್ಮ ಮಕ್ಕಳ ಕಾಲಿಗೆ ಪ್ಲ್ಯಾಸ್ಟಿಕ್‌ ಕವರ್‌ ಗಳನ್ನು ಶೂಗಳಂತೆ ಹಾಕಿದ್ದಾರೆ.

ಇದನ್ನೂ ಓದಿ: VIRAL: ಮದುವೆ ದಿನ ಪರಾರಿಯಾಗಲು ಯತ್ನಿಸಿದ ವರ: 20ಕಿ.ಮೀ ಚೇಸ್‌ ಮಾಡಿ ಮಂಟಪಕ್ಕೆ ಕರೆತಂದ ವಧು

ಪತ್ರಕರ್ತ ಇನ್ಸಾಫ್ ಖುರೈಶಿ ಈ ಬಗ್ಗೆ ರುಕ್ಮಿಣಿ ಅವರ ಬಳಿ ಕೇಳಿದಾಗ “ ನನ್ನ ಪತಿಗೆ ಕ್ಷಯರೋಗವಿದೆ. ಕುಟುಂಬ ಸಾಗಬೇಕು. ಕೆಲಸವನ್ನು ಹುಡುಕುತ್ತಿದ್ದೇನೆ. ಮಕ್ಕಳನ್ನು ಮನೆಯಲ್ಲಿ ಬಿಟ್ಟರೆ ಅವರನ್ನು ನೋಡಿಕೊಳ್ಳಲು ಯಾರೂ ಇಲ್ಲ. ಅದಕ್ಕಾಗಿ ಅವರನ್ನು ಜೊತೆಯಾಗಿ ಹಿಡಿದುಕೊಂಡು ಕೆಲಸವನ್ನು ಹುಡುಕುತ್ತಿದ್ದೇನೆ” ಎಂದಿದ್ದಾರೆ.

ಪತ್ರಕರ್ತ ಇನ್ಸಾಫ್ ಖುರೈಶಿ ಮಕ್ಕಳಿಗೆ ಚಪ್ಪಲಿ ತೆಗೆದುಕೊಳ್ಳಲು ಹಣ ಹಾಗೂ ಸ್ವಲ್ಪ ಆರ್ಥಿಕವಾಗಿ ಸಹಾಯವನ್ನು ಮಾಡಿದ್ದಾರೆ.

ಈ ವಿಚಾರ ಸ್ಥಳೀಯ ಆಡಳಿತಕ್ಕೆ ಗಮನಕ್ಕೆ ಬಂದಿದ್ದು, ಸಂಬಂಧಪಟ್ಟ ಕುಟುಂಬದವರಿಂದ ಮಾಹಿತಿ ಸಂಗ್ರಹಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನು ಕಳುಹಿಸಲಾಗಿದೆ. ಸರ್ಕಾರದ ಯೋಜನೆಗಳ ಗರಿಷ್ಠ ಲಾಭವನ್ನು ಕುಟುಂಬಕ್ಕೆ ನೀಡಲು ಸೂಚನೆಗಳನ್ನು ನೀಡಲಾಗಿದೆ ಎಂದು ಶೆಯೋಪುರ್ ಕಲೆಕ್ಟರ್ ಶಿವಂ ವರ್ಮಾ ಆಜ್ ಇಂಡಿಯಾ ಟುಡೇಗೆ ತಿಳಿಸಿದರು.

ಟಾಪ್ ನ್ಯೂಸ್

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.