‘ರೋಹಿಣಿ ಒಲಿದರೆ ಬಾಳೇ ಬಂಗಾರ’: ಮುಂಗಾರು ಪೂರ್ವ ಬಿತ್ತನೆ ಚಟುವಟಿಕೆ ಆರಂಭ
Team Udayavani, May 25, 2023, 5:26 PM IST
ರಬಕವಿ-ಬನಹಟ್ಟಿ : ಮುಂಬರುವ ಮಳೆಯನ್ನು ನಂಬಿ ರಬಕವಿ-ಬನಹಟ್ಟಿ ತಾಲೂಕಿನಾದ್ಯಂತ ರೈತರು ಮುಂಗಾರು ಬಿತ್ತನೆಗೆ ಭರದ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಭೂಮಿ ಹದಗೊಳಿಸುವ ಜೊತೆಗೆ ಕೃಷಿ ಪರಿಕರಗಳ ತಯಾರಿಕೆಯಲ್ಲಿ ನಿರತರಾಗಿದ್ದಾರೆ.
ರೈತರ ನಂಬಿಗಸ್ತ ಮಳೆ ರೋಹಿಣಿ ಇದೇ 25 ರಿಂದ ಪ್ರಾರಂಭವಾಗುತ್ತಿದ್ದು, ಈ ರೋಹಿಣಿ ಮಳೆ ಕೈ ಹಿಡಿದರೆ ಬದುಕು ಬಂಗಾರವಾಗುತ್ತದೆ ಎಂಬ ಆಸೆಯಿಂದ ರೈತ ಕುಳಿತ್ತಿದ್ದು, ಪ್ರತಿ ಬಾರಿಯೂ ಮಳೆಗಾಗಿ ಕಾಯುವ ರೈತರು ಬಿತ್ತನೆ ಬೀಜವನ್ನಿಟ್ಟುಕೊಂಡು ಆಕಾಶದತ್ತ ಮುಖ ಮಾಡಿರುವುದು ಸರ್ವೇ ಸಾಮಾನ್ಯ. ಈ ಬಾರಿ ಪೂರ್ವ ಬಾವಿಯಾಗಿ ಉತ್ತಮ ಮಳೆಯಾಗಿದ್ದು, ರೈತರು ಬಿತ್ತನೆಗೆ ಬೇಕಾದ ಕುಂಟೆ, ಪಲಗಾ, ಕೂರಿಗೆ, ನೊಗ, ಬುಕ್ಕಾ ಸಿದ್ಧತೆಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬಡಿಗೇರ ಹಾಗೂ ಕಮ್ಮಾರರ ಬಳಿ ತಮ್ಮ ಪರಿಕರಗಳ ದುರಸ್ಥಿ ಮಾಡಿಸಿಕೊಂಡು ಬಿತ್ತನೆಗೆ ಸಿದ್ಧವಾಗಿದ್ದಾರೆ. ಕೆಲವು ಭಾಗ ಕೃಷ್ಣಾ ನದಿಯ ನೀರನ್ನು ಅವಲಂಭಿಸಿದರೆ ಕೆಲವು ಬಾಗ ಮಳೆ ಹಾಗೂ ಘಟಪ್ರಭಾ ಎಡದಂಡೆ ಕಾಲುವೆಯನ್ನು ಅವಲಂಭಿಸಿದ್ದಾರೆ.
ಮುಂಬರುವ ಮಳೆಯನ್ನು ನಂಬಿ ಈ ಭಾಗದ ರೈತರ ಮುಂಗಾರು ಪೂರ್ವ ಬಿತ್ತನೆ ಚಟುವಟಿಕೆಗಳನ್ನು ಭರದಿಂದ ನಡೆಸಿದ್ದಾರೆ. ಈ ಭಾಗದಲ್ಲಿ ಮುಂಗಾರು ಮುನ್ನಿರೀಕ್ಷೆಯನ್ನಿಟ್ಟುಕೊಂಡು ಮುಂಗಾರು ಬೆಳೆಗಳಾದ ದ್ವಿದಳ ದಾನ್ಯಗಳಾದ ಸೋಯಾಬೀನ್, ಬೆಳೆ, ಉದ್ದು, ಹೆಸರು, ಮಡಿಕೆಕಾಳು ಸೇರಿದಂತೆ ವಿವಿಧ ಬೆಳೆಗಳ ಜೊತೆ ವಾಣಿಜ್ಯ ಬೆಳೆಗಳಾದ ಕಬ್ಬು ಹಾಗೂ ಅರಿಷಿಣ ಬಿತ್ತನೆ ಮಾಡಲು ರೈತರು ತಮ್ಮ ಚಟುವಟಿಕೆಗಳನ್ನು ಪ್ರಾರಂಭಿಸಿದ್ದಾರೆ.
ಕೂಲಿ ಕಾರ್ಮಿಕರ ಕೊರತೆ: ಪ್ರತಿ ವರ್ಷದಂತೆ ಈ ಬಾರಿಯೂ ಕೃಷಿ ಕೂಲಿ ಕಾರ್ಮಿಕರ ಕೊರತೆ ಕಂಡುಬಂದಿದೆ. ಕೃಷಿ ವೃತ್ತಿಯನ್ನು ಮಾಡುವವರ ಸಂಖ್ಯೆ ಕ್ಷೀಣಿಸುತ್ತಿದೆ. ಇದರಿಂದ ರೈತರು ಬಹುತೇಕ ಕೃಷಿ ಯಂತ್ರಗಳತ್ತ ಮುಖ ಮಾಡಿದ್ದಾರೆ. ಕೃಷಿಯಲ್ಲಿ ಆಧುನಿಕತೆ ಅಳವಡಿಸಿಕೊಂಡು ಕೂಲಿ ಕಾರ್ಮಿಕರ ಕೊರತೆಯ ನಡುವೆಯೂ ಉತ್ತಮ ಬೆಳೆ ತೆಗೆಯಬಹುದು ಎಂದು ತೋರಿಸಿಕೊಟ್ಟಿದ್ದಾರೆ ಇತ್ತೀಚಿಗೆ ಯಾಂತ್ರಿಕ ಕೃಷಿ ಪದ್ದತಿಯನ್ನು ಪ್ರತಿ ಗ್ರಾಮದಲ್ಲಿ ಅಳವಡಿಸಿಕೊಂಡಿರುವುದನ್ನು ಕಾಣಬಹುದಾಗಿದೆ.
ಸಲಕರಣೆ ಬಾಡಿಗೆ: ಭೂಮಿ ಉಳುಮೆಗೆ ಟ್ರ್ಯಾಕ್ಟರ್ ಹಾಗೂ ಎತ್ತುಗಳಿಗೆ ಭಾರಿ ಬೇಡಿಕೆ ಬಂದಿದೆ. ಟ್ರ್ಯಾಕ್ಟರ್ ಉಳುಮೆ ಮಾಡಲು ಎಕರೆಗೆ 2100ರೂ. ಹಾಗೂ ಎತ್ತುಗಳ ಉಳುಮೆಗೆ ಒಂದು ಎಕರೆ 1600 ರೂ.ಗಳಷ್ಟು ಬೇಡಿಕೆ ಇದೆ. ಒಂದು ಎಕರೆ ನೆಲ ರೆಡಿ ಮಾಡಲು ಸುಮಾರು 7000 ರಿಂದ 8000 ರೂ ವರೆಗೆ ಬಾಡಿಗೆ ಆಗುತ್ತದೆ.
ರೈತರು ಸದ್ಯ ರೈತರು ರೋಹಿಣಿ ಮಳೆ ನಿರೀಕ್ಷೆಯಲ್ಲಿದ್ದು ಮಳೆ ಸಮೃದ್ದಿಯಾಗಿ ಬಂದರೆ ರೈತನ ಬದುಕು ಬಂಗಾರವಾಗುವುದರಲ್ಲಿ ಎರಡು ಮಾತಿಲ್ಲ. ಈ ಸಂದರ್ಬದಲ್ಲಿ ಯಾವುದೇ ಬಿತ್ತನೆ ಮಾಡಿದರೂ ಬರುವ ರೋಗಗಳು ಕಡಿಮೆ, ಬೆಳೆ ಸಮೃದ್ಧಿಯಾಗಿ ಬರುತ್ತದೆ.
-ಸದಾಶಿವ ಬಂಗಿ, ಸಾವಯವ ಕೃಷಿಕರು ಜಗದಾಳ
– ಕಿರಣ ಶ್ರೀಶೈಲ ಆಳಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ