BJP Tender; ಬಿಜೆಪಿಗೆ ಶಾಕ್ 2.0: 20ಸಾವಿರ ಕೋ.ರೂ. ಮೊತ್ತದ ಟೆಂಡರ್ ರದ್ದು…
ಸಿಎಂ ಸಿದ್ದರಾಮಯ್ಯನವರಿಂದಲೇ ಆದೇಶ
Team Udayavani, May 26, 2023, 8:10 AM IST
ಬೆಂಗಳೂರು: ಅಧಿಕಾರ ಕಳೆದುಕೊಂಡಿರುವ ಬಿಜೆಪಿಗೆ ರಾಜ್ಯದ ಕಾಂಗ್ರೆಸ್ ಸರಕಾರ ಮತ್ತೂಂದು ಶಾಕ್ ನೀಡಿದೆ. ಹಿಂದಿನ ಅವಧಿಯಲ್ಲಿ ಹಣಕಾಸಿನ ಸೂಕ್ತ ಅನುದಾನವಿಲ್ಲದೆ ನಿಯಮಗಳನ್ನು ಉಲ್ಲಂಘಿಸಿ ಸುಮಾರು 20 ಸಾವಿರ ಕೋಟಿ ರೂ. ಮೊತ್ತದ ಟೆಂಡರ್ಗಳನ್ನು ಕರೆದಿದೆ ಎಂದು ಆರೋಪಿಸಿ, ಅವುಗಳೆಲ್ಲವನ್ನೂ ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಿದೆ.
ದಿನಗಳ ಹಿಂದಷ್ಟೇ ಬಿಜೆಪಿ ಸರಕಾರ ಆದೇಶಿಸಿದ್ದ ಎಲ್ಲ ಇಲಾಖೆಗಳ ಮತ್ತು ಅವುಗಳ ಅಧೀನಕ್ಕೊಳಪಡುವ ನಿಗಮ/ ಮಂಡಳಿ/ ಪ್ರಾಧಿಕಾರಗಳ ಕಾಮಗಾರಿಗಳಿಗೆ ಸಂಬಂಧಿಸಿದ ಎಲ್ಲ ಬಿಲ್ ಪಾವತಿಗಳನ್ನು ಸ್ಥಗಿತಗೊಳಿಸಲು ಸೂಚನೆ ನೀಡಲಾಗಿತ್ತು. ಪ್ರಾರಂಭವಾಗದಿರುವ ಎಲ್ಲ ಕಾಮಗಾರಿಗಳನ್ನೂ ತಡೆಹಿಡಿಯಲು ಆದೇಶಿಸಲಾಗಿತ್ತು. ಈಗ ಆ ಇಲಾಖೆಗಳು ಯಾವುವು, ವಿವಿಧ ಟೆಂಡರ್ಗಳ ಒಟ್ಟಾರೆ ಮೊತ್ತ ಎಷ್ಟು ಎಂಬುದನ್ನು ಸ್ವತಃ ಸರಕಾರ ತನ್ನ ಆದೇಶದಲ್ಲಿ ತಿಳಿಸಿದೆ.
20 ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಟೆಂಡರ್ ಕರೆಯುವಾಗ ಅನುಮೋದನೆ ಅಗತ್ಯ. ಹಣಕಾಸು ಮತ್ತು ಭೂಸ್ವಾಧೀನ ತೊಂದರೆಯಿದ್ದರೂ ತರಾತುರಿಯಲ್ಲಿ ಕರೆಯಲಾಗಿದ್ದು, ಟೆಂಡರ್ ನಿಯಮಗಳನ್ನೂ ಉಲ್ಲಂಘಿಸಲಾಗಿದೆ. ಈ ಕಾಮಗಾರಿ ಅವೈಜ್ಞಾನಿಕವಾಗಿವೆ ಎಂದು ವ್ಯಾಪಕ ದೂರುಗಳು ಬಂದಿವೆ. ಜತೆಗೆ ಕೆಲವು ಕಾಮಗಾರಿಗಳಲ್ಲಿ ವ್ಯಾಪಕ ಅಕ್ರಮಗಳು ನಡೆದಿರುವ ಬಗ್ಗೆಯೂ ಆರೋಪಗಳು ಕೇಳಿಬರುತ್ತಿವೆ.
ಈ ಹಿನ್ನೆಲೆಯಲ್ಲಿ ಟೆಂಡರ್ ಕಾಮಗಾರಿಗಳ ಸೂಕ್ತ ಪರಿಶೀಲನೆ ನಡೆಸಬೇಕಿರುವುದರಿಂದ ಈವರೆಗೆ ಆರಂಭವಾಗಿರದ ಕಾಮಗಾರಿಗಳನ್ನು ಕೂಡಲೇ ಸ್ಥಗಿತಗೊಳಿಸಬೇಕು. ಈಗಾಗಲೇ ಕರೆದಿರುವ ಟೆಂಡರ್ಗಳನ್ನು ರದ್ದುಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಬಿಜೆಪಿ ಸರಕಾರ ತರಾತುರಿಯಲ್ಲಿ ನೀಡಿದ ಟೆಂಡರ್ ಕಾಮಗಾರಿಗಳನ್ನು ರದ್ದು ಪಡಿಸಲಾಗುವುದು. ಅಕ್ರಮ ಟೆಂಡರ್ಗಳ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕಾಂಗ್ರೆಸ್ ಚುನಾವಣ ಪ್ರಚಾರದ ವೇಳೆ ಕೂಡ ಹೇಳಿತ್ತು. ಈಗ ಆದ್ಯತೆ ಮೇರೆಗೆ ಟೆಂಡರ್ಗಳಿಗೆ ಬ್ರೇಕ್ ಹಾಕಿದೆ.
ಪ್ರಮುಖ ನಿಗಮಗಳೂ ಇವೆ
ವಿಶ್ವೇಶ್ವರಯ್ಯ ಜಲ ನಿಗಮ (ವಿಜೆಎನ್ಎಲ್), ಕೃಷ್ಣಾ ಭಾಗ್ಯ ಜಲ ನಿಗಮ (ಕೆಬಿಜೆಎನ್ಎಲ್) ಸೇರಿದಂತೆ ನೀರಾವರಿ, ಇಂಧನ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್, ಜಲಜೀವನ್ ಮಿಷನ್ ಸೇರಿದಂತೆ ನೂರಾರು ಕಾಮಗಾರಿಗಳಿಗೆ ತರಾತುರಿಯಲ್ಲಿ ಟೆಂಡರ್ ಆಹ್ವಾನಿಸಲಾಗಿತ್ತು. ಇವುಗಳ ಮೊತ್ತ 20 ಸಾವಿರ ಕೋಟಿ ರೂ. ಆಗುತ್ತದೆ ಎಂದು ಅಂದಾಜಿಸಿದೆ. ಇವ್ಯಾವುದಕ್ಕೂ ಹಣಕಾಸಿನ ಸೂಕ್ತ ಅನುದಾನವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶದಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…
LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ
MUST WATCH
ಹೊಸ ಸೇರ್ಪಡೆ
Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ
950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ
Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು
Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ
Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ