ಕಾಪು: ಸ್ಕೂಟರ್ಗೆ ಕಾರು ಢಿಕ್ಕಿ; ಸವಾರ ಗಂಭೀರ
Team Udayavani, May 26, 2023, 6:30 AM IST
ಕಾಪು: ಸಂಬಂಧಿಕರ ಉಪನಯನ ಕಾರ್ಯಕ್ರಮಕ್ಕೆ ಆಗಮಿಸಿ ವಾಪಸಾಗುತ್ತಿದ್ದ ಸ್ಕೂಟರ್ಗೆ ಕಾರು ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಕಾಪು ಕೆ1 ಹೊಟೇಲ್ ಜಂಕ್ಷನ್ ಬಳಿ ಮೇ 24ರಂದು ನಡೆದಿದೆ.
ಕುಂದಾಪುರ ಹಂಗಳೂರು ನಿವಾಸಿ ಮಂಜಯ್ಯ ಆಚಾರ್ (73) ಗಾಯಾಳು ಸ್ಕೂಟರ್ ಸವಾರ. ಕಾಪುವಿನ ಕಾಳಿಕಾಂಬಾ ದೇವಸ್ಥಾನಕ್ಕೆ ಸಂಬಂಧಿಕರ ಉಪನಯನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಂಜಯ್ಯ ಆಚಾರ್ ಅವರು ಕಾರ್ಯಕ್ರಮ ಮುಗಿಸಿ ತನ್ನ ಸ್ಕೂಟರಿನಲ್ಲಿ ತ್ರಾಸಿ ಕಡೆಗೆ ಹೋಗಲು ಕಾಪು ಪೇಟೆಯಿಂದ ಕೆ1 ಹೋಟೆಲ್ ಜಂಕ್ಷನ್ ಬಳಿ ಡೈವರ್ಶನ್ ಮೂಲಕ ಮಂಗಳೂರು – ಉಡುಪಿ ರಾಷ್ಟೀಯ ಹೆದ್ದಾರಿಗೆ ಬಂದಿದ್ದು, ಈ ವೇಳೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರು ಸ್ಕೂಟರ್ಗೆ ಢಿಕ್ಕಿ ಹೊಡೆದಿದೆ.
ಕಾರು-ಸ್ಕೂಟರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಮಂಜಯ್ಯ ಆಚಾರ್ ರಸ್ತೆಗೆ ಬಿದ್ದು ತಲೆಗೆ ತೀವ್ರ ರಕ್ತ ಗಾಯ ಹಾಗೂ ಕೈ, ಕಾಲು ಮೈಗೆ ತರಚಿದ ಗಾಯ ಆಗಿದೆ. ಗಾಯಾಳುವನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆಟೋ ಚಾಲಕಿಯರ ಬ್ಯಾಂಕ್ ಸಾಲ ತೀರಿಸಿ ರಿಯಲ್ ಲೈಫ್ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್
Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ
Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ
Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ
Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ