ಲೋಕಸಭೆ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಬೇಕು: ಶಾಸಕರಿಗೆ ಸಲಹೆ ನೀಡಿದ DK Shivakumar
Team Udayavani, May 24, 2023, 1:20 PM IST
ಬೆಂಗಳೂರು: ಶಾಸಕಾಂಗ ಸಭೆಯಲ್ಲಿ ಎಲ್ಲಾ ಶಾಸಕರಿಗೆ ಡಿ.ಕೆ.ಶಿವಕುಮಾರ್ ಅವರು ಬುಧವಾರ ಸಲಹೆ ನೀಡಿದ್ದಾರೆ.
ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಿತು.
ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದೇವೆ ಎಂದು ಸುಮ್ಮನೆ ಕೂರುವಂತಿಲ್ಲ, ಮುಂದಿನ ಲೋಕಸಭೆ ಚುನಾವಣೆ ಯಲ್ಲಿ 20 ಸ್ಥಾನ ಗೆಲ್ಲಬೇಕು ಎಂದು ಡಿಕೆ ಶಿವಕುಮಾರ್ ಶಾಸಕರಿಗೆ ಸಲಹೆ ನೀಡಿದ್ದಾರೆಂದು ತಿಳಿದು ಬಂದಿದೆ.
ಇದಷ್ಟೇ ಅಲ್ಲ, ಬಿಬಿಎಂಪಿ ಚುನಾವಣೆಯಲ್ಲೂ ವಿಜಯ ಸಾಧಿಸಬೇಕು. ಜಿಲ್ಲಾ ಸಚಿವರು ಆಗುವವರು ಪ್ರತಿ ಜಿಲ್ಲೆಯಲ್ಲಿ ಹಾಗೂ ಶಾಸಕರು ಪ್ರತಿ ವಿಧಾನಸಭೆ ಕ್ಷೇತ್ರದಲ್ಲೂ ಪಕ್ಷದ ಕಚೇರಿ ಸ್ಥಾಪಿಸಲೇಬೇಕು. ನಮಗೆ ಪಕ್ಷದ ಕಚೇರಿಯೇ ದೇಗುಲ. ಅದಕ್ಕೆ ಮೊದಲ ಆದ್ಯತೆ ನೀಡಬೇಕು ಎಂದರು.
ಎಲ್ಲರಿಗೂ ಅಧಿಕಾರ ಸಿಗದಿರಬಹುದು. ಆದರೆ ನಿಮ್ಮ ಶ್ರಮಕ್ಕೆ ಗೌರವ ಸಿಗುತ್ತದೆ. ಪಕ್ಷದ ಕೆಲಸವನ್ನು ದೇವರ ಕೆಲಸ ಎಂದು ಮಾಡಬೇಕು. ಚುನಾವಣೆಯಲ್ಲಿ ನಿಮ್ಮ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರನ್ನು ಮರೆಯಬಾರದು. ರಾಜ್ಯದ ಜನರಿಗೆ ಸ್ವಚ್ಛ ಆಡಳಿತ ನೀಡಲು ಸಹಕರಿಸಬೇಕು. ಮೈಯೆಲ್ಲಾ ಕಣ್ಣಾಗಿ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ