ನಿವೃತ್ತಿ 8-9 ತಿಂಗಳಲ್ಲಿ ನಿರ್ಧರಿಸುವೆ: Dhoni


Team Udayavani, May 25, 2023, 7:45 AM IST

DHONI

ಚೆನ್ನೈ: ಈ ಋತುವಿನ ಐಪಿಎಲ್‌ಗಾಗಿ ಸುದೀರ್ಘ‌ ಸಮಯದಿಂದ ತಯಾರಿ ನಡೆಸಿರುವುದರಿಂದ ಬಹಳಷ್ಟು ಆಯಾಸಗೊಂಡಿ ದ್ದೇನೆ. ಶ್ರೇಷ್ಠ ನಿರ್ವಹಣೆ ನೀಡುವ ಮೂಲಕ ನಾವೀಗ ಫೈನಲ್‌ ಹಂತಕ್ಕೇರಿದ್ದು ಪ್ರಶಸ್ತಿ ಗೆಲುವಿನ ವಿಶ್ವಾಸದಲ್ಲಿದ್ದೇವೆ. ಮುಂದಿನ ಎಂಟರಿಂದ 9 ತಿಂಗಳ ಒಳಗಾಗಿ ನಿವೃತ್ತಿಯ ಬಗ್ಗೆ ನಿರ್ಧಾರ ಪ್ರಕಟಿ ಸುವೆ ಎಂದು ಚೆನ್ನೈ ತಂಡದ ನಾಯಕ ಮಹೇಂದ್ರ ಸಿಂಗ್‌ ಧೋನಿ ಹೇಳಿದ್ದಾರೆ.

ಮಂಗಳವಾರ ನಡೆದ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಗುಜರಾತ್‌ ಟೈಟಾನ್ಸ್‌ ತಂಡವನ್ನು ಅಧಿಕಾರಯುತ್ತವಾಗಿ ಸೋಲಿಸಿದ ಚೆನ್ನೈ ತಂಡವು ಐಪಿಎಲ್‌ ಕೂಟದ ಫೈನಲಿಗೇರಿದ ಸಾಧನೆ ಮಾಡಿದೆ. ಈ ವರ್ಷವೇ ಧೋನಿ ಅವರು ತಮ್ಮ ಮಹೋನ್ನತ ಕ್ರಿಕೆಟ್‌ ಬಾಳ್ವೆಯಿಂದ ನಿವೃತ್ತಿಯಾಗುವ ಸಾಧ್ಯತೆಯಿದೆ ಎಂಬ ಊಹಾಪೋಹಗಳೂ ಇವೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಧೋನಿ ನಿವೃತ್ತಿಗೆ ಬಹಳಷ್ಟು ಸಮಯವಿದೆ ಎಂದು ತಿಳಿಸಿದ್ದಾರೆ.

ಐಪಿಎಲ್‌ನಿಂದ ಬಹಳಷ್ಟು ಆಯಾಸಗೊಂಡಿ ದ್ದೇನೆ. ಕಳೆದ ನಾಲ್ಕು ತಿಂಗಳಿಂದ ಮನೆಯಿಂದ ಹೊರಗಿದ್ದೇನೆ ಎಂದು ಚಿಪಾಕ್‌ನಲ್ಲಿ ಗೆದ್ದ ಬಳಿಕ ಧೋನಿ ತಿಳಿಸಿದರು. ನಾನು ಇಲ್ಲಿಗೆ ಯಾವಾಗಲೂ ಬರುತ್ತಿದ್ದೇನೆ. ಕಳೆದ ಜನವರಿಯಿಂದ ನಾನು ಮನೆಯಿಂದ ಹೊರಗಿದ್ದೇನೆ. ಕಳೆದ ಮಾರ್ಚ್‌ನಲ್ಲಿ ನಿರಂತರ ಅಭ್ಯಾಸದಲ್ಲಿ ತೊಡಗಿದ್ದೇನೆ. ಅಭ್ಯಾಸದ ಜತೆ ಪಂದ್ಯಗಳಲ್ಲಿ ಆಡುವುದಕ್ಕೆ ಗಮನ ನೀಡುತ್ತಿದ್ದೆ. ಹಾಗಾಗಿ ಏನಾಗುತ್ತದೆ ಎಂಬುದನ್ನು ನೋಡುವ ಎಂದವರು ಹೇಳಿದರು.

“ಜನವರಿ 31ಕ್ಕೆ ನಾನು ಮನೆಯಿಂದ ಹೊರಬಂದಿದ್ದೇನೆ. ನನ್ನ ಕೆಲಸವನ್ನು ಮುಗಿಸಿ ಮಾರ್ಚ್‌ 2ರಿಂದ ಐಪಿಎಲ್‌ಗಾಗಿ ಅಭ್ಯಾಸ ಮಾಡಲು ಪ್ರಾರಂಭಿಸಿದೆ. ನಿವೃತ್ತಿಯ ಬಗ್ಗೆ ನಿರ್ಧ ರಿಸಲು ಸಾಕಷ್ಟು ಸಮಯವಿದೆ. ನನಗೆ ಗೊತ್ತಿಲ್ಲ. ನನಗೆ ನಿರ್ಧರಿಸಲು 8-9 ತಿಂಗಳಿವೆ. ಈಗ ಆ ತಲೆನೋವು ಏಕೆ ತೆಗೆದುಕೊಳ್ಳಬೇಕು. ನನಗೆ ನಿರ್ಧರಿಸಲು ಸಾಕಷ್ಟು ಸಮಯವಿದೆ. ಹರಾಜು ಡಿಸೆಂಬರ್‌ನಲ್ಲಿದೆ ಎಂದು ಧೋನಿ ತಿಳಿಸಿದರು.

ಸಂಘಟಿತ ಪ್ರಯತ್ನ
ಐಪಿಎಲ್‌ನಲ್ಲಿ ಫೈನಲ್‌ ಹಂತಕ್ಕೇರುವುದು ಅಷ್ಟೊಂದು ಸುಲಭದ ಮಾತಲ್ಲ. ಹತ್ತು ಬಲಿಷ್ಠ ತಂಡಗಳ ಜತೆ ಸಂಘರ್ಷಪೂರ್ಣ ಹೋರಾಟವು ಸುಮಾರು ಎರಡು ತಿಂಗವರೆಗೆ ಸಾಗಿದೆ. ತಂಡದ ಎಲ್ಲರ ಸಂಘಟಿತ ಪ್ರಯತ್ನದಿಂದ ನಾವು ಈ ಹಂತಕ್ಕೇರಲು ಸಾಧ್ಯ ವಾಗಿದೆ. ಅಗ್ರ ಕ್ರಮಾಂಕದ ಆಟಗಾರರು ಅಮೋಘವಾಗಿ ಆಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಆಟಗಾರರಿಗೆ ಹೆಚ್ಚಿನ ಅವಕಾಶ ಸಿಕ್ಕಿಲ್ಲ ಎಂದು ಧೋನಿ ಹೇಳಿದರು.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.